Advertisement
ಸುದ್ದಿಗಳು

#GulabCyclone | ಗುಜರಾತ್ ತೀರದಲ್ಲೂ ವಾಯುಭಾರ ಕುಸಿತ | ಅಪ್ಪಳಿಸುತ್ತಿದೆ “ಗುಲಾಬ್‌” ಚಂಡಮಾರುತ |

Share

“ಗುಲಾಬ್” ಚಂಡಮಾರುತ ಇಂದು ಸಂಜೆ ಅಥವಾ ರಾತ್ರಿ ಒಡಿಶಾದ ಭುವನೇಶ್ವರ ಹಾಗೂ ಆಂಧ್ರ ಕರಾವಳಿಯ ವಿಶಾಖಪಟ್ಟಣ ಮೂಲಕ ಭೂಭಾಗಕ್ಕೆ ಪ್ರವೇಶಿಸುವ ಚಂಡಮಾರುತವು, ಛತ್ತೀಸಗಡ, ಮಹಾರಾಷ್ಟ್ರ ಹಾಗೂ ಗುಜರಾತ್ ಭಾಗಗಳಲ್ಲಿ ಸಂಚರಿಸಿ ಸೆ.30 ರ ಮಧ್ಯಾಹ್ನ  ಅರಬ್ಬಿ ಸಮುದ್ರ ಪ್ರವೇಶಿಸಲಿದೆ.
ಈಗಾಗಲೇ ಗುಜರಾತ್ ತೀರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಉಂಟಾಗಿದೆ. ಸದ್ಯ ಚಂಡಮಾರುತವು ಗೋಪಾಲ್‌ ಪುರದಿಂದ 270 ಕಿಮೀ ದೂರದಲ್ಲಿ  ಹಾಗೂ ಕಳಿಂಗಪಟ್ಟಣದಿಂದ 330 ಕಿಮೀ ದೂರದಲ್ಲಿ  ಚಂಡಮಾರುತದ ಪ್ರಭಾವ ಕಂಡುಬಂದಿದೆ.

ಈಗಾಗಲೇ ಗುಜರಾತ್ ತೀರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಉಂಟಾದ ಕಾರಣ ” ಗುಲಾಬ್” ನ ಪರಿಣಾಮ ಕರ್ನಾಟಕ ಮೇಲೆ ಅಷ್ಟೇನು ಇಲ್ಲದಿದ್ದರೂ, ಉತ್ತರ ಕರ್ನಾಟಕದ ಯಾದಗಿರಿ, ವಿಜಯಪುರ, ಬೀದರ್ ಮತ್ತು ಗುಲ್ಬರ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಅನಾಹುತ ಸೃಷ್ಟಿಸುವ ಮುನ್ಸೂಚನೆ ಇದೆ.

ಸೆ. 29 ರಿಂದ  ಇದರ ಪ್ರಭಾವ ಕ್ಷೀಣಿಸುತ್ತಿದ್ದು. ಸೆ.30 ನೇ ತಾರೀಕಿನಂದು ಆಂಧ್ರ ಹಾಗೂ ತಮಿಳುನಾಡು ನೇರಕ್ಕೆ ಬಂಗಾಳಕೂಲ್ಲಿಯಲ್ಲಿ ಬೃಹತ್ ಚಂಡಮಾರುತ ತಿರುಗುವಿಕೆ (Cyclonic Circulation) ಉಂಟಾಗುವ ಲಕ್ಷಣಗಳಿರುವುದರಿಂದ ಅ.1 ತಾರೀಕಿನಿಂದ ಕಾಸರಗೋಡು ಹಾಗೂ ಕರ್ನಾಟಕ ಕರಾವಳಿ ಭಾಗಗಳೂ ಸೇರಿದಂತೆ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

This is box title

27.9.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ದಕ್ಷಿಣ ಕನ್ನಡದ ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ರಾಯಚೂರು, ವಿಜಾಪುರ, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

18 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago