Advertisement
ಸುದ್ದಿಗಳು

ಏ.1 ರ ಮೊದಲು ಶಸ್ತ್ರಾಸ್ತ್ರಗಳ ಠೇವಣಿಯಲ್ಲಿರಿಸಲು ಆದೇಶ

Share

2024ರ ಏ.26 ರಂದು ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಜಿಲ್ಲೆಯ ಆಯುಧ ಪರವಾನಿಗೆ ಹೊಂದಿರುವ ಎಲ್ಲಾ ರೀತಿಯ ಶಸ್ತ್ರಾಸ್ತ್ರಗಳನ್ನು 2024ರ ಏ.1 ರೊಳಗೆ ಠೇವಣಿ ಇರಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಪ್ರಸಕ್ತ ಕಾನೂನು ಸುವ್ಯವಸ್ಥೆ ಸಾರ್ವಜನಿಕ ಶಾಂತಿ ಸುರಕ್ಷತೆಯ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ (ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಎಲ್ಲಾ ಬೆಳೆ ರಕ್ಷಣೆಗಾಗಿ ಮತ್ತು ಆತ್ಮ ರಕ್ಷಣೆಗಾಗಿ ಮಂಜೂರು ಮಾಡಲಾಗಿರುವ ಶಸ್ತ್ರಾಸ್ತ್ರ ಪರವಾನಿಗೆಗಳನ್ನು ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಚುನಾವಣಾ ಅವಧಿಯಲ್ಲಿ ಠೇವಣಿಯಲ್ಲಿರಿಸಲು ಆದೇಶ ಹೊರಡಿಸಿದ್ದಾರೆ.

ಈ ಆದೇಶದಂತೆ ಆತ್ಮ ರಕ್ಷಣೆಗಾಗಿ ಮತ್ತು ಕೃಷಿ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿದವರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ಶಶಸ್ತ್ರಾಸ್ತ್ರಗಳನ್ನು (ರಿವಾಲ್ವರ್ / ಪಿಸ್ತೂಲ್ / ಎಸ್.ಬಿ.ಬಿ.ಎಲ್/ ಡಿ.ಬಿ.ಬಿ.ಎಲ್/ ಎಸ್.ಬಿ.ಎಂ.ಎಲ್/ ಡಿ.ಬಿ.ಎಂ.ಎಲ್/ ಎನ್.ಪಿ.ಬಿ ರೈಫಲ್) ಹತ್ತಿರದ ಪೊಲೀಸ್ ಠಾಣೆ ಅಥವಾ ಜಿಲ್ಲೆಯಲ್ಲಿನ ನಮೂನೆ ನಂಬ್ರ 8 ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಏ.1 ರ ಮೊದಲು ಠೇವಣಿ ಇಡಲು ಸೂಚಿಸಲಾಗಿದೆ.

ಚುನಾವಣಾ ಫಲಿತಾಂಶ ಘೋಷಣೆಯಾದ ದಿನಾಂಕದಿಂದ ಒಂದು ವಾರದ ನಂತರ (ದಿನಾಂಕ :11-06-2024) ರಿಂದ ಶಸ್ತ್ರಾಸ್ತ್ರ ಠೇವಣಿ ಇಡಲಾದ ಪೊಲೀಸ್ ಠಾಣೆ / ಡೀಲರ್ ಗಳಿಂದ ಪರವಾನಿಗೆದಾರರು ಶಸ್ತ್ರಾಸ್ತ್ರಗಳನ್ನು ಮರು ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

9 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago