ಗುಜರಾತ್ ಮೋರ್ಬಿ ಸೇತುವೆಯನ್ನು ದುರಸ್ತಿ ಮಾಡಿದ ಸಂಸ್ಥೆಯ ಇಬ್ಬರು ವ್ಯವಸ್ಥಾಪಕರು ಸೇರಿದಂತೆ ಒಂಬತ್ತು ಮಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಓರೆವಾ ಗ್ರೂಪ್ಗೆ ಸೇತುವೆಯ ನವೀಕರಣ ಮತ್ತು ಕಾರ್ಯಾಚರಣೆಯ ಗುತ್ತಿಗೆಯನ್ನು ನೀಡಲಾಗಿತ್ತು.
141 ಮಂದಿಯನ್ನು ಬಲಿ ಪಡೆದ ಗುಜರಾತ್ನ ಮೊರ್ಬಿಯ ತೂಗು ಸೇತುವೆಯನ್ನು ನವೀಕರಿಸಿದ್ದ ಕಂಪನಿಯ ಇಬ್ಬರು ಸಿಬ್ಬಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಫಿಟ್ನೆಸ್ ಪ್ರಮಾಣಪತ್ರ ಪಡೆಯದೆ ಮತ್ತು ಅವಧಿಗೂ ಮುನ್ನವೇ ಸೇತುವೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ ಎಂಬ ಆರೋಪಗಳು ಒರೆವಾ ವಿರುದ್ಧ ಕೇಳಿಬಂದಿವೆ.ದುರಂತಕ್ಕೆ ಸಂಬಂಧಿಸಿಂತೆ ಇದು ಮೊದಲ ಬಂಧನವಾಗಿದ್ದು, ಸೇತುವೆಯನ್ನು ನವೀಕರಿಸಿದ ಒರೆವಾ ಕಂಪನಿಯ ಇಬ್ಬರು ಸಿಬ್ಬಂದಿಗಳನ್ನು ಬಂಧಿಸಲಾಗಿದೆ. ಅವರು ಒರೆವಾ ಕಂಪನಿಯ ಮಧ್ಯಮ ಮಟ್ಟದ ಉದ್ಯೋಗಿಗಳು ಎಂದು ಮೂಲಗಳು ತಿಳಿಸಿವೆ.
ಸುಮಾರು 150 ವರ್ಷಗಳಷ್ಟು ಹಳೆಯದಾದ ಸೇತುವೆಯನ್ನು ನವೀಕರಿಸಿದ ಖಾಸಗಿ ಕಂಪನಿಯು, ಹೊಸ ತಂತ್ರಜ್ಞಾನಗಳೊಂದಿಗೆ ಮುಂದಿನ ಹತ್ತು ವರ್ಷಗಳಿಗೆ ಸುರಕ್ಷತೆಯ ಆಧಾರದಲ್ಲಿ ನಿರ್ಮಿಸಿತ್ತು. ಇದಕ್ಕಾಗಿ ಸುಮಾರು 2 ಕೋಟಿ ರೂಪಾಯಿ ವ್ಯಯಿಸಲಾಯಿತ್ತು. ಈ ಸೇತುವೆ ನವೀಕರಿಸಿದ ಒರೆವಾ ಸಮೂಹದ ವ್ಯವಸ್ಥಾಪಕ ನಿರ್ದೇಶಕರು ಅಕ್ಟೋಬರ್ 24 ರಂದು ಪತ್ರಿಕಾಗೋಷ್ಠಿ ನಡೆಸಿ ಮುಂದಿನ ಹತ್ತು ವರ್ಷಗಳ ಅವಧಿಗೆ ಯಾವುದೇ ಸಮಸ್ಯೆ ಇಲ್ಲ ಎಂದೂ ಹೇಳಿದ್ದರು. ಏಳು ತಿಂಗಳ ನವೀಕರಣ ಕಾರ್ಯದ ನಂತರ ಸೇತುವೆಯನ್ನು ಅಧಿಕೃತವಾಗಿ ಪುನಃ ತೆರೆಯಲಾಗಿತ್ತು.
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…