Advertisement
ಸುದ್ದಿಗಳು

ಗುಜರಾತ್‌ ಸೇತುವೆ ದುರಂತ | ಒಟ್ಟು 9 ಮಂದಿ ಬಂಧನ | 2 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನವೀಕರಿಸಿದ ಸಂಸ್ಥೆಯ ವ್ಯವಸ್ಥಾಪಕ ಸಹಿತ ಹಲವರು ಬಂಧನ |

Share

ಗುಜರಾತ್‌ ಮೋರ್ಬಿ ಸೇತುವೆಯನ್ನು ದುರಸ್ತಿ ಮಾಡಿದ ಸಂಸ್ಥೆಯ ಇಬ್ಬರು ವ್ಯವಸ್ಥಾಪಕರು ಸೇರಿದಂತೆ ಒಂಬತ್ತು ಮಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಓರೆವಾ ಗ್ರೂಪ್‌ಗೆ ಸೇತುವೆಯ ನವೀಕರಣ ಮತ್ತು ಕಾರ್ಯಾಚರಣೆಯ ಗುತ್ತಿಗೆಯನ್ನು ನೀಡಲಾಗಿತ್ತು.

141 ಮಂದಿಯನ್ನು ಬಲಿ ಪಡೆದ ಗುಜರಾತ್​ನ ಮೊರ್ಬಿಯ ತೂಗು ಸೇತುವೆಯನ್ನು ನವೀಕರಿಸಿದ್ದ ಕಂಪನಿಯ ಇಬ್ಬರು ಸಿಬ್ಬಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಫಿಟ್‌ನೆಸ್ ಪ್ರಮಾಣಪತ್ರ ಪಡೆಯದೆ ಮತ್ತು ಅವಧಿಗೂ ಮುನ್ನವೇ ಸೇತುವೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ ಎಂಬ ಆರೋಪಗಳು ಒರೆವಾ ವಿರುದ್ಧ ಕೇಳಿಬಂದಿವೆ.ದುರಂತಕ್ಕೆ ಸಂಬಂಧಿಸಿಂತೆ ಇದು ಮೊದಲ ಬಂಧನವಾಗಿದ್ದು, ಸೇತುವೆಯನ್ನು ನವೀಕರಿಸಿದ ಒರೆವಾ ಕಂಪನಿಯ ಇಬ್ಬರು ಸಿಬ್ಬಂದಿಗಳನ್ನು ಬಂಧಿಸಲಾಗಿದೆ. ಅವರು ಒರೆವಾ ಕಂಪನಿಯ ಮಧ್ಯಮ ಮಟ್ಟದ ಉದ್ಯೋಗಿಗಳು ಎಂದು ಮೂಲಗಳು ತಿಳಿಸಿವೆ.

ಸುಮಾರು 150 ವರ್ಷಗಳಷ್ಟು ಹಳೆಯದಾದ ಸೇತುವೆಯನ್ನು ನವೀಕರಿಸಿದ ಖಾಸಗಿ ಕಂಪನಿಯು, ಹೊಸ ತಂತ್ರಜ್ಞಾನಗಳೊಂದಿಗೆ ಮುಂದಿನ ಹತ್ತು ವರ್ಷಗಳಿಗೆ ಸುರಕ್ಷತೆಯ ಆಧಾರದಲ್ಲಿ ನಿರ್ಮಿಸಿತ್ತು. ಇದಕ್ಕಾಗಿ ಸುಮಾರು 2 ಕೋಟಿ ರೂಪಾಯಿ ವ್ಯಯಿಸಲಾಯಿತ್ತು. ಈ ಸೇತುವೆ ನವೀಕರಿಸಿದ ಒರೆವಾ ಸಮೂಹದ ವ್ಯವಸ್ಥಾಪಕ ನಿರ್ದೇಶಕರು ಅಕ್ಟೋಬರ್ 24 ರಂದು ಪತ್ರಿಕಾಗೋಷ್ಠಿ ನಡೆಸಿ ಮುಂದಿನ ಹತ್ತು ವರ್ಷಗಳ ಅವಧಿಗೆ ಯಾವುದೇ ಸಮಸ್ಯೆ ಇಲ್ಲ ಎಂದೂ ಹೇಳಿದ್ದರು. ಏಳು ತಿಂಗಳ ನವೀಕರಣ ಕಾರ್ಯದ ನಂತರ ಸೇತುವೆಯನ್ನು ಅಧಿಕೃತವಾಗಿ ಪುನಃ ತೆರೆಯಲಾಗಿತ್ತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

10 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

10 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

18 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

23 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

24 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago