Advertisement
ಸುದ್ದಿಗಳು

ಗುಜರಾತ್‌ ಸೇತುವೆ ದುರಂತ | ಒಟ್ಟು 9 ಮಂದಿ ಬಂಧನ | 2 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನವೀಕರಿಸಿದ ಸಂಸ್ಥೆಯ ವ್ಯವಸ್ಥಾಪಕ ಸಹಿತ ಹಲವರು ಬಂಧನ |

Share

ಗುಜರಾತ್‌ ಮೋರ್ಬಿ ಸೇತುವೆಯನ್ನು ದುರಸ್ತಿ ಮಾಡಿದ ಸಂಸ್ಥೆಯ ಇಬ್ಬರು ವ್ಯವಸ್ಥಾಪಕರು ಸೇರಿದಂತೆ ಒಂಬತ್ತು ಮಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಓರೆವಾ ಗ್ರೂಪ್‌ಗೆ ಸೇತುವೆಯ ನವೀಕರಣ ಮತ್ತು ಕಾರ್ಯಾಚರಣೆಯ ಗುತ್ತಿಗೆಯನ್ನು ನೀಡಲಾಗಿತ್ತು.

141 ಮಂದಿಯನ್ನು ಬಲಿ ಪಡೆದ ಗುಜರಾತ್​ನ ಮೊರ್ಬಿಯ ತೂಗು ಸೇತುವೆಯನ್ನು ನವೀಕರಿಸಿದ್ದ ಕಂಪನಿಯ ಇಬ್ಬರು ಸಿಬ್ಬಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಫಿಟ್‌ನೆಸ್ ಪ್ರಮಾಣಪತ್ರ ಪಡೆಯದೆ ಮತ್ತು ಅವಧಿಗೂ ಮುನ್ನವೇ ಸೇತುವೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ ಎಂಬ ಆರೋಪಗಳು ಒರೆವಾ ವಿರುದ್ಧ ಕೇಳಿಬಂದಿವೆ.ದುರಂತಕ್ಕೆ ಸಂಬಂಧಿಸಿಂತೆ ಇದು ಮೊದಲ ಬಂಧನವಾಗಿದ್ದು, ಸೇತುವೆಯನ್ನು ನವೀಕರಿಸಿದ ಒರೆವಾ ಕಂಪನಿಯ ಇಬ್ಬರು ಸಿಬ್ಬಂದಿಗಳನ್ನು ಬಂಧಿಸಲಾಗಿದೆ. ಅವರು ಒರೆವಾ ಕಂಪನಿಯ ಮಧ್ಯಮ ಮಟ್ಟದ ಉದ್ಯೋಗಿಗಳು ಎಂದು ಮೂಲಗಳು ತಿಳಿಸಿವೆ.

ಸುಮಾರು 150 ವರ್ಷಗಳಷ್ಟು ಹಳೆಯದಾದ ಸೇತುವೆಯನ್ನು ನವೀಕರಿಸಿದ ಖಾಸಗಿ ಕಂಪನಿಯು, ಹೊಸ ತಂತ್ರಜ್ಞಾನಗಳೊಂದಿಗೆ ಮುಂದಿನ ಹತ್ತು ವರ್ಷಗಳಿಗೆ ಸುರಕ್ಷತೆಯ ಆಧಾರದಲ್ಲಿ ನಿರ್ಮಿಸಿತ್ತು. ಇದಕ್ಕಾಗಿ ಸುಮಾರು 2 ಕೋಟಿ ರೂಪಾಯಿ ವ್ಯಯಿಸಲಾಯಿತ್ತು. ಈ ಸೇತುವೆ ನವೀಕರಿಸಿದ ಒರೆವಾ ಸಮೂಹದ ವ್ಯವಸ್ಥಾಪಕ ನಿರ್ದೇಶಕರು ಅಕ್ಟೋಬರ್ 24 ರಂದು ಪತ್ರಿಕಾಗೋಷ್ಠಿ ನಡೆಸಿ ಮುಂದಿನ ಹತ್ತು ವರ್ಷಗಳ ಅವಧಿಗೆ ಯಾವುದೇ ಸಮಸ್ಯೆ ಇಲ್ಲ ಎಂದೂ ಹೇಳಿದ್ದರು. ಏಳು ತಿಂಗಳ ನವೀಕರಣ ಕಾರ್ಯದ ನಂತರ ಸೇತುವೆಯನ್ನು ಅಧಿಕೃತವಾಗಿ ಪುನಃ ತೆರೆಯಲಾಗಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 hour ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 hour ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

8 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

10 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

17 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

20 hours ago