Advertisement
ಹೊಸರುಚಿ-ಅಡುಗೆ

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

Share

ಕರ್ನಾಟಕದ ಸಾಂಪ್ರದಾಯಿಕ ಅಡುಗೆಗಳಲ್ಲಿ ಒಂದು ವಿಶೇಷ ಸ್ಥಾನ ಹೊಂದಿರುವ ಗುಜ್ಜೆ-ಕಡಲೆ ಗಸಿ ರುಚಿಕರ ಹಾಗೂ ಪೌಷ್ಟಿಕ ಆಹಾರ.
ಚಪಾತಿ, ಅನ್ನ ಅಥವಾ ರೋಟಿಯ ಜೊತೆ ಇದು ಸೂಪರ್ ಕಾಂಬಿನೇಶನ್.

ಬೇಕಾಗುವ ಸಾಮಗ್ರಿಗಳು :

  • ಗುಜ್ಜೆ – 1 ಕಪ್ (ಚಿಕ್ಕದಾಗಿ ಕತ್ತರಿಸಿ ನೀರಿನಲ್ಲಿ ಇಟ್ಟುಕೊಳ್ಳಿ)
  • ಕಡಲೆ – 1/4 ಕಪ್ (ನೆನೆಸಿ)
  • ಕೆಂಪು ಮೆಣಸು – 2
  • ಜೀರಿಗೆ – 1 ಚಮಚ
  • ಕೊತ್ತಂಬರಿ ಬೀಜ – 1 ಚಮಚ
  • ಉದ್ದಿನ ಬೇಳೆ – 1/4 ಚಮಚ
  • ಕಾಯಿತುರಿ – 1/4 ಕಪ್

 ಒಗ್ಗರಣೆಗೆ:

  • ಸಾಸಿವೆ
  • ಎಣ್ಣೆ
  • ಕೆಂಪು ಮೆಣಸು
  • ಕರಿಬೇವಿನ ಸೊಪ್ಪು
  • ಬೆಳ್ಳುಳ್ಳಿ

ಮಾಡುವ ವಿಧಾನ :  ಮೊದಲು ಕಡಲೆ ಮತ್ತು ಗುಜ್ಜೆಯನ್ನು ಉಪ್ಪು, ನೀರು ಸೇರಿಸಿ ಚೆನ್ನಾಗಿ ಬೇಯಿಸಿ. ಕೆಂಪು ಮೆಣಸು, ಜೀರಿಗೆ, ಕೊತ್ತಂಬರಿ ಬೀಜ, ಉದ್ದಿನ ಬೇಳೆ, ಕಾಯಿತುರಿ ಹಾಕಿ ಫ್ರೈ ಮಾಡಿ,  ಫ್ರೈ ಮಾಡಿದ ಮಿಶ್ರಣವನ್ನು ಜಾರ್‌ನಲ್ಲಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ, ಬೇಯಿಸಿದ ಗುಜ್ಜೆ-ಕಡಲೆಗೆ ಈ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕುದಿಸಿ. ಸಾಸಿವೆ, ಎಣ್ಣೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಬೆಳ್ಳುಳ್ಳಿ ಹಾಕಿ ಚಟಪಟಾಯಿಸಿ ಸೇರಿಸಿ.  ಬಿಸಿ ಬಿಸಿಯಾಗಿ ಸರ್ವ್ ಮಾಡಿ…

ವಿಶೇಷ ಟಿಪ್ಸ್

  • ಸ್ವಲ್ಪ ಕಾಯಿ ಹೆಚ್ಚು ಹಾಕಿದರೆ ರುಚಿ ಹೆಚ್ಚುತ್ತದೆ
  • ಬೆಳ್ಳುಳ್ಳಿ ಒಗ್ಗರಣೆ ಗಸಿಗೆ ವಿಶೇಷ ಸುವಾಸನೆ ನೀಡುತ್ತದೆ
  • ಅನ್ನ ಅಥವಾ ಚಪಾತಿ ಎರಡಕ್ಕೂ ಸೂಪರ್ ಕಾಂಬಿನೇಶನ್

Gujje Kadale Gasi is a traditional Karnataka curry made with breadfruit and soaked chana, blended with roasted coconut spices. It pairs perfectly with chapati or rice.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

2 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

2 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

17 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago