Advertisement
ಸುದ್ದಿಗಳು

ಚುನಾವಣಾ ಕಣ | ಗುಜರಾತ್‌ನಲ್ಲಿ ಬಿಜೆಪಿ ಭರ್ಜರಿ ಮುನ್ನಡೆ | ಹಿಮಾಚಲದಲ್ಲಿ ಕಾಂಗ್ರೆಸ್‌ ಮುನ್ನಡೆ | ಗುಜರಾತಲ್ಲಿ ಖಾತೆ ತೆರೆಯುವ ಎಎಪಿ |

Share

ಗುಜರಾತ್‌ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆರಂಭಿಕ ಹಂತದಲ್ಲಿ ಆಡಳಿತಾರೂಢ ಬಿಜೆಪಿಯು ಭರ್ಜರಿ ಮುನ್ನಡೆ ಸಾಧಿಸಿದೆ. ಹಿಮಾಚಲ ಪ್ರದೇಶದಲ್ಲಿ  ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದ್ದು ಬಹುಮತದತ್ತ ದಾಪುಗಾಲು ಹಾಕಿದೆ. ಎಎಪಿಯು ಗುಜರಾತ್‌ನಲ್ಲಿ ಖಾತೆ ತೆರೆಯುವ ನಿರೀಕ್ಷೆಯಲ್ಲಿದ್ದರೆ ಹಿಮಾಚಲ ಪ್ರದೇಶದಲ್ಲಿ ಹಿನ್ನಡೆ ಅನುಭವಿಸಿದೆ.

ಸದ್ಯ ಗುಜರಾತ್‌ನಲ್ಲಿ182 ಸ್ಥಾನಗಳಲ್ಲಿ  ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದು ಕಾಂಗ್ರೆಸ್ 16 ಮತ್ತು ಎಎಪಿ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಹಿಮಾಚಲ ಪ್ರದೇಶದಲ್ಲಿ 68 ವಿಧಾನಸಭಾ ಸ್ಥಾನಗಳಲ್ಲಿ ಪ್ರತಿಪಕ್ಷ ಕಾಂಗ್ರೆಸ್ 30 ರಲ್ಲಿ ಮುನ್ನಡೆ ಸಾಧಿಸಿದರೆ, ಆಡಳಿತಾರೂಢ ಬಿಜೆಪಿ 30, ಸ್ವತಂತ್ರ ಅಭ್ಯರ್ಥಿಗಳು ಐದರಲ್ಲಿ ಮುಂದಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) ಇನ್ನೂ ತನ್ನ ಖಾತೆಯನ್ನು ತೆರೆದಿಲ್ಲ.

1985ರ ನಂತರ ಹಿಮಾಚಲದಲ್ಲಿ ಅಧಿಕಾರಕ್ಕೆ ಬಂದ ಯಾವುದೇ ಸರ್ಕಾರಗಳು ಎರಡು ಬಾರಿ ಅಧಿಕಾರ ಗಳಿಸಿಲ್ಲ. ಈ ಬಾರಿ ಬಿಜೆಪಿ ಅದನ್ನು ಹುಸಿಗೊಳಿಸಲು ಪ್ರಯತ್ನಿಸುತ್ತಿದೆ.

1995 ರಿಂದ ರಾಜ್ಯದಲ್ಲಿ ಯಾವುದೇ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿಲ್ಲ. ಈ ಬಾರಿ ಭರ್ಜರಿ ಸ್ಥಾನ ಗಳಿಸುವ ನಿರೀಕ್ಷೆ ಇದೆ.

ಗುಜರಾತ್‌ ನಲ್ಲಿ ಬಿಜೆಪಿಯು ತನ್ನ ಅಭಿವೃದ್ಧಿ ಅಜೆಂಡಾ ಗೆದ್ದಿದೆ ಎಂದು ಹೇಳಿದೆ.  ಈ ಗೆಲುವು  ತನ್ನ ಅಭಿವೃದ್ಧಿ ಕಾರ್ಯಸೂಚಿಯ ಪ್ರತಿಬಿಂಬ ಮತ್ತು ಕಾಂಗ್ರೆಸ್‌ನ “ನಕಾರಾತ್ಮಕ ರಾಜಕೀಯ” ದ ಸೋಲು ಎಂದು ಬಣ್ಣಿಸಿದೆ. ಗುಜರಾತ್‌ನಲ್ಲಿ ದಾಖಲೆಯ ಏಳನೇ ಅವಧಿಗೆ ಬಿಜೆಪಿ ಅಧಿಕಾರಕ್ಕೆ ಮರಳಲು ಸಜ್ಜಾಗಿದೆ. ಜನರ  ತೀರ್ಪು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮೇಲಿನ ಜನರ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ. ಪಕ್ಷವು ರಾಜ್ಯದಲ್ಲಿ ನಡೆಸಿದ ಅಭಿವೃದ್ಧಿಯ ಅಜೆಂಡಾದ ವಿಜಯವಾಗಿದೆ ಎಂದು ಗುಜರಾತ್ ಬಿಜೆಪಿ ವಕ್ತಾರ ಯಮಲ್ ವ್ಯಾಸ್  ಮಾಧ್ಯಮಗಳಿಗೆ  ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

2 days ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago