Advertisement
ಸುದ್ದಿಗಳು

ಚುನಾವಣಾ ಕಣ | ಗುಜರಾತ್‌ನಲ್ಲಿ ಬಿಜೆಪಿ ಭರ್ಜರಿ ಮುನ್ನಡೆ | ಹಿಮಾಚಲದಲ್ಲಿ ಕಾಂಗ್ರೆಸ್‌ ಮುನ್ನಡೆ | ಗುಜರಾತಲ್ಲಿ ಖಾತೆ ತೆರೆಯುವ ಎಎಪಿ |

Share

ಗುಜರಾತ್‌ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆರಂಭಿಕ ಹಂತದಲ್ಲಿ ಆಡಳಿತಾರೂಢ ಬಿಜೆಪಿಯು ಭರ್ಜರಿ ಮುನ್ನಡೆ ಸಾಧಿಸಿದೆ. ಹಿಮಾಚಲ ಪ್ರದೇಶದಲ್ಲಿ  ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದ್ದು ಬಹುಮತದತ್ತ ದಾಪುಗಾಲು ಹಾಕಿದೆ. ಎಎಪಿಯು ಗುಜರಾತ್‌ನಲ್ಲಿ ಖಾತೆ ತೆರೆಯುವ ನಿರೀಕ್ಷೆಯಲ್ಲಿದ್ದರೆ ಹಿಮಾಚಲ ಪ್ರದೇಶದಲ್ಲಿ ಹಿನ್ನಡೆ ಅನುಭವಿಸಿದೆ.

ಸದ್ಯ ಗುಜರಾತ್‌ನಲ್ಲಿ182 ಸ್ಥಾನಗಳಲ್ಲಿ  ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದು ಕಾಂಗ್ರೆಸ್ 16 ಮತ್ತು ಎಎಪಿ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಹಿಮಾಚಲ ಪ್ರದೇಶದಲ್ಲಿ 68 ವಿಧಾನಸಭಾ ಸ್ಥಾನಗಳಲ್ಲಿ ಪ್ರತಿಪಕ್ಷ ಕಾಂಗ್ರೆಸ್ 30 ರಲ್ಲಿ ಮುನ್ನಡೆ ಸಾಧಿಸಿದರೆ, ಆಡಳಿತಾರೂಢ ಬಿಜೆಪಿ 30, ಸ್ವತಂತ್ರ ಅಭ್ಯರ್ಥಿಗಳು ಐದರಲ್ಲಿ ಮುಂದಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) ಇನ್ನೂ ತನ್ನ ಖಾತೆಯನ್ನು ತೆರೆದಿಲ್ಲ.

1985ರ ನಂತರ ಹಿಮಾಚಲದಲ್ಲಿ ಅಧಿಕಾರಕ್ಕೆ ಬಂದ ಯಾವುದೇ ಸರ್ಕಾರಗಳು ಎರಡು ಬಾರಿ ಅಧಿಕಾರ ಗಳಿಸಿಲ್ಲ. ಈ ಬಾರಿ ಬಿಜೆಪಿ ಅದನ್ನು ಹುಸಿಗೊಳಿಸಲು ಪ್ರಯತ್ನಿಸುತ್ತಿದೆ.

1995 ರಿಂದ ರಾಜ್ಯದಲ್ಲಿ ಯಾವುದೇ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿಲ್ಲ. ಈ ಬಾರಿ ಭರ್ಜರಿ ಸ್ಥಾನ ಗಳಿಸುವ ನಿರೀಕ್ಷೆ ಇದೆ.

ಗುಜರಾತ್‌ ನಲ್ಲಿ ಬಿಜೆಪಿಯು ತನ್ನ ಅಭಿವೃದ್ಧಿ ಅಜೆಂಡಾ ಗೆದ್ದಿದೆ ಎಂದು ಹೇಳಿದೆ.  ಈ ಗೆಲುವು  ತನ್ನ ಅಭಿವೃದ್ಧಿ ಕಾರ್ಯಸೂಚಿಯ ಪ್ರತಿಬಿಂಬ ಮತ್ತು ಕಾಂಗ್ರೆಸ್‌ನ “ನಕಾರಾತ್ಮಕ ರಾಜಕೀಯ” ದ ಸೋಲು ಎಂದು ಬಣ್ಣಿಸಿದೆ. ಗುಜರಾತ್‌ನಲ್ಲಿ ದಾಖಲೆಯ ಏಳನೇ ಅವಧಿಗೆ ಬಿಜೆಪಿ ಅಧಿಕಾರಕ್ಕೆ ಮರಳಲು ಸಜ್ಜಾಗಿದೆ. ಜನರ  ತೀರ್ಪು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮೇಲಿನ ಜನರ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ. ಪಕ್ಷವು ರಾಜ್ಯದಲ್ಲಿ ನಡೆಸಿದ ಅಭಿವೃದ್ಧಿಯ ಅಜೆಂಡಾದ ವಿಜಯವಾಗಿದೆ ಎಂದು ಗುಜರಾತ್ ಬಿಜೆಪಿ ವಕ್ತಾರ ಯಮಲ್ ವ್ಯಾಸ್  ಮಾಧ್ಯಮಗಳಿಗೆ  ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

14 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

16 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

1 day ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 day ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

2 days ago