ಚುನಾವಣಾ ಕಣ | ಗುಜರಾತ್‌ನಲ್ಲಿ ಬಿಜೆಪಿ ಭರ್ಜರಿ ಮುನ್ನಡೆ | ಹಿಮಾಚಲದಲ್ಲಿ ಕಾಂಗ್ರೆಸ್‌ ಮುನ್ನಡೆ | ಗುಜರಾತಲ್ಲಿ ಖಾತೆ ತೆರೆಯುವ ಎಎಪಿ |

December 8, 2022
11:53 AM

ಗುಜರಾತ್‌ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆರಂಭಿಕ ಹಂತದಲ್ಲಿ ಆಡಳಿತಾರೂಢ ಬಿಜೆಪಿಯು ಭರ್ಜರಿ ಮುನ್ನಡೆ ಸಾಧಿಸಿದೆ. ಹಿಮಾಚಲ ಪ್ರದೇಶದಲ್ಲಿ  ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದ್ದು ಬಹುಮತದತ್ತ ದಾಪುಗಾಲು ಹಾಕಿದೆ. ಎಎಪಿಯು ಗುಜರಾತ್‌ನಲ್ಲಿ ಖಾತೆ ತೆರೆಯುವ ನಿರೀಕ್ಷೆಯಲ್ಲಿದ್ದರೆ ಹಿಮಾಚಲ ಪ್ರದೇಶದಲ್ಲಿ ಹಿನ್ನಡೆ ಅನುಭವಿಸಿದೆ.

Advertisement
Advertisement
Advertisement

ಸದ್ಯ ಗುಜರಾತ್‌ನಲ್ಲಿ182 ಸ್ಥಾನಗಳಲ್ಲಿ  ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದು ಕಾಂಗ್ರೆಸ್ 16 ಮತ್ತು ಎಎಪಿ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Advertisement

ಹಿಮಾಚಲ ಪ್ರದೇಶದಲ್ಲಿ 68 ವಿಧಾನಸಭಾ ಸ್ಥಾನಗಳಲ್ಲಿ ಪ್ರತಿಪಕ್ಷ ಕಾಂಗ್ರೆಸ್ 30 ರಲ್ಲಿ ಮುನ್ನಡೆ ಸಾಧಿಸಿದರೆ, ಆಡಳಿತಾರೂಢ ಬಿಜೆಪಿ 30, ಸ್ವತಂತ್ರ ಅಭ್ಯರ್ಥಿಗಳು ಐದರಲ್ಲಿ ಮುಂದಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) ಇನ್ನೂ ತನ್ನ ಖಾತೆಯನ್ನು ತೆರೆದಿಲ್ಲ.

1985ರ ನಂತರ ಹಿಮಾಚಲದಲ್ಲಿ ಅಧಿಕಾರಕ್ಕೆ ಬಂದ ಯಾವುದೇ ಸರ್ಕಾರಗಳು ಎರಡು ಬಾರಿ ಅಧಿಕಾರ ಗಳಿಸಿಲ್ಲ. ಈ ಬಾರಿ ಬಿಜೆಪಿ ಅದನ್ನು ಹುಸಿಗೊಳಿಸಲು ಪ್ರಯತ್ನಿಸುತ್ತಿದೆ.

Advertisement

1995 ರಿಂದ ರಾಜ್ಯದಲ್ಲಿ ಯಾವುದೇ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿಲ್ಲ. ಈ ಬಾರಿ ಭರ್ಜರಿ ಸ್ಥಾನ ಗಳಿಸುವ ನಿರೀಕ್ಷೆ ಇದೆ.

ಗುಜರಾತ್‌ ನಲ್ಲಿ ಬಿಜೆಪಿಯು ತನ್ನ ಅಭಿವೃದ್ಧಿ ಅಜೆಂಡಾ ಗೆದ್ದಿದೆ ಎಂದು ಹೇಳಿದೆ.  ಈ ಗೆಲುವು  ತನ್ನ ಅಭಿವೃದ್ಧಿ ಕಾರ್ಯಸೂಚಿಯ ಪ್ರತಿಬಿಂಬ ಮತ್ತು ಕಾಂಗ್ರೆಸ್‌ನ “ನಕಾರಾತ್ಮಕ ರಾಜಕೀಯ” ದ ಸೋಲು ಎಂದು ಬಣ್ಣಿಸಿದೆ. ಗುಜರಾತ್‌ನಲ್ಲಿ ದಾಖಲೆಯ ಏಳನೇ ಅವಧಿಗೆ ಬಿಜೆಪಿ ಅಧಿಕಾರಕ್ಕೆ ಮರಳಲು ಸಜ್ಜಾಗಿದೆ. ಜನರ  ತೀರ್ಪು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮೇಲಿನ ಜನರ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ. ಪಕ್ಷವು ರಾಜ್ಯದಲ್ಲಿ ನಡೆಸಿದ ಅಭಿವೃದ್ಧಿಯ ಅಜೆಂಡಾದ ವಿಜಯವಾಗಿದೆ ಎಂದು ಗುಜರಾತ್ ಬಿಜೆಪಿ ವಕ್ತಾರ ಯಮಲ್ ವ್ಯಾಸ್  ಮಾಧ್ಯಮಗಳಿಗೆ  ತಿಳಿಸಿದ್ದಾರೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |
April 23, 2024
1:54 PM
by: ದ ರೂರಲ್ ಮಿರರ್.ಕಾಂ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror