ಸುದ್ದಿಗಳು

ಕೋವಿ ಡಿಪಾಸಿಟ್‌ | ರೈತರು ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರೆ ಪರಿಶೀಲಿಸಿ ಕ್ರಮ | ನಿಯಮದಲ್ಲಿ ಸಡಿಲಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚುನಾವಣೆಯ ಹಿನ್ನೆಲೆಯಲ್ಲಿ  ರೈತರು ಕೋವಿ ಡಿಪಾಸಿಟ್‌ ಮಾಡುವ ಆದೇಶದಲ್ಲಿ  ಕೊಂಚ ವಿನಾಯಿತಿ ರೈತರಿಗೆ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ರೈತರು ಕೋವಿ ಡಿಪಾಸಿಟ್‌ ಬಗ್ಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರೆ ಅನಿವಾರ್ಯತೆ ಪರಿಶೀಲಿಸಿ ವಿನಾಯಿತಿ ನೀಡಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

Advertisement
Advertisement

ಚುನಾವಣೆ ಸಂದರ್ಭ  ಶಾಂತಿ ಮತ್ತು ಮುಂಜಾಗ್ರತಾ ಕ್ರಮವಾಗಿ ಶಸ್ತ್ರಾಸ್ತ್ರ ಠೇವಣಿಗೆ ಆದೇಶಿಸಲಾಗುತ್ತದೆ. ಪ್ರತೀ ಬಾರಿಯೂ ಚುನಾವಣೆಯ ಸಮಯದಲ್ಲಿ  ಈ ನಿಯಮ ಇರುತ್ತದೆ. ಕಳೆದ ಎರಡು ಮೂರು ಚುನಾವಣೆಯಿಂದಲೇ ರೈತರು ಈ ನಿಯಮ ಸಡಿಲಿಕೆ ಮಾಡಬೇಕು. ಕೋವಿ ಡಿಪಾಸಿಟ್‌ ಇಡುವ ನಿಯಮ ಸಡಿಲಿಕೆ ಮಾಡಬೇಕು ಎಂದು ಒತ್ತಾಯ ಮಾಡುತ್ತಲೇ ಬಂದಿದ್ದರು. ಈ ಬಾರಿಯೂ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ರೈತರಿಗೆ ಆಗುವ ಸಮಸ್ಯೆ ಬಗ್ಗೆಯೂ ಮಾಹಿತಿ ನೀಡಿದ್ದರು. ಕ್ರಿಮಿನಲ್‌ ಹಿನ್ನಲೆಯುಳ್ಳವರಿಗೆ ಡಿಪಾಸಿಟ್‌ ಮಾಡಲು ಸೂಚನೆ ನೀಡಿ, ಉಳಿದ ಕೃಷಿಕರಿಗೆ ವಿನಾಯಿತಿ ನೀಡಿ ಎಂದೂ ಹೇಳಿದ್ದರು. ಇದೀಗ  ದ ಕ ಜಿಲ್ಲಾಧಿಕಾರಿಗಳು ನಿಯಮದಲ್ಲಿ ಕೊಂಚ ಸಡಿಲಿಕೆ ಮಾಡಲು ದ ಕ ಜಿಲ್ಲೆಯ ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ. ಅಪರಾಧ ಹಿನ್ನಲೆ, ಜಾಮೀನಿನಲ್ಲಿ ಬಿಡುಗಡೆಯಾದವರು, ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ದೊಂಬಿ ಗಲಾಟೆಯಲ್ಲಿ ಭಾಗಿಯಾದವರನ್ನು ಹೊರತುಪಡಿಸಿ ಉಳಿದ ರೈತರಿಗೆ ಶಸ್ತ್ರಾಸ್ತ್ರ ಠೇವಣಿಯಲ್ಲಿ ವಿನಾಯಿತಿ ನೀಡಿದ್ದಾರೆ.

ಆದರೆ ರೈತರು ಬೆಳೆ ರಕ್ಷಣೆಗಾಗಿ ಕೋವಿಯ ಆವಶ್ಯಕತೆ ಇದ್ದರೆ ಪೂರಕ ದಾಖಲೆಗಳೊಂದಿಗೆ ತಾಲೂಕು ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದಕ್ಕಾಗಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸ್ಕ್ರೀನಿಂಗ್ ಸಮಿತಿಗಳನ್ನು ರಚಿಸಲಾಗಿದೆ.ಈ ಸಮಿತಿ ಅಹವಾಲುಗಳ ಪರಿಶೀಲಿಸಿ ಅರ್ಹ ಪ್ರಕರಣಗಳಲ್ಲಿ , ಅವಶ್ಯಕತೆ ಇದ್ದವರಿಗೆ ಠೇವಣಿ ಇಡುವುದರಿಂದ ವಿನಾಯಿತಿ ನೀಡಲು ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

25 minutes ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

10 hours ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

11 hours ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

11 hours ago

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…

15 hours ago

ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…

ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…

15 hours ago