Advertisement
ಹೊಸರುಚಿ-ಅಡುಗೆ

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

Share

ಕರ್ನಾಟಕದ ಸಾಂಪ್ರದಾಯಿಕ ಅಡುಗೆಗಳಲ್ಲಿ ಒಂದು ವಿಶೇಷ ಸ್ಥಾನ ಹೊಂದಿರುವ ಗುಜ್ಜೆ-ಕಡಲೆ ಗಸಿ ರುಚಿಕರ ಹಾಗೂ ಪೌಷ್ಟಿಕ ಆಹಾರ.
ಚಪಾತಿ, ಅನ್ನ ಅಥವಾ ರೋಟಿಯ ಜೊತೆ ಇದು ಸೂಪರ್ ಕಾಂಬಿನೇಶನ್.

ಬೇಕಾಗುವ ಸಾಮಗ್ರಿಗಳು :

  • ಗುಜ್ಜೆ – 1 ಕಪ್ (ಚಿಕ್ಕದಾಗಿ ಕತ್ತರಿಸಿ ನೀರಿನಲ್ಲಿ ಇಟ್ಟುಕೊಳ್ಳಿ)
  • ಕಡಲೆ – 1/4 ಕಪ್ (ನೆನೆಸಿ)
  • ಕೆಂಪು ಮೆಣಸು – 2
  • ಜೀರಿಗೆ – 1 ಚಮಚ
  • ಕೊತ್ತಂಬರಿ ಬೀಜ – 1 ಚಮಚ
  • ಉದ್ದಿನ ಬೇಳೆ – 1/4 ಚಮಚ
  • ಕಾಯಿತುರಿ – 1/4 ಕಪ್

 ಒಗ್ಗರಣೆಗೆ:

  • ಸಾಸಿವೆ
  • ಎಣ್ಣೆ
  • ಕೆಂಪು ಮೆಣಸು
  • ಕರಿಬೇವಿನ ಸೊಪ್ಪು
  • ಬೆಳ್ಳುಳ್ಳಿ

ಮಾಡುವ ವಿಧಾನ :  ಮೊದಲು ಕಡಲೆ ಮತ್ತು ಗುಜ್ಜೆಯನ್ನು ಉಪ್ಪು, ನೀರು ಸೇರಿಸಿ ಚೆನ್ನಾಗಿ ಬೇಯಿಸಿ. ಕೆಂಪು ಮೆಣಸು, ಜೀರಿಗೆ, ಕೊತ್ತಂಬರಿ ಬೀಜ, ಉದ್ದಿನ ಬೇಳೆ, ಕಾಯಿತುರಿ ಹಾಕಿ ಫ್ರೈ ಮಾಡಿ,  ಫ್ರೈ ಮಾಡಿದ ಮಿಶ್ರಣವನ್ನು ಜಾರ್‌ನಲ್ಲಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ, ಬೇಯಿಸಿದ ಗುಜ್ಜೆ-ಕಡಲೆಗೆ ಈ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕುದಿಸಿ. ಸಾಸಿವೆ, ಎಣ್ಣೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಬೆಳ್ಳುಳ್ಳಿ ಹಾಕಿ ಚಟಪಟಾಯಿಸಿ ಸೇರಿಸಿ.  ಬಿಸಿ ಬಿಸಿಯಾಗಿ ಸರ್ವ್ ಮಾಡಿ…

ವಿಶೇಷ ಟಿಪ್ಸ್

  • ಸ್ವಲ್ಪ ಕಾಯಿ ಹೆಚ್ಚು ಹಾಕಿದರೆ ರುಚಿ ಹೆಚ್ಚುತ್ತದೆ
  • ಬೆಳ್ಳುಳ್ಳಿ ಒಗ್ಗರಣೆ ಗಸಿಗೆ ವಿಶೇಷ ಸುವಾಸನೆ ನೀಡುತ್ತದೆ
  • ಅನ್ನ ಅಥವಾ ಚಪಾತಿ ಎರಡಕ್ಕೂ ಸೂಪರ್ ಕಾಂಬಿನೇಶನ್

Gujje Kadale Gasi is a traditional Karnataka curry made with breadfruit and soaked chana, blended with roasted coconut spices. It pairs perfectly with chapati or rice.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

1 hour ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

2 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

21 hours ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

1 day ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago