2024ರ ಏ.26 ರಂದು ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಜಿಲ್ಲೆಯ ಆಯುಧ ಪರವಾನಿಗೆ ಹೊಂದಿರುವ ಎಲ್ಲಾ ರೀತಿಯ ಶಸ್ತ್ರಾಸ್ತ್ರಗಳನ್ನು 2024ರ ಏ.1 ರೊಳಗೆ ಠೇವಣಿ ಇರಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಪ್ರಸಕ್ತ ಕಾನೂನು ಸುವ್ಯವಸ್ಥೆ ಸಾರ್ವಜನಿಕ ಶಾಂತಿ ಸುರಕ್ಷತೆಯ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ (ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಎಲ್ಲಾ ಬೆಳೆ ರಕ್ಷಣೆಗಾಗಿ ಮತ್ತು ಆತ್ಮ ರಕ್ಷಣೆಗಾಗಿ ಮಂಜೂರು ಮಾಡಲಾಗಿರುವ ಶಸ್ತ್ರಾಸ್ತ್ರ ಪರವಾನಿಗೆಗಳನ್ನು ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಚುನಾವಣಾ ಅವಧಿಯಲ್ಲಿ ಠೇವಣಿಯಲ್ಲಿರಿಸಲು ಆದೇಶ ಹೊರಡಿಸಿದ್ದಾರೆ.
ಈ ಆದೇಶದಂತೆ ಆತ್ಮ ರಕ್ಷಣೆಗಾಗಿ ಮತ್ತು ಕೃಷಿ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿದವರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ಶಶಸ್ತ್ರಾಸ್ತ್ರಗಳನ್ನು (ರಿವಾಲ್ವರ್ / ಪಿಸ್ತೂಲ್ / ಎಸ್.ಬಿ.ಬಿ.ಎಲ್/ ಡಿ.ಬಿ.ಬಿ.ಎಲ್/ ಎಸ್.ಬಿ.ಎಂ.ಎಲ್/ ಡಿ.ಬಿ.ಎಂ.ಎಲ್/ ಎನ್.ಪಿ.ಬಿ ರೈಫಲ್) ಹತ್ತಿರದ ಪೊಲೀಸ್ ಠಾಣೆ ಅಥವಾ ಜಿಲ್ಲೆಯಲ್ಲಿನ ನಮೂನೆ ನಂಬ್ರ 8 ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಏ.1 ರ ಮೊದಲು ಠೇವಣಿ ಇಡಲು ಸೂಚಿಸಲಾಗಿದೆ.
ಚುನಾವಣಾ ಫಲಿತಾಂಶ ಘೋಷಣೆಯಾದ ದಿನಾಂಕದಿಂದ ಒಂದು ವಾರದ ನಂತರ (ದಿನಾಂಕ :11-06-2024) ರಿಂದ ಶಸ್ತ್ರಾಸ್ತ್ರ ಠೇವಣಿ ಇಡಲಾದ ಪೊಲೀಸ್ ಠಾಣೆ / ಡೀಲರ್ ಗಳಿಂದ ಪರವಾನಿಗೆದಾರರು ಶಸ್ತ್ರಾಸ್ತ್ರಗಳನ್ನು ಮರು ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…