Advertisement
MIRROR FOCUS

ಚುನಾವಣೆಯ ಹೆಸರಿನಲ್ಲಿ ಕೃಷಿಕರ ಕೋವಿ ಠೇವಣಾತಿ | ವಿಶೇಷ ಸಭೆ ಸೇರಿ ವಿನಾಯಿತಿ ನೀಡಿದ ಸ್ಕ್ರೀನಿಂಗ್‌ ಕಮಿಟಿ…! |

Share

ಚುನಾವಣೆಯ ಸಂದರ್ಭ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ವಿವಿಧ ಕ್ರಮಗಳನ್ನು ಚುನಾವಣಾ ಆಯೋಗ ಜಾರಿಗೊಳಿಸುತ್ತದೆ. ಅದರಲ್ಲಿ  ಕೃಷಿ ರಕ್ಷಣೆಗೆ ಪರವಾನಿಗೆಯನ್ನು ಪಡೆದ ಕೋವಿಯನ್ನು ಠಾಣೆಗಳಲ್ಲಿ ಕೃಷಿಕರು ಠೇವಣಾತಿ ಇಡುವ ಪ್ರಕ್ರಿಯೆಯೂ ಒಂದು. ಆದರೆ ಕೃಷಿ ರಕ್ಷಣೆಗೆಂದು ಹೊಂದಿರುವ ಕೋವಿಯನ್ನು ಠೇವಣಾತಿ ಇಡುವುದು ಸ್ಥಗಿತಗೊಳ್ಳಬೇಕು ಎನ್ನುವ ಬೇಡಿಕೆಯ ನಡುವೆ ನ್ಯಾಯಾಲಯ ಮೆಟ್ಟಿಲೇರಿದ್ದ ಕೃಷಿಕರ ಕೋವಿ ಠೇವಣಾತಿಗೆ ಈ ಬಾರಿ ವಿನಾಯಿತಿ ಸಿಕ್ಕಿದೆ. ಇದಕ್ಕಾಗಿ ಸ್ಕ್ರೀನಿಂಗ್‌ ಕಮಿಟಿ ಸಭೆ ಸೇರಿ ಈ ನಿರ್ಧಾರ ಕೈಗೊಂಡಿದ್ದು, ಸಂಬಂಧಿತ ಕೃಷಿಕರಿಗೆ ಆದೇಶವನ್ನೂ ಕಳುಹಿಸಿದೆ.

Advertisement
Advertisement
Advertisement
Advertisement
Advertisement

ಚುನಾವಣೆಯ ಸಂದರ್ಭ ಕೃಷಿಕರ ಕೋವಿಯನ್ನು ಠೇವಣಾತಿ ಇಡುವ ಪ್ರಕ್ರಿಯೆ ಸ್ಥಗಿತಗೊಳ್ಳಬೇಕು, ಯಾವುದೇ ಕ್ರಮಿನಲ್‌ ಹಿನ್ನೆಲೆ ಇಲ್ಲದ ಕೃಷಿಕರು ಕೂಡಾ ಕೋವಿಯನ್ನು ಹಣ ಪಾವತಿ ಮಾಡಿ ಡಿಪಾಸಿಟ್‌ ಮಾಡಬೇಕಾದ ಸ್ಥಿತಿ ಹಲವು ಸಮಯಗಳಿಂದ ಇದೆ. ಕಳೆದ ಮೂರು ವರ್ಷಗಳಿಂದ ಅಂದರೆ ಮೂರು ಚುನಾವಣೆಗಳಿಂದ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಕಳೆದ ಚುನಾವಣೆಯಲ್ಲಿ ಈ ಬಗ್ಗೆ ಕೃಷಿಕರು ಹೈಕೋರ್ಟ್‌ ಮೊರೆ ಹೋಗಿದ್ದರು. ಈ ಸಂದರ್ಭ ಸ್ಕ್ರೀನಿಂಟ್‌ ಕಮಿಟಿ ರಚನೆ ಮಾಡಿ ಅದಕ್ಕೆ ಕೃಷಿಕರು ಅರ್ಜಿ ಸಲ್ಲಿಸಿ ವಿನಾಯಿತಿ ಪಡೆದುಕೊಳ್ಳಬೇಕು ಎಂದು ಮಾನ್ಯ ಹೈಕೋರ್ಟ್‌ ನಿರ್ದೇಶನ ನೀಡಿತ್ತು.  ಚುನಾವಣೆ ಘೋಷಣೆಯಾಗುವ ಜೊತೆಗೇ ಕಮಿಟಿ ರಚನೆಯಾಗಬೇಕು, ಅದಕ್ಕೆ ಕೃಷಿಕರು ಅರ್ಜಿ ಸಲ್ಲಿಸಬೇಕು ಎಂದು ಸೂಚನೆ ನೀಡಿತ್ತು.

Advertisement

ಈ ಬಾರಿ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಸ್ಕ್ರೀನಿಂಗ್‌ ಕಟಿಮಿ ರಚನೆಯಾಗಿತ್ತು. ಈ ಸಮಿತಿ ಅರ್ಜಿ ಸಲ್ಲಿಸಿದ ಬಹುತೇಕ ಎಲ್ಲಾ ಕೃಷಿಕರದೂ ಅರ್ಜಿ ತಿರಸ್ಕಾರಗೊಂಡು ಎಲ್ಲಾ ಕೃಷಿಕರೂ ಕೋವಿ ಠೇವಣಾತಿ ಇಡಬೇಕು ಎಂದು ಸೂಚನೆ ನೀಡಿತ್ತು. ಇದಕ್ಕೆ ಕಾರಣ ನೀಡಿದ ಸ್ಕ್ರೀನಿಂಗ್‌ ಕಮಿಟಿಯು, ಈಗ ಯಾವುದೇ ಕೃಷಿಗೆ ಮಂಗಗಳು ಹಾನಿ ಮಾಡುವುದಿಲ್ಲ, ಇದರಿಂದ ಸಮಸ್ಯೆಯೂ ಇಲ್ಲ ಎಂದು ಹೇಳಿತ್ತು.

ಈ ಬಗ್ಗೆ ಕೃಷಿಕರು ಮತ್ತೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಬಂಟ್ವಾಳದ ಗೋವಿಂದ ಭಟ್‌ ಮಾಣಿಮೂಲೆ ಹಾಗೂ ಬೆಳ್ಳಾರೆಯ ಜಯಪ್ರಸಾದ್‌ ಜೋಶಿ, ಪುರುಷೋತ್ತಮ ಮಲ್ಕಜೆ ಹಾಗೂ ಗಿರಿಜಾ ಶಂಕರ್‌ ಮತ್ತುಸುದರ್ಶನ್‌ ಕುಮಾರ್‌ ರಿಟ್‌ ಅರ್ಜಿ ಸಲ್ಲಿಸಿದ್ದರು. ಒಟ್ಟು ಒಂಭತ್ತು ಮಂದಿ ಕೃಷಿಕರು ಜೊತೆಯಾಗಿದ್ದರು. ಈ ಅರ್ಜಿ ವಿಚಾರಣೆ ನಡೆದಿದ್ದು, ಎರಡು ದಿನದಲ್ಲಿ ತೀರ್ಪು ಪ್ರಕಟವಾಗಲಿದೆ.

Advertisement

ಈ ನಡುವೆ ಸ್ಕ್ರೀನಿಂಗ್‌ ಕಮಿಟಿ ಸಭೆ ಸೇರಿ ತಕ್ಷಣವೇ ನ್ಯಾಯಾಲಯದ ಮೊರೆ ಹೋದ ಕೃಷಿಕರಿಗೆ ಕೋವಿ ಠೇವಣಾತಿಯಿಂದ ವಿನಾಯಿತಿ ನೀಡಿ ಆದೇಶ ನೀಡಿದೆ. ಕೃಷಿ ರಕ್ಷಣೆ, ಕಾಡು ಪ್ರಾಣಿಗಳ ಹಾವಳಿ ಇದೆ ಎಂದು ಕೃಷಿಕರು ತಿಳಿಸಿದ್ದು, ಕೃಷಿಕರು ಯಾವುದೇ ಕ್ರಿಮಿನಲ್‌ ಹಿನ್ನೆಲೆ ಇಲ್ಲದೇ ಇರುವುದರಿಂದ ಹಾಗೂ ಕೃಷಿ ಭೂಮಿಯು ತೀರಾ ಗ್ರಾಮೀಣ ಭಾಗದಲ್ಲಿ ಇರುವುದರಿಂದ ಸ್ಕ್ರೀನಿಂಗ್‌ ಕಮಿಟಿಯು ಕೋವಿ ಠೇವಣಾತಿ ಇರಿಸುವುದನ್ನು ವಿನಾಯಿತಿ ನೀಡಿದೆ ಎಂದು ಆದೇಶಿಸಿದೆ.ನ್ಯಾಯಾಲಯದ ತೀರ್ಪು ಎರಡು ದಿನದಲ್ಲಿ ಪ್ರಕಟವಾಗುವ ನಿರೀಕ್ಷೆ ಇದೆ. ಮೊನ್ನೆ ಇದೇ ಸ್ಕ್ರೀನಿಂಗ್‌ ಕಮಿಟಿ ಕೃಷಿಕರ ವಾಸ್ತವ ಸ್ಥಿತಿಯನ್ನು ಅರಿಯದೇ ಈಗ ಕೃಷಿಗೆ ಯಾವುದೇ ಕಾಡು ಪ್ರಾಣಿಯ ಹಾವಳಿ ಇಲ್ಲ ಎಂದು ಹೇಳಿತ್ತು.

ಚುನಾವಣಾ ಕಣದಲ್ಲಿ ರೈತ ದೇಶದ ಬೆನ್ನೆಲುಬು…? ಎರಡನೇ ದರ್ಜೆಯ ನಾಗರಿಕನೋ…? ವಿಶ್ವಾಸಕ್ಕೆ ಅಯೋಗ್ಯನಾ…? | ಚುನಾವಣೆ ಬಹಿಷ್ಕಾರದ ಚರ್ಚೆ ನಡೆಸುತ್ತಿರುವ ಕೃಷಿಕರು |

Advertisement

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

5 hours ago

ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |

ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್‌ ಫಾರ್ಕಾಸ್ಟ್ ಅಂದರೆ ಯಾವ…

12 hours ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

13 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

14 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

2 days ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago