Advertisement
ಸುದ್ದಿಗಳು

ಚುನಾವಣಾ ಕಣ | ಗುಜರಾತ್‌ನಲ್ಲಿ ಬಿಜೆಪಿ ಭರ್ಜರಿ ಮುನ್ನಡೆ | ಹಿಮಾಚಲದಲ್ಲಿ ಕಾಂಗ್ರೆಸ್‌ ಮುನ್ನಡೆ | ಗುಜರಾತಲ್ಲಿ ಖಾತೆ ತೆರೆಯುವ ಎಎಪಿ |

Share

ಗುಜರಾತ್‌ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆರಂಭಿಕ ಹಂತದಲ್ಲಿ ಆಡಳಿತಾರೂಢ ಬಿಜೆಪಿಯು ಭರ್ಜರಿ ಮುನ್ನಡೆ ಸಾಧಿಸಿದೆ. ಹಿಮಾಚಲ ಪ್ರದೇಶದಲ್ಲಿ  ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದ್ದು ಬಹುಮತದತ್ತ ದಾಪುಗಾಲು ಹಾಕಿದೆ. ಎಎಪಿಯು ಗುಜರಾತ್‌ನಲ್ಲಿ ಖಾತೆ ತೆರೆಯುವ ನಿರೀಕ್ಷೆಯಲ್ಲಿದ್ದರೆ ಹಿಮಾಚಲ ಪ್ರದೇಶದಲ್ಲಿ ಹಿನ್ನಡೆ ಅನುಭವಿಸಿದೆ.

Advertisement
Advertisement

ಸದ್ಯ ಗುಜರಾತ್‌ನಲ್ಲಿ182 ಸ್ಥಾನಗಳಲ್ಲಿ  ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದು ಕಾಂಗ್ರೆಸ್ 16 ಮತ್ತು ಎಎಪಿ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Advertisement

ಹಿಮಾಚಲ ಪ್ರದೇಶದಲ್ಲಿ 68 ವಿಧಾನಸಭಾ ಸ್ಥಾನಗಳಲ್ಲಿ ಪ್ರತಿಪಕ್ಷ ಕಾಂಗ್ರೆಸ್ 30 ರಲ್ಲಿ ಮುನ್ನಡೆ ಸಾಧಿಸಿದರೆ, ಆಡಳಿತಾರೂಢ ಬಿಜೆಪಿ 30, ಸ್ವತಂತ್ರ ಅಭ್ಯರ್ಥಿಗಳು ಐದರಲ್ಲಿ ಮುಂದಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) ಇನ್ನೂ ತನ್ನ ಖಾತೆಯನ್ನು ತೆರೆದಿಲ್ಲ.

1985ರ ನಂತರ ಹಿಮಾಚಲದಲ್ಲಿ ಅಧಿಕಾರಕ್ಕೆ ಬಂದ ಯಾವುದೇ ಸರ್ಕಾರಗಳು ಎರಡು ಬಾರಿ ಅಧಿಕಾರ ಗಳಿಸಿಲ್ಲ. ಈ ಬಾರಿ ಬಿಜೆಪಿ ಅದನ್ನು ಹುಸಿಗೊಳಿಸಲು ಪ್ರಯತ್ನಿಸುತ್ತಿದೆ.

Advertisement

1995 ರಿಂದ ರಾಜ್ಯದಲ್ಲಿ ಯಾವುದೇ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿಲ್ಲ. ಈ ಬಾರಿ ಭರ್ಜರಿ ಸ್ಥಾನ ಗಳಿಸುವ ನಿರೀಕ್ಷೆ ಇದೆ.

ಗುಜರಾತ್‌ ನಲ್ಲಿ ಬಿಜೆಪಿಯು ತನ್ನ ಅಭಿವೃದ್ಧಿ ಅಜೆಂಡಾ ಗೆದ್ದಿದೆ ಎಂದು ಹೇಳಿದೆ.  ಈ ಗೆಲುವು  ತನ್ನ ಅಭಿವೃದ್ಧಿ ಕಾರ್ಯಸೂಚಿಯ ಪ್ರತಿಬಿಂಬ ಮತ್ತು ಕಾಂಗ್ರೆಸ್‌ನ “ನಕಾರಾತ್ಮಕ ರಾಜಕೀಯ” ದ ಸೋಲು ಎಂದು ಬಣ್ಣಿಸಿದೆ. ಗುಜರಾತ್‌ನಲ್ಲಿ ದಾಖಲೆಯ ಏಳನೇ ಅವಧಿಗೆ ಬಿಜೆಪಿ ಅಧಿಕಾರಕ್ಕೆ ಮರಳಲು ಸಜ್ಜಾಗಿದೆ. ಜನರ  ತೀರ್ಪು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮೇಲಿನ ಜನರ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ. ಪಕ್ಷವು ರಾಜ್ಯದಲ್ಲಿ ನಡೆಸಿದ ಅಭಿವೃದ್ಧಿಯ ಅಜೆಂಡಾದ ವಿಜಯವಾಗಿದೆ ಎಂದು ಗುಜರಾತ್ ಬಿಜೆಪಿ ವಕ್ತಾರ ಯಮಲ್ ವ್ಯಾಸ್  ಮಾಧ್ಯಮಗಳಿಗೆ  ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

17 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

18 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago