Advertisement
ಹೊಸರುಚಿ-ಅಡುಗೆ

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

Share

ಕರ್ನಾಟಕದ ಸಾಂಪ್ರದಾಯಿಕ ಅಡುಗೆಗಳಲ್ಲಿ ಒಂದು ವಿಶೇಷ ಸ್ಥಾನ ಹೊಂದಿರುವ ಗುಜ್ಜೆ-ಕಡಲೆ ಗಸಿ ರುಚಿಕರ ಹಾಗೂ ಪೌಷ್ಟಿಕ ಆಹಾರ.
ಚಪಾತಿ, ಅನ್ನ ಅಥವಾ ರೋಟಿಯ ಜೊತೆ ಇದು ಸೂಪರ್ ಕಾಂಬಿನೇಶನ್.

ಬೇಕಾಗುವ ಸಾಮಗ್ರಿಗಳು :

  • ಗುಜ್ಜೆ – 1 ಕಪ್ (ಚಿಕ್ಕದಾಗಿ ಕತ್ತರಿಸಿ ನೀರಿನಲ್ಲಿ ಇಟ್ಟುಕೊಳ್ಳಿ)
  • ಕಡಲೆ – 1/4 ಕಪ್ (ನೆನೆಸಿ)
  • ಕೆಂಪು ಮೆಣಸು – 2
  • ಜೀರಿಗೆ – 1 ಚಮಚ
  • ಕೊತ್ತಂಬರಿ ಬೀಜ – 1 ಚಮಚ
  • ಉದ್ದಿನ ಬೇಳೆ – 1/4 ಚಮಚ
  • ಕಾಯಿತುರಿ – 1/4 ಕಪ್

 ಒಗ್ಗರಣೆಗೆ:

  • ಸಾಸಿವೆ
  • ಎಣ್ಣೆ
  • ಕೆಂಪು ಮೆಣಸು
  • ಕರಿಬೇವಿನ ಸೊಪ್ಪು
  • ಬೆಳ್ಳುಳ್ಳಿ

ಮಾಡುವ ವಿಧಾನ :  ಮೊದಲು ಕಡಲೆ ಮತ್ತು ಗುಜ್ಜೆಯನ್ನು ಉಪ್ಪು, ನೀರು ಸೇರಿಸಿ ಚೆನ್ನಾಗಿ ಬೇಯಿಸಿ. ಕೆಂಪು ಮೆಣಸು, ಜೀರಿಗೆ, ಕೊತ್ತಂಬರಿ ಬೀಜ, ಉದ್ದಿನ ಬೇಳೆ, ಕಾಯಿತುರಿ ಹಾಕಿ ಫ್ರೈ ಮಾಡಿ,  ಫ್ರೈ ಮಾಡಿದ ಮಿಶ್ರಣವನ್ನು ಜಾರ್‌ನಲ್ಲಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ, ಬೇಯಿಸಿದ ಗುಜ್ಜೆ-ಕಡಲೆಗೆ ಈ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕುದಿಸಿ. ಸಾಸಿವೆ, ಎಣ್ಣೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಬೆಳ್ಳುಳ್ಳಿ ಹಾಕಿ ಚಟಪಟಾಯಿಸಿ ಸೇರಿಸಿ.  ಬಿಸಿ ಬಿಸಿಯಾಗಿ ಸರ್ವ್ ಮಾಡಿ…

ವಿಶೇಷ ಟಿಪ್ಸ್

  • ಸ್ವಲ್ಪ ಕಾಯಿ ಹೆಚ್ಚು ಹಾಕಿದರೆ ರುಚಿ ಹೆಚ್ಚುತ್ತದೆ
  • ಬೆಳ್ಳುಳ್ಳಿ ಒಗ್ಗರಣೆ ಗಸಿಗೆ ವಿಶೇಷ ಸುವಾಸನೆ ನೀಡುತ್ತದೆ
  • ಅನ್ನ ಅಥವಾ ಚಪಾತಿ ಎರಡಕ್ಕೂ ಸೂಪರ್ ಕಾಂಬಿನೇಶನ್

Gujje Kadale Gasi is a traditional Karnataka curry made with breadfruit and soaked chana, blended with roasted coconut spices. It pairs perfectly with chapati or rice.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

8 minutes ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

35 minutes ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

48 minutes ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…

1 hour ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…

1 hour ago

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

10 hours ago