Advertisement
MIRROR FOCUS

ಚುನಾವಣೆಯ ಹೆಸರಿನಲ್ಲಿ ಕೃಷಿಕರ ಕೋವಿ ಠೇವಣಾತಿ | ವಿಶೇಷ ಸಭೆ ಸೇರಿ ವಿನಾಯಿತಿ ನೀಡಿದ ಸ್ಕ್ರೀನಿಂಗ್‌ ಕಮಿಟಿ…! |

Share

ಚುನಾವಣೆಯ ಸಂದರ್ಭ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ವಿವಿಧ ಕ್ರಮಗಳನ್ನು ಚುನಾವಣಾ ಆಯೋಗ ಜಾರಿಗೊಳಿಸುತ್ತದೆ. ಅದರಲ್ಲಿ  ಕೃಷಿ ರಕ್ಷಣೆಗೆ ಪರವಾನಿಗೆಯನ್ನು ಪಡೆದ ಕೋವಿಯನ್ನು ಠಾಣೆಗಳಲ್ಲಿ ಕೃಷಿಕರು ಠೇವಣಾತಿ ಇಡುವ ಪ್ರಕ್ರಿಯೆಯೂ ಒಂದು. ಆದರೆ ಕೃಷಿ ರಕ್ಷಣೆಗೆಂದು ಹೊಂದಿರುವ ಕೋವಿಯನ್ನು ಠೇವಣಾತಿ ಇಡುವುದು ಸ್ಥಗಿತಗೊಳ್ಳಬೇಕು ಎನ್ನುವ ಬೇಡಿಕೆಯ ನಡುವೆ ನ್ಯಾಯಾಲಯ ಮೆಟ್ಟಿಲೇರಿದ್ದ ಕೃಷಿಕರ ಕೋವಿ ಠೇವಣಾತಿಗೆ ಈ ಬಾರಿ ವಿನಾಯಿತಿ ಸಿಕ್ಕಿದೆ. ಇದಕ್ಕಾಗಿ ಸ್ಕ್ರೀನಿಂಗ್‌ ಕಮಿಟಿ ಸಭೆ ಸೇರಿ ಈ ನಿರ್ಧಾರ ಕೈಗೊಂಡಿದ್ದು, ಸಂಬಂಧಿತ ಕೃಷಿಕರಿಗೆ ಆದೇಶವನ್ನೂ ಕಳುಹಿಸಿದೆ.

Advertisement
Advertisement

ಚುನಾವಣೆಯ ಸಂದರ್ಭ ಕೃಷಿಕರ ಕೋವಿಯನ್ನು ಠೇವಣಾತಿ ಇಡುವ ಪ್ರಕ್ರಿಯೆ ಸ್ಥಗಿತಗೊಳ್ಳಬೇಕು, ಯಾವುದೇ ಕ್ರಮಿನಲ್‌ ಹಿನ್ನೆಲೆ ಇಲ್ಲದ ಕೃಷಿಕರು ಕೂಡಾ ಕೋವಿಯನ್ನು ಹಣ ಪಾವತಿ ಮಾಡಿ ಡಿಪಾಸಿಟ್‌ ಮಾಡಬೇಕಾದ ಸ್ಥಿತಿ ಹಲವು ಸಮಯಗಳಿಂದ ಇದೆ. ಕಳೆದ ಮೂರು ವರ್ಷಗಳಿಂದ ಅಂದರೆ ಮೂರು ಚುನಾವಣೆಗಳಿಂದ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಕಳೆದ ಚುನಾವಣೆಯಲ್ಲಿ ಈ ಬಗ್ಗೆ ಕೃಷಿಕರು ಹೈಕೋರ್ಟ್‌ ಮೊರೆ ಹೋಗಿದ್ದರು. ಈ ಸಂದರ್ಭ ಸ್ಕ್ರೀನಿಂಟ್‌ ಕಮಿಟಿ ರಚನೆ ಮಾಡಿ ಅದಕ್ಕೆ ಕೃಷಿಕರು ಅರ್ಜಿ ಸಲ್ಲಿಸಿ ವಿನಾಯಿತಿ ಪಡೆದುಕೊಳ್ಳಬೇಕು ಎಂದು ಮಾನ್ಯ ಹೈಕೋರ್ಟ್‌ ನಿರ್ದೇಶನ ನೀಡಿತ್ತು.  ಚುನಾವಣೆ ಘೋಷಣೆಯಾಗುವ ಜೊತೆಗೇ ಕಮಿಟಿ ರಚನೆಯಾಗಬೇಕು, ಅದಕ್ಕೆ ಕೃಷಿಕರು ಅರ್ಜಿ ಸಲ್ಲಿಸಬೇಕು ಎಂದು ಸೂಚನೆ ನೀಡಿತ್ತು.

ಈ ಬಾರಿ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಸ್ಕ್ರೀನಿಂಗ್‌ ಕಟಿಮಿ ರಚನೆಯಾಗಿತ್ತು. ಈ ಸಮಿತಿ ಅರ್ಜಿ ಸಲ್ಲಿಸಿದ ಬಹುತೇಕ ಎಲ್ಲಾ ಕೃಷಿಕರದೂ ಅರ್ಜಿ ತಿರಸ್ಕಾರಗೊಂಡು ಎಲ್ಲಾ ಕೃಷಿಕರೂ ಕೋವಿ ಠೇವಣಾತಿ ಇಡಬೇಕು ಎಂದು ಸೂಚನೆ ನೀಡಿತ್ತು. ಇದಕ್ಕೆ ಕಾರಣ ನೀಡಿದ ಸ್ಕ್ರೀನಿಂಗ್‌ ಕಮಿಟಿಯು, ಈಗ ಯಾವುದೇ ಕೃಷಿಗೆ ಮಂಗಗಳು ಹಾನಿ ಮಾಡುವುದಿಲ್ಲ, ಇದರಿಂದ ಸಮಸ್ಯೆಯೂ ಇಲ್ಲ ಎಂದು ಹೇಳಿತ್ತು.

ಈ ಬಗ್ಗೆ ಕೃಷಿಕರು ಮತ್ತೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಬಂಟ್ವಾಳದ ಗೋವಿಂದ ಭಟ್‌ ಮಾಣಿಮೂಲೆ ಹಾಗೂ ಬೆಳ್ಳಾರೆಯ ಜಯಪ್ರಸಾದ್‌ ಜೋಶಿ, ಪುರುಷೋತ್ತಮ ಮಲ್ಕಜೆ ಹಾಗೂ ಗಿರಿಜಾ ಶಂಕರ್‌ ಮತ್ತುಸುದರ್ಶನ್‌ ಕುಮಾರ್‌ ರಿಟ್‌ ಅರ್ಜಿ ಸಲ್ಲಿಸಿದ್ದರು. ಒಟ್ಟು ಒಂಭತ್ತು ಮಂದಿ ಕೃಷಿಕರು ಜೊತೆಯಾಗಿದ್ದರು. ಈ ಅರ್ಜಿ ವಿಚಾರಣೆ ನಡೆದಿದ್ದು, ಎರಡು ದಿನದಲ್ಲಿ ತೀರ್ಪು ಪ್ರಕಟವಾಗಲಿದೆ.

ಈ ನಡುವೆ ಸ್ಕ್ರೀನಿಂಗ್‌ ಕಮಿಟಿ ಸಭೆ ಸೇರಿ ತಕ್ಷಣವೇ ನ್ಯಾಯಾಲಯದ ಮೊರೆ ಹೋದ ಕೃಷಿಕರಿಗೆ ಕೋವಿ ಠೇವಣಾತಿಯಿಂದ ವಿನಾಯಿತಿ ನೀಡಿ ಆದೇಶ ನೀಡಿದೆ. ಕೃಷಿ ರಕ್ಷಣೆ, ಕಾಡು ಪ್ರಾಣಿಗಳ ಹಾವಳಿ ಇದೆ ಎಂದು ಕೃಷಿಕರು ತಿಳಿಸಿದ್ದು, ಕೃಷಿಕರು ಯಾವುದೇ ಕ್ರಿಮಿನಲ್‌ ಹಿನ್ನೆಲೆ ಇಲ್ಲದೇ ಇರುವುದರಿಂದ ಹಾಗೂ ಕೃಷಿ ಭೂಮಿಯು ತೀರಾ ಗ್ರಾಮೀಣ ಭಾಗದಲ್ಲಿ ಇರುವುದರಿಂದ ಸ್ಕ್ರೀನಿಂಗ್‌ ಕಮಿಟಿಯು ಕೋವಿ ಠೇವಣಾತಿ ಇರಿಸುವುದನ್ನು ವಿನಾಯಿತಿ ನೀಡಿದೆ ಎಂದು ಆದೇಶಿಸಿದೆ.ನ್ಯಾಯಾಲಯದ ತೀರ್ಪು ಎರಡು ದಿನದಲ್ಲಿ ಪ್ರಕಟವಾಗುವ ನಿರೀಕ್ಷೆ ಇದೆ. ಮೊನ್ನೆ ಇದೇ ಸ್ಕ್ರೀನಿಂಗ್‌ ಕಮಿಟಿ ಕೃಷಿಕರ ವಾಸ್ತವ ಸ್ಥಿತಿಯನ್ನು ಅರಿಯದೇ ಈಗ ಕೃಷಿಗೆ ಯಾವುದೇ ಕಾಡು ಪ್ರಾಣಿಯ ಹಾವಳಿ ಇಲ್ಲ ಎಂದು ಹೇಳಿತ್ತು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

14 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

15 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

15 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

15 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

23 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago