ಮೋರ್ಬಿ ಸೇತುವೆ ಕುಸಿತ | ರಾಜ್ ಕೋಟ್ ನ ಬಿಜೆಪಿ ಸಂಸದರ ಕುಟುಂಬದ 12‌ ಮಂದಿ ಬಲಿ | ದುರಂತಕ್ಕೆ 141 ಮಂದಿ ಬಲಿ |

October 31, 2022
7:02 PM

ಭಾನುವಾರ ಸಂಜೆ ಗುಜರಾತ್‌ನ ಮೋರ್ಬಿ ಸೇತುವೆ ಕುಸಿತದಿಂದ ಇಲ್ಲಿಯವರೆಗೂ 141 ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ 12 ಮಂದಿ ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರ ಕುಟುಂಬಕ್ಕೆ ಸೇರಿದವರಾಗಿದ್ದಾರೆ. 

ಮಾಧ್ಯಮ ಜೊತೆಗೆ ಮಾತನಾಡಿದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ, ‘ನಾನು ಈ ದುರ್ಘಟನೆಯಲ್ಲಿ ಐದು ಮಕ್ಕಳು ಸೇರಿದಂತೆ ನನ್ನ ಕುಟುಂಬದ 12 ಸದಸ್ಯರನ್ನು ಕಳೆದುಕೊಂಡಿದ್ದೇನೆ. ನನ್ನ ಸಹೋದರಿಯ ಕುಟುಂಬದಿಂದ ಬಂದ ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದೇನೆ’ ಎಂದಿದ್ದಾರೆ.

ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಸ್ಥಳೀಯ ಆಡಳಿತವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ.ಘಟನೆಯಲ್ಲಿ ಬದುಕುಳಿದ ಎಲ್ಲರನ್ನೂ ರಕ್ಷಣೆ ಮಾಡಲಾಗಿದೆ. ಇನ್ನೂ ಸಿಲುಕಿರುವ ಹಲವರನ್ನು ಹೊರತೆಗೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 7, 2026
9:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror