Advertisement
ಸುದ್ದಿಗಳು

ಗುಜರಾತ್‌ ಸೇತುವೆ ದುರಂತ | ಒಟ್ಟು 9 ಮಂದಿ ಬಂಧನ | 2 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನವೀಕರಿಸಿದ ಸಂಸ್ಥೆಯ ವ್ಯವಸ್ಥಾಪಕ ಸಹಿತ ಹಲವರು ಬಂಧನ |

Share

ಗುಜರಾತ್‌ ಮೋರ್ಬಿ ಸೇತುವೆಯನ್ನು ದುರಸ್ತಿ ಮಾಡಿದ ಸಂಸ್ಥೆಯ ಇಬ್ಬರು ವ್ಯವಸ್ಥಾಪಕರು ಸೇರಿದಂತೆ ಒಂಬತ್ತು ಮಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಓರೆವಾ ಗ್ರೂಪ್‌ಗೆ ಸೇತುವೆಯ ನವೀಕರಣ ಮತ್ತು ಕಾರ್ಯಾಚರಣೆಯ ಗುತ್ತಿಗೆಯನ್ನು ನೀಡಲಾಗಿತ್ತು.

141 ಮಂದಿಯನ್ನು ಬಲಿ ಪಡೆದ ಗುಜರಾತ್​ನ ಮೊರ್ಬಿಯ ತೂಗು ಸೇತುವೆಯನ್ನು ನವೀಕರಿಸಿದ್ದ ಕಂಪನಿಯ ಇಬ್ಬರು ಸಿಬ್ಬಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಫಿಟ್‌ನೆಸ್ ಪ್ರಮಾಣಪತ್ರ ಪಡೆಯದೆ ಮತ್ತು ಅವಧಿಗೂ ಮುನ್ನವೇ ಸೇತುವೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ ಎಂಬ ಆರೋಪಗಳು ಒರೆವಾ ವಿರುದ್ಧ ಕೇಳಿಬಂದಿವೆ.ದುರಂತಕ್ಕೆ ಸಂಬಂಧಿಸಿಂತೆ ಇದು ಮೊದಲ ಬಂಧನವಾಗಿದ್ದು, ಸೇತುವೆಯನ್ನು ನವೀಕರಿಸಿದ ಒರೆವಾ ಕಂಪನಿಯ ಇಬ್ಬರು ಸಿಬ್ಬಂದಿಗಳನ್ನು ಬಂಧಿಸಲಾಗಿದೆ. ಅವರು ಒರೆವಾ ಕಂಪನಿಯ ಮಧ್ಯಮ ಮಟ್ಟದ ಉದ್ಯೋಗಿಗಳು ಎಂದು ಮೂಲಗಳು ತಿಳಿಸಿವೆ.

ಸುಮಾರು 150 ವರ್ಷಗಳಷ್ಟು ಹಳೆಯದಾದ ಸೇತುವೆಯನ್ನು ನವೀಕರಿಸಿದ ಖಾಸಗಿ ಕಂಪನಿಯು, ಹೊಸ ತಂತ್ರಜ್ಞಾನಗಳೊಂದಿಗೆ ಮುಂದಿನ ಹತ್ತು ವರ್ಷಗಳಿಗೆ ಸುರಕ್ಷತೆಯ ಆಧಾರದಲ್ಲಿ ನಿರ್ಮಿಸಿತ್ತು. ಇದಕ್ಕಾಗಿ ಸುಮಾರು 2 ಕೋಟಿ ರೂಪಾಯಿ ವ್ಯಯಿಸಲಾಯಿತ್ತು. ಈ ಸೇತುವೆ ನವೀಕರಿಸಿದ ಒರೆವಾ ಸಮೂಹದ ವ್ಯವಸ್ಥಾಪಕ ನಿರ್ದೇಶಕರು ಅಕ್ಟೋಬರ್ 24 ರಂದು ಪತ್ರಿಕಾಗೋಷ್ಠಿ ನಡೆಸಿ ಮುಂದಿನ ಹತ್ತು ವರ್ಷಗಳ ಅವಧಿಗೆ ಯಾವುದೇ ಸಮಸ್ಯೆ ಇಲ್ಲ ಎಂದೂ ಹೇಳಿದ್ದರು. ಏಳು ತಿಂಗಳ ನವೀಕರಣ ಕಾರ್ಯದ ನಂತರ ಸೇತುವೆಯನ್ನು ಅಧಿಕೃತವಾಗಿ ಪುನಃ ತೆರೆಯಲಾಗಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

11 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

11 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

16 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

17 hours ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

2 days ago