Advertisement
ಸುದ್ದಿಗಳು

ಏ.1 ರ ಮೊದಲು ಶಸ್ತ್ರಾಸ್ತ್ರಗಳ ಠೇವಣಿಯಲ್ಲಿರಿಸಲು ಆದೇಶ

Share

2024ರ ಏ.26 ರಂದು ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಜಿಲ್ಲೆಯ ಆಯುಧ ಪರವಾನಿಗೆ ಹೊಂದಿರುವ ಎಲ್ಲಾ ರೀತಿಯ ಶಸ್ತ್ರಾಸ್ತ್ರಗಳನ್ನು 2024ರ ಏ.1 ರೊಳಗೆ ಠೇವಣಿ ಇರಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶ ಹೊರಡಿಸಿದ್ದಾರೆ.

Advertisement
Advertisement
Advertisement
Advertisement

ಜಿಲ್ಲೆಯ ಪ್ರಸಕ್ತ ಕಾನೂನು ಸುವ್ಯವಸ್ಥೆ ಸಾರ್ವಜನಿಕ ಶಾಂತಿ ಸುರಕ್ಷತೆಯ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ (ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಎಲ್ಲಾ ಬೆಳೆ ರಕ್ಷಣೆಗಾಗಿ ಮತ್ತು ಆತ್ಮ ರಕ್ಷಣೆಗಾಗಿ ಮಂಜೂರು ಮಾಡಲಾಗಿರುವ ಶಸ್ತ್ರಾಸ್ತ್ರ ಪರವಾನಿಗೆಗಳನ್ನು ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಚುನಾವಣಾ ಅವಧಿಯಲ್ಲಿ ಠೇವಣಿಯಲ್ಲಿರಿಸಲು ಆದೇಶ ಹೊರಡಿಸಿದ್ದಾರೆ.

Advertisement

ಈ ಆದೇಶದಂತೆ ಆತ್ಮ ರಕ್ಷಣೆಗಾಗಿ ಮತ್ತು ಕೃಷಿ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿದವರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ಶಶಸ್ತ್ರಾಸ್ತ್ರಗಳನ್ನು (ರಿವಾಲ್ವರ್ / ಪಿಸ್ತೂಲ್ / ಎಸ್.ಬಿ.ಬಿ.ಎಲ್/ ಡಿ.ಬಿ.ಬಿ.ಎಲ್/ ಎಸ್.ಬಿ.ಎಂ.ಎಲ್/ ಡಿ.ಬಿ.ಎಂ.ಎಲ್/ ಎನ್.ಪಿ.ಬಿ ರೈಫಲ್) ಹತ್ತಿರದ ಪೊಲೀಸ್ ಠಾಣೆ ಅಥವಾ ಜಿಲ್ಲೆಯಲ್ಲಿನ ನಮೂನೆ ನಂಬ್ರ 8 ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಏ.1 ರ ಮೊದಲು ಠೇವಣಿ ಇಡಲು ಸೂಚಿಸಲಾಗಿದೆ.

ಚುನಾವಣಾ ಫಲಿತಾಂಶ ಘೋಷಣೆಯಾದ ದಿನಾಂಕದಿಂದ ಒಂದು ವಾರದ ನಂತರ (ದಿನಾಂಕ :11-06-2024) ರಿಂದ ಶಸ್ತ್ರಾಸ್ತ್ರ ಠೇವಣಿ ಇಡಲಾದ ಪೊಲೀಸ್ ಠಾಣೆ / ಡೀಲರ್ ಗಳಿಂದ ಪರವಾನಿಗೆದಾರರು ಶಸ್ತ್ರಾಸ್ತ್ರಗಳನ್ನು ಮರು ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

13 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

13 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

13 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

13 hours ago

ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ

ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…

13 hours ago

ತೆಂಗು ಉತ್ಪಾದನೆ | ಭಾರತ ವಿಶ್ವದಲ್ಲೇ ಪ್ರಥಮ

ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…

13 hours ago