Advertisement
ಸುದ್ದಿಗಳು

ಕೋವಿ ಡಿಪಾಸಿಟ್‌ | ರೈತರು ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರೆ ಪರಿಶೀಲಿಸಿ ಕ್ರಮ | ನಿಯಮದಲ್ಲಿ ಸಡಿಲಿಕೆ |

Share

ಚುನಾವಣೆಯ ಹಿನ್ನೆಲೆಯಲ್ಲಿ  ರೈತರು ಕೋವಿ ಡಿಪಾಸಿಟ್‌ ಮಾಡುವ ಆದೇಶದಲ್ಲಿ  ಕೊಂಚ ವಿನಾಯಿತಿ ರೈತರಿಗೆ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ರೈತರು ಕೋವಿ ಡಿಪಾಸಿಟ್‌ ಬಗ್ಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರೆ ಅನಿವಾರ್ಯತೆ ಪರಿಶೀಲಿಸಿ ವಿನಾಯಿತಿ ನೀಡಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಚುನಾವಣೆ ಸಂದರ್ಭ  ಶಾಂತಿ ಮತ್ತು ಮುಂಜಾಗ್ರತಾ ಕ್ರಮವಾಗಿ ಶಸ್ತ್ರಾಸ್ತ್ರ ಠೇವಣಿಗೆ ಆದೇಶಿಸಲಾಗುತ್ತದೆ. ಪ್ರತೀ ಬಾರಿಯೂ ಚುನಾವಣೆಯ ಸಮಯದಲ್ಲಿ  ಈ ನಿಯಮ ಇರುತ್ತದೆ. ಕಳೆದ ಎರಡು ಮೂರು ಚುನಾವಣೆಯಿಂದಲೇ ರೈತರು ಈ ನಿಯಮ ಸಡಿಲಿಕೆ ಮಾಡಬೇಕು. ಕೋವಿ ಡಿಪಾಸಿಟ್‌ ಇಡುವ ನಿಯಮ ಸಡಿಲಿಕೆ ಮಾಡಬೇಕು ಎಂದು ಒತ್ತಾಯ ಮಾಡುತ್ತಲೇ ಬಂದಿದ್ದರು. ಈ ಬಾರಿಯೂ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ರೈತರಿಗೆ ಆಗುವ ಸಮಸ್ಯೆ ಬಗ್ಗೆಯೂ ಮಾಹಿತಿ ನೀಡಿದ್ದರು. ಕ್ರಿಮಿನಲ್‌ ಹಿನ್ನಲೆಯುಳ್ಳವರಿಗೆ ಡಿಪಾಸಿಟ್‌ ಮಾಡಲು ಸೂಚನೆ ನೀಡಿ, ಉಳಿದ ಕೃಷಿಕರಿಗೆ ವಿನಾಯಿತಿ ನೀಡಿ ಎಂದೂ ಹೇಳಿದ್ದರು. ಇದೀಗ  ದ ಕ ಜಿಲ್ಲಾಧಿಕಾರಿಗಳು ನಿಯಮದಲ್ಲಿ ಕೊಂಚ ಸಡಿಲಿಕೆ ಮಾಡಲು ದ ಕ ಜಿಲ್ಲೆಯ ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ. ಅಪರಾಧ ಹಿನ್ನಲೆ, ಜಾಮೀನಿನಲ್ಲಿ ಬಿಡುಗಡೆಯಾದವರು, ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ದೊಂಬಿ ಗಲಾಟೆಯಲ್ಲಿ ಭಾಗಿಯಾದವರನ್ನು ಹೊರತುಪಡಿಸಿ ಉಳಿದ ರೈತರಿಗೆ ಶಸ್ತ್ರಾಸ್ತ್ರ ಠೇವಣಿಯಲ್ಲಿ ವಿನಾಯಿತಿ ನೀಡಿದ್ದಾರೆ.

ಆದರೆ ರೈತರು ಬೆಳೆ ರಕ್ಷಣೆಗಾಗಿ ಕೋವಿಯ ಆವಶ್ಯಕತೆ ಇದ್ದರೆ ಪೂರಕ ದಾಖಲೆಗಳೊಂದಿಗೆ ತಾಲೂಕು ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದಕ್ಕಾಗಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸ್ಕ್ರೀನಿಂಗ್ ಸಮಿತಿಗಳನ್ನು ರಚಿಸಲಾಗಿದೆ.ಈ ಸಮಿತಿ ಅಹವಾಲುಗಳ ಪರಿಶೀಲಿಸಿ ಅರ್ಹ ಪ್ರಕರಣಗಳಲ್ಲಿ , ಅವಶ್ಯಕತೆ ಇದ್ದವರಿಗೆ ಠೇವಣಿ ಇಡುವುದರಿಂದ ವಿನಾಯಿತಿ ನೀಡಲು ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ

ಖಾರೀಫ್‌ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…

5 hours ago

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

14 hours ago

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

15 hours ago

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

1 day ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

2 days ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

2 days ago