Advertisement
ಸುದ್ದಿಗಳು

ಕೋವಿ ಡಿಪಾಸಿಟ್‌ | ರೈತರು ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರೆ ಪರಿಶೀಲಿಸಿ ಕ್ರಮ | ನಿಯಮದಲ್ಲಿ ಸಡಿಲಿಕೆ |

Share

ಚುನಾವಣೆಯ ಹಿನ್ನೆಲೆಯಲ್ಲಿ  ರೈತರು ಕೋವಿ ಡಿಪಾಸಿಟ್‌ ಮಾಡುವ ಆದೇಶದಲ್ಲಿ  ಕೊಂಚ ವಿನಾಯಿತಿ ರೈತರಿಗೆ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ರೈತರು ಕೋವಿ ಡಿಪಾಸಿಟ್‌ ಬಗ್ಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರೆ ಅನಿವಾರ್ಯತೆ ಪರಿಶೀಲಿಸಿ ವಿನಾಯಿತಿ ನೀಡಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಚುನಾವಣೆ ಸಂದರ್ಭ  ಶಾಂತಿ ಮತ್ತು ಮುಂಜಾಗ್ರತಾ ಕ್ರಮವಾಗಿ ಶಸ್ತ್ರಾಸ್ತ್ರ ಠೇವಣಿಗೆ ಆದೇಶಿಸಲಾಗುತ್ತದೆ. ಪ್ರತೀ ಬಾರಿಯೂ ಚುನಾವಣೆಯ ಸಮಯದಲ್ಲಿ  ಈ ನಿಯಮ ಇರುತ್ತದೆ. ಕಳೆದ ಎರಡು ಮೂರು ಚುನಾವಣೆಯಿಂದಲೇ ರೈತರು ಈ ನಿಯಮ ಸಡಿಲಿಕೆ ಮಾಡಬೇಕು. ಕೋವಿ ಡಿಪಾಸಿಟ್‌ ಇಡುವ ನಿಯಮ ಸಡಿಲಿಕೆ ಮಾಡಬೇಕು ಎಂದು ಒತ್ತಾಯ ಮಾಡುತ್ತಲೇ ಬಂದಿದ್ದರು. ಈ ಬಾರಿಯೂ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ರೈತರಿಗೆ ಆಗುವ ಸಮಸ್ಯೆ ಬಗ್ಗೆಯೂ ಮಾಹಿತಿ ನೀಡಿದ್ದರು. ಕ್ರಿಮಿನಲ್‌ ಹಿನ್ನಲೆಯುಳ್ಳವರಿಗೆ ಡಿಪಾಸಿಟ್‌ ಮಾಡಲು ಸೂಚನೆ ನೀಡಿ, ಉಳಿದ ಕೃಷಿಕರಿಗೆ ವಿನಾಯಿತಿ ನೀಡಿ ಎಂದೂ ಹೇಳಿದ್ದರು. ಇದೀಗ  ದ ಕ ಜಿಲ್ಲಾಧಿಕಾರಿಗಳು ನಿಯಮದಲ್ಲಿ ಕೊಂಚ ಸಡಿಲಿಕೆ ಮಾಡಲು ದ ಕ ಜಿಲ್ಲೆಯ ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ. ಅಪರಾಧ ಹಿನ್ನಲೆ, ಜಾಮೀನಿನಲ್ಲಿ ಬಿಡುಗಡೆಯಾದವರು, ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ದೊಂಬಿ ಗಲಾಟೆಯಲ್ಲಿ ಭಾಗಿಯಾದವರನ್ನು ಹೊರತುಪಡಿಸಿ ಉಳಿದ ರೈತರಿಗೆ ಶಸ್ತ್ರಾಸ್ತ್ರ ಠೇವಣಿಯಲ್ಲಿ ವಿನಾಯಿತಿ ನೀಡಿದ್ದಾರೆ.

ಆದರೆ ರೈತರು ಬೆಳೆ ರಕ್ಷಣೆಗಾಗಿ ಕೋವಿಯ ಆವಶ್ಯಕತೆ ಇದ್ದರೆ ಪೂರಕ ದಾಖಲೆಗಳೊಂದಿಗೆ ತಾಲೂಕು ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದಕ್ಕಾಗಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸ್ಕ್ರೀನಿಂಗ್ ಸಮಿತಿಗಳನ್ನು ರಚಿಸಲಾಗಿದೆ.ಈ ಸಮಿತಿ ಅಹವಾಲುಗಳ ಪರಿಶೀಲಿಸಿ ಅರ್ಹ ಪ್ರಕರಣಗಳಲ್ಲಿ , ಅವಶ್ಯಕತೆ ಇದ್ದವರಿಗೆ ಠೇವಣಿ ಇಡುವುದರಿಂದ ವಿನಾಯಿತಿ ನೀಡಲು ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ

ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…

3 hours ago

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…

5 hours ago

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…

6 hours ago

ಅಡಿಕೆ ಕೃಷಿ ಲಾಭದಾಯಕವೇ..? – ಮೂರು ವರ್ಷದಲ್ಲಿ ಕೆಜಿಗೆ ₹34.53 ವೆಚ್ಚ ಏರಿಕೆ – ನ್ಯಾಯಸಮ್ಮತ ಬೆಲೆಗಾಗಿ ರೈತರ ಒತ್ತಾಯ

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

14 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

15 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

16 hours ago