Advertisement
ಸುದ್ದಿಗಳು

ಕೋವಿ ಡಿಪಾಸಿಟ್‌ | ರೈತರು ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರೆ ಪರಿಶೀಲಿಸಿ ಕ್ರಮ | ನಿಯಮದಲ್ಲಿ ಸಡಿಲಿಕೆ |

Share

ಚುನಾವಣೆಯ ಹಿನ್ನೆಲೆಯಲ್ಲಿ  ರೈತರು ಕೋವಿ ಡಿಪಾಸಿಟ್‌ ಮಾಡುವ ಆದೇಶದಲ್ಲಿ  ಕೊಂಚ ವಿನಾಯಿತಿ ರೈತರಿಗೆ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ರೈತರು ಕೋವಿ ಡಿಪಾಸಿಟ್‌ ಬಗ್ಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರೆ ಅನಿವಾರ್ಯತೆ ಪರಿಶೀಲಿಸಿ ವಿನಾಯಿತಿ ನೀಡಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

Advertisement
Advertisement

ಚುನಾವಣೆ ಸಂದರ್ಭ  ಶಾಂತಿ ಮತ್ತು ಮುಂಜಾಗ್ರತಾ ಕ್ರಮವಾಗಿ ಶಸ್ತ್ರಾಸ್ತ್ರ ಠೇವಣಿಗೆ ಆದೇಶಿಸಲಾಗುತ್ತದೆ. ಪ್ರತೀ ಬಾರಿಯೂ ಚುನಾವಣೆಯ ಸಮಯದಲ್ಲಿ  ಈ ನಿಯಮ ಇರುತ್ತದೆ. ಕಳೆದ ಎರಡು ಮೂರು ಚುನಾವಣೆಯಿಂದಲೇ ರೈತರು ಈ ನಿಯಮ ಸಡಿಲಿಕೆ ಮಾಡಬೇಕು. ಕೋವಿ ಡಿಪಾಸಿಟ್‌ ಇಡುವ ನಿಯಮ ಸಡಿಲಿಕೆ ಮಾಡಬೇಕು ಎಂದು ಒತ್ತಾಯ ಮಾಡುತ್ತಲೇ ಬಂದಿದ್ದರು. ಈ ಬಾರಿಯೂ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ರೈತರಿಗೆ ಆಗುವ ಸಮಸ್ಯೆ ಬಗ್ಗೆಯೂ ಮಾಹಿತಿ ನೀಡಿದ್ದರು. ಕ್ರಿಮಿನಲ್‌ ಹಿನ್ನಲೆಯುಳ್ಳವರಿಗೆ ಡಿಪಾಸಿಟ್‌ ಮಾಡಲು ಸೂಚನೆ ನೀಡಿ, ಉಳಿದ ಕೃಷಿಕರಿಗೆ ವಿನಾಯಿತಿ ನೀಡಿ ಎಂದೂ ಹೇಳಿದ್ದರು. ಇದೀಗ  ದ ಕ ಜಿಲ್ಲಾಧಿಕಾರಿಗಳು ನಿಯಮದಲ್ಲಿ ಕೊಂಚ ಸಡಿಲಿಕೆ ಮಾಡಲು ದ ಕ ಜಿಲ್ಲೆಯ ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ. ಅಪರಾಧ ಹಿನ್ನಲೆ, ಜಾಮೀನಿನಲ್ಲಿ ಬಿಡುಗಡೆಯಾದವರು, ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ದೊಂಬಿ ಗಲಾಟೆಯಲ್ಲಿ ಭಾಗಿಯಾದವರನ್ನು ಹೊರತುಪಡಿಸಿ ಉಳಿದ ರೈತರಿಗೆ ಶಸ್ತ್ರಾಸ್ತ್ರ ಠೇವಣಿಯಲ್ಲಿ ವಿನಾಯಿತಿ ನೀಡಿದ್ದಾರೆ.

Advertisement

ಆದರೆ ರೈತರು ಬೆಳೆ ರಕ್ಷಣೆಗಾಗಿ ಕೋವಿಯ ಆವಶ್ಯಕತೆ ಇದ್ದರೆ ಪೂರಕ ದಾಖಲೆಗಳೊಂದಿಗೆ ತಾಲೂಕು ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದಕ್ಕಾಗಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸ್ಕ್ರೀನಿಂಗ್ ಸಮಿತಿಗಳನ್ನು ರಚಿಸಲಾಗಿದೆ.ಈ ಸಮಿತಿ ಅಹವಾಲುಗಳ ಪರಿಶೀಲಿಸಿ ಅರ್ಹ ಪ್ರಕರಣಗಳಲ್ಲಿ , ಅವಶ್ಯಕತೆ ಇದ್ದವರಿಗೆ ಠೇವಣಿ ಇಡುವುದರಿಂದ ವಿನಾಯಿತಿ ನೀಡಲು ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

6 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

6 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

7 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

7 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

7 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

7 hours ago