ಸುದ್ದಿಗಳು

ಚುನಾವಣಾ ಕಣ | ಗುಜರಾತ್‌ನಲ್ಲಿ ಬಿಜೆಪಿ ಭರ್ಜರಿ ಮುನ್ನಡೆ | ಹಿಮಾಚಲದಲ್ಲಿ ಕಾಂಗ್ರೆಸ್‌ ಮುನ್ನಡೆ | ಗುಜರಾತಲ್ಲಿ ಖಾತೆ ತೆರೆಯುವ ಎಎಪಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುಜರಾತ್‌ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆರಂಭಿಕ ಹಂತದಲ್ಲಿ ಆಡಳಿತಾರೂಢ ಬಿಜೆಪಿಯು ಭರ್ಜರಿ ಮುನ್ನಡೆ ಸಾಧಿಸಿದೆ. ಹಿಮಾಚಲ ಪ್ರದೇಶದಲ್ಲಿ  ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದ್ದು ಬಹುಮತದತ್ತ ದಾಪುಗಾಲು ಹಾಕಿದೆ. ಎಎಪಿಯು ಗುಜರಾತ್‌ನಲ್ಲಿ ಖಾತೆ ತೆರೆಯುವ ನಿರೀಕ್ಷೆಯಲ್ಲಿದ್ದರೆ ಹಿಮಾಚಲ ಪ್ರದೇಶದಲ್ಲಿ ಹಿನ್ನಡೆ ಅನುಭವಿಸಿದೆ.

ಸದ್ಯ ಗುಜರಾತ್‌ನಲ್ಲಿ182 ಸ್ಥಾನಗಳಲ್ಲಿ  ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದು ಕಾಂಗ್ರೆಸ್ 16 ಮತ್ತು ಎಎಪಿ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಹಿಮಾಚಲ ಪ್ರದೇಶದಲ್ಲಿ 68 ವಿಧಾನಸಭಾ ಸ್ಥಾನಗಳಲ್ಲಿ ಪ್ರತಿಪಕ್ಷ ಕಾಂಗ್ರೆಸ್ 30 ರಲ್ಲಿ ಮುನ್ನಡೆ ಸಾಧಿಸಿದರೆ, ಆಡಳಿತಾರೂಢ ಬಿಜೆಪಿ 30, ಸ್ವತಂತ್ರ ಅಭ್ಯರ್ಥಿಗಳು ಐದರಲ್ಲಿ ಮುಂದಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) ಇನ್ನೂ ತನ್ನ ಖಾತೆಯನ್ನು ತೆರೆದಿಲ್ಲ.

1985ರ ನಂತರ ಹಿಮಾಚಲದಲ್ಲಿ ಅಧಿಕಾರಕ್ಕೆ ಬಂದ ಯಾವುದೇ ಸರ್ಕಾರಗಳು ಎರಡು ಬಾರಿ ಅಧಿಕಾರ ಗಳಿಸಿಲ್ಲ. ಈ ಬಾರಿ ಬಿಜೆಪಿ ಅದನ್ನು ಹುಸಿಗೊಳಿಸಲು ಪ್ರಯತ್ನಿಸುತ್ತಿದೆ.

1995 ರಿಂದ ರಾಜ್ಯದಲ್ಲಿ ಯಾವುದೇ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿಲ್ಲ. ಈ ಬಾರಿ ಭರ್ಜರಿ ಸ್ಥಾನ ಗಳಿಸುವ ನಿರೀಕ್ಷೆ ಇದೆ.

ಗುಜರಾತ್‌ ನಲ್ಲಿ ಬಿಜೆಪಿಯು ತನ್ನ ಅಭಿವೃದ್ಧಿ ಅಜೆಂಡಾ ಗೆದ್ದಿದೆ ಎಂದು ಹೇಳಿದೆ.  ಈ ಗೆಲುವು  ತನ್ನ ಅಭಿವೃದ್ಧಿ ಕಾರ್ಯಸೂಚಿಯ ಪ್ರತಿಬಿಂಬ ಮತ್ತು ಕಾಂಗ್ರೆಸ್‌ನ “ನಕಾರಾತ್ಮಕ ರಾಜಕೀಯ” ದ ಸೋಲು ಎಂದು ಬಣ್ಣಿಸಿದೆ. ಗುಜರಾತ್‌ನಲ್ಲಿ ದಾಖಲೆಯ ಏಳನೇ ಅವಧಿಗೆ ಬಿಜೆಪಿ ಅಧಿಕಾರಕ್ಕೆ ಮರಳಲು ಸಜ್ಜಾಗಿದೆ. ಜನರ  ತೀರ್ಪು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮೇಲಿನ ಜನರ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ. ಪಕ್ಷವು ರಾಜ್ಯದಲ್ಲಿ ನಡೆಸಿದ ಅಭಿವೃದ್ಧಿಯ ಅಜೆಂಡಾದ ವಿಜಯವಾಗಿದೆ ಎಂದು ಗುಜರಾತ್ ಬಿಜೆಪಿ ವಕ್ತಾರ ಯಮಲ್ ವ್ಯಾಸ್  ಮಾಧ್ಯಮಗಳಿಗೆ  ತಿಳಿಸಿದ್ದಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

8 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

8 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

22 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

23 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

23 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

23 hours ago