ಏ.1 ರ ಮೊದಲು ಶಸ್ತ್ರಾಸ್ತ್ರಗಳ ಠೇವಣಿಯಲ್ಲಿರಿಸಲು ಆದೇಶ

March 20, 2024
11:33 AM
ಚುನಾವಣೆ ಹಿನ್ನೆಲೆಯಲ್ಲಿ ಏ.1 ರ ಮೊದಲು ಪೊಲೀಸ್ ಠಾಣೆ ಅಥವಾ ಜಿಲ್ಲೆಯಲ್ಲಿನ ನಮೂನೆ ನಂಬ್ರ 8 ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಠೇವಣಿ ಇಡಲು ಸೂಚಿಸಲಾಗಿದೆ.

2024ರ ಏ.26 ರಂದು ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಜಿಲ್ಲೆಯ ಆಯುಧ ಪರವಾನಿಗೆ ಹೊಂದಿರುವ ಎಲ್ಲಾ ರೀತಿಯ ಶಸ್ತ್ರಾಸ್ತ್ರಗಳನ್ನು 2024ರ ಏ.1 ರೊಳಗೆ ಠೇವಣಿ ಇರಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಪ್ರಸಕ್ತ ಕಾನೂನು ಸುವ್ಯವಸ್ಥೆ ಸಾರ್ವಜನಿಕ ಶಾಂತಿ ಸುರಕ್ಷತೆಯ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ (ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಎಲ್ಲಾ ಬೆಳೆ ರಕ್ಷಣೆಗಾಗಿ ಮತ್ತು ಆತ್ಮ ರಕ್ಷಣೆಗಾಗಿ ಮಂಜೂರು ಮಾಡಲಾಗಿರುವ ಶಸ್ತ್ರಾಸ್ತ್ರ ಪರವಾನಿಗೆಗಳನ್ನು ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಚುನಾವಣಾ ಅವಧಿಯಲ್ಲಿ ಠೇವಣಿಯಲ್ಲಿರಿಸಲು ಆದೇಶ ಹೊರಡಿಸಿದ್ದಾರೆ.

ಈ ಆದೇಶದಂತೆ ಆತ್ಮ ರಕ್ಷಣೆಗಾಗಿ ಮತ್ತು ಕೃಷಿ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿದವರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ಶಶಸ್ತ್ರಾಸ್ತ್ರಗಳನ್ನು (ರಿವಾಲ್ವರ್ / ಪಿಸ್ತೂಲ್ / ಎಸ್.ಬಿ.ಬಿ.ಎಲ್/ ಡಿ.ಬಿ.ಬಿ.ಎಲ್/ ಎಸ್.ಬಿ.ಎಂ.ಎಲ್/ ಡಿ.ಬಿ.ಎಂ.ಎಲ್/ ಎನ್.ಪಿ.ಬಿ ರೈಫಲ್) ಹತ್ತಿರದ ಪೊಲೀಸ್ ಠಾಣೆ ಅಥವಾ ಜಿಲ್ಲೆಯಲ್ಲಿನ ನಮೂನೆ ನಂಬ್ರ 8 ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಏ.1 ರ ಮೊದಲು ಠೇವಣಿ ಇಡಲು ಸೂಚಿಸಲಾಗಿದೆ.

ಚುನಾವಣಾ ಫಲಿತಾಂಶ ಘೋಷಣೆಯಾದ ದಿನಾಂಕದಿಂದ ಒಂದು ವಾರದ ನಂತರ (ದಿನಾಂಕ :11-06-2024) ರಿಂದ ಶಸ್ತ್ರಾಸ್ತ್ರ ಠೇವಣಿ ಇಡಲಾದ ಪೊಲೀಸ್ ಠಾಣೆ / ಡೀಲರ್ ಗಳಿಂದ ಪರವಾನಿಗೆದಾರರು ಶಸ್ತ್ರಾಸ್ತ್ರಗಳನ್ನು ಮರು ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror