Advertisement
ಹೊಸರುಚಿ-ಅಡುಗೆ

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

Share

ಕರ್ನಾಟಕದ ಸಾಂಪ್ರದಾಯಿಕ ಅಡುಗೆಗಳಲ್ಲಿ ಒಂದು ವಿಶೇಷ ಸ್ಥಾನ ಹೊಂದಿರುವ ಗುಜ್ಜೆ-ಕಡಲೆ ಗಸಿ ರುಚಿಕರ ಹಾಗೂ ಪೌಷ್ಟಿಕ ಆಹಾರ.
ಚಪಾತಿ, ಅನ್ನ ಅಥವಾ ರೋಟಿಯ ಜೊತೆ ಇದು ಸೂಪರ್ ಕಾಂಬಿನೇಶನ್.

ಬೇಕಾಗುವ ಸಾಮಗ್ರಿಗಳು :

  • ಗುಜ್ಜೆ – 1 ಕಪ್ (ಚಿಕ್ಕದಾಗಿ ಕತ್ತರಿಸಿ ನೀರಿನಲ್ಲಿ ಇಟ್ಟುಕೊಳ್ಳಿ)
  • ಕಡಲೆ – 1/4 ಕಪ್ (ನೆನೆಸಿ)
  • ಕೆಂಪು ಮೆಣಸು – 2
  • ಜೀರಿಗೆ – 1 ಚಮಚ
  • ಕೊತ್ತಂಬರಿ ಬೀಜ – 1 ಚಮಚ
  • ಉದ್ದಿನ ಬೇಳೆ – 1/4 ಚಮಚ
  • ಕಾಯಿತುರಿ – 1/4 ಕಪ್

 ಒಗ್ಗರಣೆಗೆ:

  • ಸಾಸಿವೆ
  • ಎಣ್ಣೆ
  • ಕೆಂಪು ಮೆಣಸು
  • ಕರಿಬೇವಿನ ಸೊಪ್ಪು
  • ಬೆಳ್ಳುಳ್ಳಿ

ಮಾಡುವ ವಿಧಾನ :  ಮೊದಲು ಕಡಲೆ ಮತ್ತು ಗುಜ್ಜೆಯನ್ನು ಉಪ್ಪು, ನೀರು ಸೇರಿಸಿ ಚೆನ್ನಾಗಿ ಬೇಯಿಸಿ. ಕೆಂಪು ಮೆಣಸು, ಜೀರಿಗೆ, ಕೊತ್ತಂಬರಿ ಬೀಜ, ಉದ್ದಿನ ಬೇಳೆ, ಕಾಯಿತುರಿ ಹಾಕಿ ಫ್ರೈ ಮಾಡಿ,  ಫ್ರೈ ಮಾಡಿದ ಮಿಶ್ರಣವನ್ನು ಜಾರ್‌ನಲ್ಲಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ, ಬೇಯಿಸಿದ ಗುಜ್ಜೆ-ಕಡಲೆಗೆ ಈ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕುದಿಸಿ. ಸಾಸಿವೆ, ಎಣ್ಣೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಬೆಳ್ಳುಳ್ಳಿ ಹಾಕಿ ಚಟಪಟಾಯಿಸಿ ಸೇರಿಸಿ.  ಬಿಸಿ ಬಿಸಿಯಾಗಿ ಸರ್ವ್ ಮಾಡಿ…

ವಿಶೇಷ ಟಿಪ್ಸ್

  • ಸ್ವಲ್ಪ ಕಾಯಿ ಹೆಚ್ಚು ಹಾಕಿದರೆ ರುಚಿ ಹೆಚ್ಚುತ್ತದೆ
  • ಬೆಳ್ಳುಳ್ಳಿ ಒಗ್ಗರಣೆ ಗಸಿಗೆ ವಿಶೇಷ ಸುವಾಸನೆ ನೀಡುತ್ತದೆ
  • ಅನ್ನ ಅಥವಾ ಚಪಾತಿ ಎರಡಕ್ಕೂ ಸೂಪರ್ ಕಾಂಬಿನೇಶನ್

Gujje Kadale Gasi is a traditional Karnataka curry made with breadfruit and soaked chana, blended with roasted coconut spices. It pairs perfectly with chapati or rice.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

8 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

9 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

9 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

15 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

17 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

21 hours ago