Advertisement
MIRROR FOCUS

ಅಡಿಕೆ ಆಮದು ಪ್ರಕರಣ | ತೆರಿಗೆ ವಂಚನೆಗೆ ನಕಲಿ ಬಿಲ್ ಸೃಷ್ಟಿಸಿದ ಆರೋಪ | ಐವರು ಉದ್ಯಮಿಗಳ ವಿರುದ್ಧ ಪ್ರಕರಣ ದಾಖಲು |

Share

ಮುಂದ್ರಾ ಬಂದರು ಮೂಲಕ ತೆರಿಗೆ ತಪ್ಪಿಸಿ, ನಕಲಿ ಬಿಲ್‌ ಸೃಷ್ಟಿಸಿ ಅಡಿಕೆ ಆಮದು ಮಾಡುತ್ತಿದ್ದ ಪ್ರಕರಣವನ್ನು ಡಿಆರ್‌ಐ  ಪತ್ತೆಮಾಡಿತ್ತು. ಇದೀಗ ನಕಲಿ ಬಿಲ್‌ ಸೃಷ್ಟಿಸಿದ ಐವರು ಉದ್ಯಮಿಗಳ ವಿರುದ್ಧ ಗುಜರಾತ್‌ನ ಕಚ್ ವೆಸ್ಟ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಂಬೈ ಮೂಲದ ಉದ್ಯಮಿ ಅನಿಲ್ ಪಂಡಿತ್ ಮತ್ತು ಇತರ ಐವರ ವಿರುದ್ಧ  21.48 ಕೋಟಿ ರೂಪಾಯಿ ಮೌಲ್ಯದ ಆಮದು ಮಾಡಿದ ಅಡಿಕೆಯ ಮೇಲಿನ ಕಸ್ಟಮ್ಸ್ ಸುಂಕವನ್ನು ವಂಚಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಆರೋಪಿಗಳು ಅಡಿಕೆಯನ್ನು ಬೇರೆ ದೇಶಗಳಿಂದ ಆಮದು ಮಾಡಿಕೊಂಡು , ಸರಕನ್ನು ಅಡಿಕೆಯ ಬದಲಾಗಿ ಸುಳ್ಳು  ಘೋಷಿಸುವ ಮೂಲಕ ಕಸ್ಟಮ್ಸ್ ಸುಂಕವನ್ನು ತಪ್ಪಿಸುತ್ತಿದ್ದರು. ಇದೀಗ  21.48 ಕೋಟಿ ರೂಪಾಯಿ ಮೌಲ್ಯದ ಆಮದು ಮಾಡಿದ ಅಡಿಕೆಯ ಮೇಲಿನ ಕಸ್ಟಮ್ಸ್ ಸುಂಕವನ್ನು ವಂಚಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಇದರ ಜೊತೆಗೆ  ಸರಿಯಾದ ದಾಖಲೆಗಳಿಲ್ಲದೆ ಗೋಡೌನ್‌ನಲ್ಲಿ ಸರಕುಗಳನ್ನು ಸಂಗ್ರಹಿಸಲು ಅವಕಾಶ ಮಾಡಿಕೊಟ್ಟಿದ್ದರು. ಇದೀಗ ಮುಂದ್ರಾದಲ್ಲಿರುವ  ಗೋಡೌನ್‌ಗೆ ಸೀಲ್‌ ಪೊಲೀಸರು ಸೀಲ್‌ ಮಾಡಿದ್ದಾರೆ.

ಮುಂಬೈ ಮೂಲದ ಉದ್ಯಮಿ ಅನಿಲ್ ಪಂಡಿತ್ ಹಾಗೂ ವ್ಯಾಪಾರ ಪಾಲುದಾರರಾದ ದಿನೇಶ್  ಮತ್ತು ಸುರೇಖಾ ಶೇಠ್  ಮೋಹಿತ್ ಎಂಟರ್‌ಪ್ರೈಸ್‌ನ ಮಾಲಕ ನಾಗಪುರದ ಉದ್ಯಮಿ ಮೋಹಿತ್ , ನಾಗ್ಪುರದ ಹಿಮಾಂಶು ಭಾನುಶಾಲಿ ಮತ್ತು ಮೋಹಿತ್ ಎಂಟರ್‌ಪ್ರೈಸಸ್‌ನ ಮುಂಬೈನ ಮೆಹುಲ್ ಭಾನುಶಾಲಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಫೆಬ್ರವರಿ 2023 ಮತ್ತು ಸೆಪ್ಟೆಂಬರ್ 2023 ರ ನಡುವೆ ಮೋಹಿತ್ ಎಂಟರ್‌ಪ್ರೈಸ್ ತೆರಿಗೆ ಮತ್ತು ಇ-ವೇ ಬಿಲ್‌ಗಳನ್ನು ನಕಲಿ ಮಾಡುವ ಮೂಲಕ ರೂ 21.48 ಕೋಟಿ ಮೌಲ್ಯದ ಅಡಿಕೆಗಳನ್ನು ಮಾರಾಟ ಮಾಡಿದೆ ಎಂದು ಉಲ್ಲೇಖಿಸಲಾಗಿದೆ. ಇತರ ದೇಶಗಳಿಂದ ಅಡಿಕೆಯನ್ನು ಆಮದು ಮಾಡಿ ನಂತರ ಅದನ್ನು ಅನಿಲ್ ಪಂಡಿತ್ ಅವರ ಮುಂದ್ರಾ ಗೋಡೌನ್‌ನಲ್ಲಿ ಸಂಗ್ರಹಿಸುತ್ತಿದ್ದರು. ಹಣವನ್ನು ಗಳಿಸುವ ಉದ್ದೇಶದಿಂದ, ಅವರು ಅದನ್ನು ದೆಹಲಿ, ನಾಗ್ಪುರ ಇತ್ಯಾದಿಗಳಿಗೆ ಕಳುಹಿಸಿ ಮಾರಾಟ ಮಾಡುತ್ತಿದ್ದರು ಎಂದು ಉಲ್ಲೇಖಿಸಲಾಗಿದೆ. ಇದೀಗ ತನಿಖೆ ನಡೆಯುತ್ತಿದೆ. ಬೃಹತ್‌ ಪ್ರಮಾಣದಲ್ಲಿ ಅಡಿಕೆ ಆಮದು ತಡೆಗೆ ಇದೀಗ ಕ್ರಮವಾಗುತ್ತಿದೆ.

DRI had detected a case of importing arecanuts through Mundra port by evading taxes and creating fake bills. Now the Kutch West Police of Gujarat have registered a case against five businessmen who created fake bills.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

20 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago