ಮೋರ್ಬಿ ಸೇತುವೆ ಕುಸಿತ | ರಾಜ್ ಕೋಟ್ ನ ಬಿಜೆಪಿ ಸಂಸದರ ಕುಟುಂಬದ 12‌ ಮಂದಿ ಬಲಿ | ದುರಂತಕ್ಕೆ 141 ಮಂದಿ ಬಲಿ |

October 31, 2022
7:02 PM

ಭಾನುವಾರ ಸಂಜೆ ಗುಜರಾತ್‌ನ ಮೋರ್ಬಿ ಸೇತುವೆ ಕುಸಿತದಿಂದ ಇಲ್ಲಿಯವರೆಗೂ 141 ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ 12 ಮಂದಿ ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರ ಕುಟುಂಬಕ್ಕೆ ಸೇರಿದವರಾಗಿದ್ದಾರೆ. 

ಮಾಧ್ಯಮ ಜೊತೆಗೆ ಮಾತನಾಡಿದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ, ‘ನಾನು ಈ ದುರ್ಘಟನೆಯಲ್ಲಿ ಐದು ಮಕ್ಕಳು ಸೇರಿದಂತೆ ನನ್ನ ಕುಟುಂಬದ 12 ಸದಸ್ಯರನ್ನು ಕಳೆದುಕೊಂಡಿದ್ದೇನೆ. ನನ್ನ ಸಹೋದರಿಯ ಕುಟುಂಬದಿಂದ ಬಂದ ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದೇನೆ’ ಎಂದಿದ್ದಾರೆ.

ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಸ್ಥಳೀಯ ಆಡಳಿತವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ.ಘಟನೆಯಲ್ಲಿ ಬದುಕುಳಿದ ಎಲ್ಲರನ್ನೂ ರಕ್ಷಣೆ ಮಾಡಲಾಗಿದೆ. ಇನ್ನೂ ಸಿಲುಕಿರುವ ಹಲವರನ್ನು ಹೊರತೆಗೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror