Advertisement
ಹೊಸರುಚಿ-ಅಡುಗೆ

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

Share

ಕರ್ನಾಟಕದ ಸಾಂಪ್ರದಾಯಿಕ ಅಡುಗೆಗಳಲ್ಲಿ ಒಂದು ವಿಶೇಷ ಸ್ಥಾನ ಹೊಂದಿರುವ ಗುಜ್ಜೆ-ಕಡಲೆ ಗಸಿ ರುಚಿಕರ ಹಾಗೂ ಪೌಷ್ಟಿಕ ಆಹಾರ.
ಚಪಾತಿ, ಅನ್ನ ಅಥವಾ ರೋಟಿಯ ಜೊತೆ ಇದು ಸೂಪರ್ ಕಾಂಬಿನೇಶನ್.

ಬೇಕಾಗುವ ಸಾಮಗ್ರಿಗಳು :

  • ಗುಜ್ಜೆ – 1 ಕಪ್ (ಚಿಕ್ಕದಾಗಿ ಕತ್ತರಿಸಿ ನೀರಿನಲ್ಲಿ ಇಟ್ಟುಕೊಳ್ಳಿ)
  • ಕಡಲೆ – 1/4 ಕಪ್ (ನೆನೆಸಿ)
  • ಕೆಂಪು ಮೆಣಸು – 2
  • ಜೀರಿಗೆ – 1 ಚಮಚ
  • ಕೊತ್ತಂಬರಿ ಬೀಜ – 1 ಚಮಚ
  • ಉದ್ದಿನ ಬೇಳೆ – 1/4 ಚಮಚ
  • ಕಾಯಿತುರಿ – 1/4 ಕಪ್

 ಒಗ್ಗರಣೆಗೆ:

  • ಸಾಸಿವೆ
  • ಎಣ್ಣೆ
  • ಕೆಂಪು ಮೆಣಸು
  • ಕರಿಬೇವಿನ ಸೊಪ್ಪು
  • ಬೆಳ್ಳುಳ್ಳಿ

ಮಾಡುವ ವಿಧಾನ :  ಮೊದಲು ಕಡಲೆ ಮತ್ತು ಗುಜ್ಜೆಯನ್ನು ಉಪ್ಪು, ನೀರು ಸೇರಿಸಿ ಚೆನ್ನಾಗಿ ಬೇಯಿಸಿ. ಕೆಂಪು ಮೆಣಸು, ಜೀರಿಗೆ, ಕೊತ್ತಂಬರಿ ಬೀಜ, ಉದ್ದಿನ ಬೇಳೆ, ಕಾಯಿತುರಿ ಹಾಕಿ ಫ್ರೈ ಮಾಡಿ,  ಫ್ರೈ ಮಾಡಿದ ಮಿಶ್ರಣವನ್ನು ಜಾರ್‌ನಲ್ಲಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ, ಬೇಯಿಸಿದ ಗುಜ್ಜೆ-ಕಡಲೆಗೆ ಈ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕುದಿಸಿ. ಸಾಸಿವೆ, ಎಣ್ಣೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಬೆಳ್ಳುಳ್ಳಿ ಹಾಕಿ ಚಟಪಟಾಯಿಸಿ ಸೇರಿಸಿ.  ಬಿಸಿ ಬಿಸಿಯಾಗಿ ಸರ್ವ್ ಮಾಡಿ…

ವಿಶೇಷ ಟಿಪ್ಸ್

  • ಸ್ವಲ್ಪ ಕಾಯಿ ಹೆಚ್ಚು ಹಾಕಿದರೆ ರುಚಿ ಹೆಚ್ಚುತ್ತದೆ
  • ಬೆಳ್ಳುಳ್ಳಿ ಒಗ್ಗರಣೆ ಗಸಿಗೆ ವಿಶೇಷ ಸುವಾಸನೆ ನೀಡುತ್ತದೆ
  • ಅನ್ನ ಅಥವಾ ಚಪಾತಿ ಎರಡಕ್ಕೂ ಸೂಪರ್ ಕಾಂಬಿನೇಶನ್

Gujje Kadale Gasi is a traditional Karnataka curry made with breadfruit and soaked chana, blended with roasted coconut spices. It pairs perfectly with chapati or rice.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

5 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

12 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago