ಗುಜರಾತ್ ಮೋರ್ಬಿ ಸೇತುವೆಯನ್ನು ದುರಸ್ತಿ ಮಾಡಿದ ಸಂಸ್ಥೆಯ ಇಬ್ಬರು ವ್ಯವಸ್ಥಾಪಕರು ಸೇರಿದಂತೆ ಒಂಬತ್ತು ಮಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಓರೆವಾ ಗ್ರೂಪ್ಗೆ ಸೇತುವೆಯ ನವೀಕರಣ ಮತ್ತು ಕಾರ್ಯಾಚರಣೆಯ ಗುತ್ತಿಗೆಯನ್ನು ನೀಡಲಾಗಿತ್ತು.
141 ಮಂದಿಯನ್ನು ಬಲಿ ಪಡೆದ ಗುಜರಾತ್ನ ಮೊರ್ಬಿಯ ತೂಗು ಸೇತುವೆಯನ್ನು ನವೀಕರಿಸಿದ್ದ ಕಂಪನಿಯ ಇಬ್ಬರು ಸಿಬ್ಬಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಫಿಟ್ನೆಸ್ ಪ್ರಮಾಣಪತ್ರ ಪಡೆಯದೆ ಮತ್ತು ಅವಧಿಗೂ ಮುನ್ನವೇ ಸೇತುವೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ ಎಂಬ ಆರೋಪಗಳು ಒರೆವಾ ವಿರುದ್ಧ ಕೇಳಿಬಂದಿವೆ.ದುರಂತಕ್ಕೆ ಸಂಬಂಧಿಸಿಂತೆ ಇದು ಮೊದಲ ಬಂಧನವಾಗಿದ್ದು, ಸೇತುವೆಯನ್ನು ನವೀಕರಿಸಿದ ಒರೆವಾ ಕಂಪನಿಯ ಇಬ್ಬರು ಸಿಬ್ಬಂದಿಗಳನ್ನು ಬಂಧಿಸಲಾಗಿದೆ. ಅವರು ಒರೆವಾ ಕಂಪನಿಯ ಮಧ್ಯಮ ಮಟ್ಟದ ಉದ್ಯೋಗಿಗಳು ಎಂದು ಮೂಲಗಳು ತಿಳಿಸಿವೆ.
ಸುಮಾರು 150 ವರ್ಷಗಳಷ್ಟು ಹಳೆಯದಾದ ಸೇತುವೆಯನ್ನು ನವೀಕರಿಸಿದ ಖಾಸಗಿ ಕಂಪನಿಯು, ಹೊಸ ತಂತ್ರಜ್ಞಾನಗಳೊಂದಿಗೆ ಮುಂದಿನ ಹತ್ತು ವರ್ಷಗಳಿಗೆ ಸುರಕ್ಷತೆಯ ಆಧಾರದಲ್ಲಿ ನಿರ್ಮಿಸಿತ್ತು. ಇದಕ್ಕಾಗಿ ಸುಮಾರು 2 ಕೋಟಿ ರೂಪಾಯಿ ವ್ಯಯಿಸಲಾಯಿತ್ತು. ಈ ಸೇತುವೆ ನವೀಕರಿಸಿದ ಒರೆವಾ ಸಮೂಹದ ವ್ಯವಸ್ಥಾಪಕ ನಿರ್ದೇಶಕರು ಅಕ್ಟೋಬರ್ 24 ರಂದು ಪತ್ರಿಕಾಗೋಷ್ಠಿ ನಡೆಸಿ ಮುಂದಿನ ಹತ್ತು ವರ್ಷಗಳ ಅವಧಿಗೆ ಯಾವುದೇ ಸಮಸ್ಯೆ ಇಲ್ಲ ಎಂದೂ ಹೇಳಿದ್ದರು. ಏಳು ತಿಂಗಳ ನವೀಕರಣ ಕಾರ್ಯದ ನಂತರ ಸೇತುವೆಯನ್ನು ಅಧಿಕೃತವಾಗಿ ಪುನಃ ತೆರೆಯಲಾಗಿತ್ತು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…