Advertisement
MIRROR FOCUS

ಅಡಿಕೆ ಆಮದು ಪ್ರಕರಣ | ತೆರಿಗೆ ವಂಚನೆಗೆ ನಕಲಿ ಬಿಲ್ ಸೃಷ್ಟಿಸಿದ ಆರೋಪ | ಐವರು ಉದ್ಯಮಿಗಳ ವಿರುದ್ಧ ಪ್ರಕರಣ ದಾಖಲು |

Share

ಮುಂದ್ರಾ ಬಂದರು ಮೂಲಕ ತೆರಿಗೆ ತಪ್ಪಿಸಿ, ನಕಲಿ ಬಿಲ್‌ ಸೃಷ್ಟಿಸಿ ಅಡಿಕೆ ಆಮದು ಮಾಡುತ್ತಿದ್ದ ಪ್ರಕರಣವನ್ನು ಡಿಆರ್‌ಐ  ಪತ್ತೆಮಾಡಿತ್ತು. ಇದೀಗ ನಕಲಿ ಬಿಲ್‌ ಸೃಷ್ಟಿಸಿದ ಐವರು ಉದ್ಯಮಿಗಳ ವಿರುದ್ಧ ಗುಜರಾತ್‌ನ ಕಚ್ ವೆಸ್ಟ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಂಬೈ ಮೂಲದ ಉದ್ಯಮಿ ಅನಿಲ್ ಪಂಡಿತ್ ಮತ್ತು ಇತರ ಐವರ ವಿರುದ್ಧ  21.48 ಕೋಟಿ ರೂಪಾಯಿ ಮೌಲ್ಯದ ಆಮದು ಮಾಡಿದ ಅಡಿಕೆಯ ಮೇಲಿನ ಕಸ್ಟಮ್ಸ್ ಸುಂಕವನ್ನು ವಂಚಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

Advertisement
Advertisement

ಆರೋಪಿಗಳು ಅಡಿಕೆಯನ್ನು ಬೇರೆ ದೇಶಗಳಿಂದ ಆಮದು ಮಾಡಿಕೊಂಡು , ಸರಕನ್ನು ಅಡಿಕೆಯ ಬದಲಾಗಿ ಸುಳ್ಳು  ಘೋಷಿಸುವ ಮೂಲಕ ಕಸ್ಟಮ್ಸ್ ಸುಂಕವನ್ನು ತಪ್ಪಿಸುತ್ತಿದ್ದರು. ಇದೀಗ  21.48 ಕೋಟಿ ರೂಪಾಯಿ ಮೌಲ್ಯದ ಆಮದು ಮಾಡಿದ ಅಡಿಕೆಯ ಮೇಲಿನ ಕಸ್ಟಮ್ಸ್ ಸುಂಕವನ್ನು ವಂಚಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಇದರ ಜೊತೆಗೆ  ಸರಿಯಾದ ದಾಖಲೆಗಳಿಲ್ಲದೆ ಗೋಡೌನ್‌ನಲ್ಲಿ ಸರಕುಗಳನ್ನು ಸಂಗ್ರಹಿಸಲು ಅವಕಾಶ ಮಾಡಿಕೊಟ್ಟಿದ್ದರು. ಇದೀಗ ಮುಂದ್ರಾದಲ್ಲಿರುವ  ಗೋಡೌನ್‌ಗೆ ಸೀಲ್‌ ಪೊಲೀಸರು ಸೀಲ್‌ ಮಾಡಿದ್ದಾರೆ.

ಮುಂಬೈ ಮೂಲದ ಉದ್ಯಮಿ ಅನಿಲ್ ಪಂಡಿತ್ ಹಾಗೂ ವ್ಯಾಪಾರ ಪಾಲುದಾರರಾದ ದಿನೇಶ್  ಮತ್ತು ಸುರೇಖಾ ಶೇಠ್  ಮೋಹಿತ್ ಎಂಟರ್‌ಪ್ರೈಸ್‌ನ ಮಾಲಕ ನಾಗಪುರದ ಉದ್ಯಮಿ ಮೋಹಿತ್ , ನಾಗ್ಪುರದ ಹಿಮಾಂಶು ಭಾನುಶಾಲಿ ಮತ್ತು ಮೋಹಿತ್ ಎಂಟರ್‌ಪ್ರೈಸಸ್‌ನ ಮುಂಬೈನ ಮೆಹುಲ್ ಭಾನುಶಾಲಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಫೆಬ್ರವರಿ 2023 ಮತ್ತು ಸೆಪ್ಟೆಂಬರ್ 2023 ರ ನಡುವೆ ಮೋಹಿತ್ ಎಂಟರ್‌ಪ್ರೈಸ್ ತೆರಿಗೆ ಮತ್ತು ಇ-ವೇ ಬಿಲ್‌ಗಳನ್ನು ನಕಲಿ ಮಾಡುವ ಮೂಲಕ ರೂ 21.48 ಕೋಟಿ ಮೌಲ್ಯದ ಅಡಿಕೆಗಳನ್ನು ಮಾರಾಟ ಮಾಡಿದೆ ಎಂದು ಉಲ್ಲೇಖಿಸಲಾಗಿದೆ. ಇತರ ದೇಶಗಳಿಂದ ಅಡಿಕೆಯನ್ನು ಆಮದು ಮಾಡಿ ನಂತರ ಅದನ್ನು ಅನಿಲ್ ಪಂಡಿತ್ ಅವರ ಮುಂದ್ರಾ ಗೋಡೌನ್‌ನಲ್ಲಿ ಸಂಗ್ರಹಿಸುತ್ತಿದ್ದರು. ಹಣವನ್ನು ಗಳಿಸುವ ಉದ್ದೇಶದಿಂದ, ಅವರು ಅದನ್ನು ದೆಹಲಿ, ನಾಗ್ಪುರ ಇತ್ಯಾದಿಗಳಿಗೆ ಕಳುಹಿಸಿ ಮಾರಾಟ ಮಾಡುತ್ತಿದ್ದರು ಎಂದು ಉಲ್ಲೇಖಿಸಲಾಗಿದೆ. ಇದೀಗ ತನಿಖೆ ನಡೆಯುತ್ತಿದೆ. ಬೃಹತ್‌ ಪ್ರಮಾಣದಲ್ಲಿ ಅಡಿಕೆ ಆಮದು ತಡೆಗೆ ಇದೀಗ ಕ್ರಮವಾಗುತ್ತಿದೆ.

DRI had detected a case of importing arecanuts through Mundra port by evading taxes and creating fake bills. Now the Kutch West Police of Gujarat have registered a case against five businessmen who created fake bills.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

17 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago