Advertisement
ಸುದ್ದಿಗಳು

ಕೋವಿ ಡಿಪಾಸಿಟ್‌ | ರೈತರು ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರೆ ಪರಿಶೀಲಿಸಿ ಕ್ರಮ | ನಿಯಮದಲ್ಲಿ ಸಡಿಲಿಕೆ |

Share

ಚುನಾವಣೆಯ ಹಿನ್ನೆಲೆಯಲ್ಲಿ  ರೈತರು ಕೋವಿ ಡಿಪಾಸಿಟ್‌ ಮಾಡುವ ಆದೇಶದಲ್ಲಿ  ಕೊಂಚ ವಿನಾಯಿತಿ ರೈತರಿಗೆ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ರೈತರು ಕೋವಿ ಡಿಪಾಸಿಟ್‌ ಬಗ್ಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರೆ ಅನಿವಾರ್ಯತೆ ಪರಿಶೀಲಿಸಿ ವಿನಾಯಿತಿ ನೀಡಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಚುನಾವಣೆ ಸಂದರ್ಭ  ಶಾಂತಿ ಮತ್ತು ಮುಂಜಾಗ್ರತಾ ಕ್ರಮವಾಗಿ ಶಸ್ತ್ರಾಸ್ತ್ರ ಠೇವಣಿಗೆ ಆದೇಶಿಸಲಾಗುತ್ತದೆ. ಪ್ರತೀ ಬಾರಿಯೂ ಚುನಾವಣೆಯ ಸಮಯದಲ್ಲಿ  ಈ ನಿಯಮ ಇರುತ್ತದೆ. ಕಳೆದ ಎರಡು ಮೂರು ಚುನಾವಣೆಯಿಂದಲೇ ರೈತರು ಈ ನಿಯಮ ಸಡಿಲಿಕೆ ಮಾಡಬೇಕು. ಕೋವಿ ಡಿಪಾಸಿಟ್‌ ಇಡುವ ನಿಯಮ ಸಡಿಲಿಕೆ ಮಾಡಬೇಕು ಎಂದು ಒತ್ತಾಯ ಮಾಡುತ್ತಲೇ ಬಂದಿದ್ದರು. ಈ ಬಾರಿಯೂ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ರೈತರಿಗೆ ಆಗುವ ಸಮಸ್ಯೆ ಬಗ್ಗೆಯೂ ಮಾಹಿತಿ ನೀಡಿದ್ದರು. ಕ್ರಿಮಿನಲ್‌ ಹಿನ್ನಲೆಯುಳ್ಳವರಿಗೆ ಡಿಪಾಸಿಟ್‌ ಮಾಡಲು ಸೂಚನೆ ನೀಡಿ, ಉಳಿದ ಕೃಷಿಕರಿಗೆ ವಿನಾಯಿತಿ ನೀಡಿ ಎಂದೂ ಹೇಳಿದ್ದರು. ಇದೀಗ  ದ ಕ ಜಿಲ್ಲಾಧಿಕಾರಿಗಳು ನಿಯಮದಲ್ಲಿ ಕೊಂಚ ಸಡಿಲಿಕೆ ಮಾಡಲು ದ ಕ ಜಿಲ್ಲೆಯ ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ. ಅಪರಾಧ ಹಿನ್ನಲೆ, ಜಾಮೀನಿನಲ್ಲಿ ಬಿಡುಗಡೆಯಾದವರು, ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ದೊಂಬಿ ಗಲಾಟೆಯಲ್ಲಿ ಭಾಗಿಯಾದವರನ್ನು ಹೊರತುಪಡಿಸಿ ಉಳಿದ ರೈತರಿಗೆ ಶಸ್ತ್ರಾಸ್ತ್ರ ಠೇವಣಿಯಲ್ಲಿ ವಿನಾಯಿತಿ ನೀಡಿದ್ದಾರೆ.

ಆದರೆ ರೈತರು ಬೆಳೆ ರಕ್ಷಣೆಗಾಗಿ ಕೋವಿಯ ಆವಶ್ಯಕತೆ ಇದ್ದರೆ ಪೂರಕ ದಾಖಲೆಗಳೊಂದಿಗೆ ತಾಲೂಕು ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದಕ್ಕಾಗಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸ್ಕ್ರೀನಿಂಗ್ ಸಮಿತಿಗಳನ್ನು ರಚಿಸಲಾಗಿದೆ.ಈ ಸಮಿತಿ ಅಹವಾಲುಗಳ ಪರಿಶೀಲಿಸಿ ಅರ್ಹ ಪ್ರಕರಣಗಳಲ್ಲಿ , ಅವಶ್ಯಕತೆ ಇದ್ದವರಿಗೆ ಠೇವಣಿ ಇಡುವುದರಿಂದ ವಿನಾಯಿತಿ ನೀಡಲು ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

13 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

13 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

2 days ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

2 days ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago