Advertisement
ಸುದ್ದಿಗಳು

ಕೋವಿ ಡಿಪಾಸಿಟ್‌ | ರೈತರು ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರೆ ಪರಿಶೀಲಿಸಿ ಕ್ರಮ | ನಿಯಮದಲ್ಲಿ ಸಡಿಲಿಕೆ |

Share

ಚುನಾವಣೆಯ ಹಿನ್ನೆಲೆಯಲ್ಲಿ  ರೈತರು ಕೋವಿ ಡಿಪಾಸಿಟ್‌ ಮಾಡುವ ಆದೇಶದಲ್ಲಿ  ಕೊಂಚ ವಿನಾಯಿತಿ ರೈತರಿಗೆ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ರೈತರು ಕೋವಿ ಡಿಪಾಸಿಟ್‌ ಬಗ್ಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರೆ ಅನಿವಾರ್ಯತೆ ಪರಿಶೀಲಿಸಿ ವಿನಾಯಿತಿ ನೀಡಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಚುನಾವಣೆ ಸಂದರ್ಭ  ಶಾಂತಿ ಮತ್ತು ಮುಂಜಾಗ್ರತಾ ಕ್ರಮವಾಗಿ ಶಸ್ತ್ರಾಸ್ತ್ರ ಠೇವಣಿಗೆ ಆದೇಶಿಸಲಾಗುತ್ತದೆ. ಪ್ರತೀ ಬಾರಿಯೂ ಚುನಾವಣೆಯ ಸಮಯದಲ್ಲಿ  ಈ ನಿಯಮ ಇರುತ್ತದೆ. ಕಳೆದ ಎರಡು ಮೂರು ಚುನಾವಣೆಯಿಂದಲೇ ರೈತರು ಈ ನಿಯಮ ಸಡಿಲಿಕೆ ಮಾಡಬೇಕು. ಕೋವಿ ಡಿಪಾಸಿಟ್‌ ಇಡುವ ನಿಯಮ ಸಡಿಲಿಕೆ ಮಾಡಬೇಕು ಎಂದು ಒತ್ತಾಯ ಮಾಡುತ್ತಲೇ ಬಂದಿದ್ದರು. ಈ ಬಾರಿಯೂ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ರೈತರಿಗೆ ಆಗುವ ಸಮಸ್ಯೆ ಬಗ್ಗೆಯೂ ಮಾಹಿತಿ ನೀಡಿದ್ದರು. ಕ್ರಿಮಿನಲ್‌ ಹಿನ್ನಲೆಯುಳ್ಳವರಿಗೆ ಡಿಪಾಸಿಟ್‌ ಮಾಡಲು ಸೂಚನೆ ನೀಡಿ, ಉಳಿದ ಕೃಷಿಕರಿಗೆ ವಿನಾಯಿತಿ ನೀಡಿ ಎಂದೂ ಹೇಳಿದ್ದರು. ಇದೀಗ  ದ ಕ ಜಿಲ್ಲಾಧಿಕಾರಿಗಳು ನಿಯಮದಲ್ಲಿ ಕೊಂಚ ಸಡಿಲಿಕೆ ಮಾಡಲು ದ ಕ ಜಿಲ್ಲೆಯ ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ. ಅಪರಾಧ ಹಿನ್ನಲೆ, ಜಾಮೀನಿನಲ್ಲಿ ಬಿಡುಗಡೆಯಾದವರು, ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ದೊಂಬಿ ಗಲಾಟೆಯಲ್ಲಿ ಭಾಗಿಯಾದವರನ್ನು ಹೊರತುಪಡಿಸಿ ಉಳಿದ ರೈತರಿಗೆ ಶಸ್ತ್ರಾಸ್ತ್ರ ಠೇವಣಿಯಲ್ಲಿ ವಿನಾಯಿತಿ ನೀಡಿದ್ದಾರೆ.

ಆದರೆ ರೈತರು ಬೆಳೆ ರಕ್ಷಣೆಗಾಗಿ ಕೋವಿಯ ಆವಶ್ಯಕತೆ ಇದ್ದರೆ ಪೂರಕ ದಾಖಲೆಗಳೊಂದಿಗೆ ತಾಲೂಕು ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದಕ್ಕಾಗಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸ್ಕ್ರೀನಿಂಗ್ ಸಮಿತಿಗಳನ್ನು ರಚಿಸಲಾಗಿದೆ.ಈ ಸಮಿತಿ ಅಹವಾಲುಗಳ ಪರಿಶೀಲಿಸಿ ಅರ್ಹ ಪ್ರಕರಣಗಳಲ್ಲಿ , ಅವಶ್ಯಕತೆ ಇದ್ದವರಿಗೆ ಠೇವಣಿ ಇಡುವುದರಿಂದ ವಿನಾಯಿತಿ ನೀಡಲು ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago