Advertisement
ಸುದ್ದಿಗಳು

ಗುಜರಾತ್‌ ಸೇತುವೆ ದುರಂತ | ಒಟ್ಟು 9 ಮಂದಿ ಬಂಧನ | 2 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನವೀಕರಿಸಿದ ಸಂಸ್ಥೆಯ ವ್ಯವಸ್ಥಾಪಕ ಸಹಿತ ಹಲವರು ಬಂಧನ |

Share

ಗುಜರಾತ್‌ ಮೋರ್ಬಿ ಸೇತುವೆಯನ್ನು ದುರಸ್ತಿ ಮಾಡಿದ ಸಂಸ್ಥೆಯ ಇಬ್ಬರು ವ್ಯವಸ್ಥಾಪಕರು ಸೇರಿದಂತೆ ಒಂಬತ್ತು ಮಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಓರೆವಾ ಗ್ರೂಪ್‌ಗೆ ಸೇತುವೆಯ ನವೀಕರಣ ಮತ್ತು ಕಾರ್ಯಾಚರಣೆಯ ಗುತ್ತಿಗೆಯನ್ನು ನೀಡಲಾಗಿತ್ತು.

141 ಮಂದಿಯನ್ನು ಬಲಿ ಪಡೆದ ಗುಜರಾತ್​ನ ಮೊರ್ಬಿಯ ತೂಗು ಸೇತುವೆಯನ್ನು ನವೀಕರಿಸಿದ್ದ ಕಂಪನಿಯ ಇಬ್ಬರು ಸಿಬ್ಬಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಫಿಟ್‌ನೆಸ್ ಪ್ರಮಾಣಪತ್ರ ಪಡೆಯದೆ ಮತ್ತು ಅವಧಿಗೂ ಮುನ್ನವೇ ಸೇತುವೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ ಎಂಬ ಆರೋಪಗಳು ಒರೆವಾ ವಿರುದ್ಧ ಕೇಳಿಬಂದಿವೆ.ದುರಂತಕ್ಕೆ ಸಂಬಂಧಿಸಿಂತೆ ಇದು ಮೊದಲ ಬಂಧನವಾಗಿದ್ದು, ಸೇತುವೆಯನ್ನು ನವೀಕರಿಸಿದ ಒರೆವಾ ಕಂಪನಿಯ ಇಬ್ಬರು ಸಿಬ್ಬಂದಿಗಳನ್ನು ಬಂಧಿಸಲಾಗಿದೆ. ಅವರು ಒರೆವಾ ಕಂಪನಿಯ ಮಧ್ಯಮ ಮಟ್ಟದ ಉದ್ಯೋಗಿಗಳು ಎಂದು ಮೂಲಗಳು ತಿಳಿಸಿವೆ.

ಸುಮಾರು 150 ವರ್ಷಗಳಷ್ಟು ಹಳೆಯದಾದ ಸೇತುವೆಯನ್ನು ನವೀಕರಿಸಿದ ಖಾಸಗಿ ಕಂಪನಿಯು, ಹೊಸ ತಂತ್ರಜ್ಞಾನಗಳೊಂದಿಗೆ ಮುಂದಿನ ಹತ್ತು ವರ್ಷಗಳಿಗೆ ಸುರಕ್ಷತೆಯ ಆಧಾರದಲ್ಲಿ ನಿರ್ಮಿಸಿತ್ತು. ಇದಕ್ಕಾಗಿ ಸುಮಾರು 2 ಕೋಟಿ ರೂಪಾಯಿ ವ್ಯಯಿಸಲಾಯಿತ್ತು. ಈ ಸೇತುವೆ ನವೀಕರಿಸಿದ ಒರೆವಾ ಸಮೂಹದ ವ್ಯವಸ್ಥಾಪಕ ನಿರ್ದೇಶಕರು ಅಕ್ಟೋಬರ್ 24 ರಂದು ಪತ್ರಿಕಾಗೋಷ್ಠಿ ನಡೆಸಿ ಮುಂದಿನ ಹತ್ತು ವರ್ಷಗಳ ಅವಧಿಗೆ ಯಾವುದೇ ಸಮಸ್ಯೆ ಇಲ್ಲ ಎಂದೂ ಹೇಳಿದ್ದರು. ಏಳು ತಿಂಗಳ ನವೀಕರಣ ಕಾರ್ಯದ ನಂತರ ಸೇತುವೆಯನ್ನು ಅಧಿಕೃತವಾಗಿ ಪುನಃ ತೆರೆಯಲಾಗಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

4 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

11 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago