Advertisement
MIRROR FOCUS

ಚುನಾವಣೆಯ ಹೆಸರಿನಲ್ಲಿ ಕೃಷಿಕರ ಕೋವಿ ಠೇವಣಾತಿ | ವಿಶೇಷ ಸಭೆ ಸೇರಿ ವಿನಾಯಿತಿ ನೀಡಿದ ಸ್ಕ್ರೀನಿಂಗ್‌ ಕಮಿಟಿ…! |

Share

ಚುನಾವಣೆಯ ಸಂದರ್ಭ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ವಿವಿಧ ಕ್ರಮಗಳನ್ನು ಚುನಾವಣಾ ಆಯೋಗ ಜಾರಿಗೊಳಿಸುತ್ತದೆ. ಅದರಲ್ಲಿ  ಕೃಷಿ ರಕ್ಷಣೆಗೆ ಪರವಾನಿಗೆಯನ್ನು ಪಡೆದ ಕೋವಿಯನ್ನು ಠಾಣೆಗಳಲ್ಲಿ ಕೃಷಿಕರು ಠೇವಣಾತಿ ಇಡುವ ಪ್ರಕ್ರಿಯೆಯೂ ಒಂದು. ಆದರೆ ಕೃಷಿ ರಕ್ಷಣೆಗೆಂದು ಹೊಂದಿರುವ ಕೋವಿಯನ್ನು ಠೇವಣಾತಿ ಇಡುವುದು ಸ್ಥಗಿತಗೊಳ್ಳಬೇಕು ಎನ್ನುವ ಬೇಡಿಕೆಯ ನಡುವೆ ನ್ಯಾಯಾಲಯ ಮೆಟ್ಟಿಲೇರಿದ್ದ ಕೃಷಿಕರ ಕೋವಿ ಠೇವಣಾತಿಗೆ ಈ ಬಾರಿ ವಿನಾಯಿತಿ ಸಿಕ್ಕಿದೆ. ಇದಕ್ಕಾಗಿ ಸ್ಕ್ರೀನಿಂಗ್‌ ಕಮಿಟಿ ಸಭೆ ಸೇರಿ ಈ ನಿರ್ಧಾರ ಕೈಗೊಂಡಿದ್ದು, ಸಂಬಂಧಿತ ಕೃಷಿಕರಿಗೆ ಆದೇಶವನ್ನೂ ಕಳುಹಿಸಿದೆ.

ಚುನಾವಣೆಯ ಸಂದರ್ಭ ಕೃಷಿಕರ ಕೋವಿಯನ್ನು ಠೇವಣಾತಿ ಇಡುವ ಪ್ರಕ್ರಿಯೆ ಸ್ಥಗಿತಗೊಳ್ಳಬೇಕು, ಯಾವುದೇ ಕ್ರಮಿನಲ್‌ ಹಿನ್ನೆಲೆ ಇಲ್ಲದ ಕೃಷಿಕರು ಕೂಡಾ ಕೋವಿಯನ್ನು ಹಣ ಪಾವತಿ ಮಾಡಿ ಡಿಪಾಸಿಟ್‌ ಮಾಡಬೇಕಾದ ಸ್ಥಿತಿ ಹಲವು ಸಮಯಗಳಿಂದ ಇದೆ. ಕಳೆದ ಮೂರು ವರ್ಷಗಳಿಂದ ಅಂದರೆ ಮೂರು ಚುನಾವಣೆಗಳಿಂದ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಕಳೆದ ಚುನಾವಣೆಯಲ್ಲಿ ಈ ಬಗ್ಗೆ ಕೃಷಿಕರು ಹೈಕೋರ್ಟ್‌ ಮೊರೆ ಹೋಗಿದ್ದರು. ಈ ಸಂದರ್ಭ ಸ್ಕ್ರೀನಿಂಟ್‌ ಕಮಿಟಿ ರಚನೆ ಮಾಡಿ ಅದಕ್ಕೆ ಕೃಷಿಕರು ಅರ್ಜಿ ಸಲ್ಲಿಸಿ ವಿನಾಯಿತಿ ಪಡೆದುಕೊಳ್ಳಬೇಕು ಎಂದು ಮಾನ್ಯ ಹೈಕೋರ್ಟ್‌ ನಿರ್ದೇಶನ ನೀಡಿತ್ತು.  ಚುನಾವಣೆ ಘೋಷಣೆಯಾಗುವ ಜೊತೆಗೇ ಕಮಿಟಿ ರಚನೆಯಾಗಬೇಕು, ಅದಕ್ಕೆ ಕೃಷಿಕರು ಅರ್ಜಿ ಸಲ್ಲಿಸಬೇಕು ಎಂದು ಸೂಚನೆ ನೀಡಿತ್ತು.

ಈ ಬಾರಿ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಸ್ಕ್ರೀನಿಂಗ್‌ ಕಟಿಮಿ ರಚನೆಯಾಗಿತ್ತು. ಈ ಸಮಿತಿ ಅರ್ಜಿ ಸಲ್ಲಿಸಿದ ಬಹುತೇಕ ಎಲ್ಲಾ ಕೃಷಿಕರದೂ ಅರ್ಜಿ ತಿರಸ್ಕಾರಗೊಂಡು ಎಲ್ಲಾ ಕೃಷಿಕರೂ ಕೋವಿ ಠೇವಣಾತಿ ಇಡಬೇಕು ಎಂದು ಸೂಚನೆ ನೀಡಿತ್ತು. ಇದಕ್ಕೆ ಕಾರಣ ನೀಡಿದ ಸ್ಕ್ರೀನಿಂಗ್‌ ಕಮಿಟಿಯು, ಈಗ ಯಾವುದೇ ಕೃಷಿಗೆ ಮಂಗಗಳು ಹಾನಿ ಮಾಡುವುದಿಲ್ಲ, ಇದರಿಂದ ಸಮಸ್ಯೆಯೂ ಇಲ್ಲ ಎಂದು ಹೇಳಿತ್ತು.

ಈ ಬಗ್ಗೆ ಕೃಷಿಕರು ಮತ್ತೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಬಂಟ್ವಾಳದ ಗೋವಿಂದ ಭಟ್‌ ಮಾಣಿಮೂಲೆ ಹಾಗೂ ಬೆಳ್ಳಾರೆಯ ಜಯಪ್ರಸಾದ್‌ ಜೋಶಿ, ಪುರುಷೋತ್ತಮ ಮಲ್ಕಜೆ ಹಾಗೂ ಗಿರಿಜಾ ಶಂಕರ್‌ ಮತ್ತುಸುದರ್ಶನ್‌ ಕುಮಾರ್‌ ರಿಟ್‌ ಅರ್ಜಿ ಸಲ್ಲಿಸಿದ್ದರು. ಒಟ್ಟು ಒಂಭತ್ತು ಮಂದಿ ಕೃಷಿಕರು ಜೊತೆಯಾಗಿದ್ದರು. ಈ ಅರ್ಜಿ ವಿಚಾರಣೆ ನಡೆದಿದ್ದು, ಎರಡು ದಿನದಲ್ಲಿ ತೀರ್ಪು ಪ್ರಕಟವಾಗಲಿದೆ.

ಈ ನಡುವೆ ಸ್ಕ್ರೀನಿಂಗ್‌ ಕಮಿಟಿ ಸಭೆ ಸೇರಿ ತಕ್ಷಣವೇ ನ್ಯಾಯಾಲಯದ ಮೊರೆ ಹೋದ ಕೃಷಿಕರಿಗೆ ಕೋವಿ ಠೇವಣಾತಿಯಿಂದ ವಿನಾಯಿತಿ ನೀಡಿ ಆದೇಶ ನೀಡಿದೆ. ಕೃಷಿ ರಕ್ಷಣೆ, ಕಾಡು ಪ್ರಾಣಿಗಳ ಹಾವಳಿ ಇದೆ ಎಂದು ಕೃಷಿಕರು ತಿಳಿಸಿದ್ದು, ಕೃಷಿಕರು ಯಾವುದೇ ಕ್ರಿಮಿನಲ್‌ ಹಿನ್ನೆಲೆ ಇಲ್ಲದೇ ಇರುವುದರಿಂದ ಹಾಗೂ ಕೃಷಿ ಭೂಮಿಯು ತೀರಾ ಗ್ರಾಮೀಣ ಭಾಗದಲ್ಲಿ ಇರುವುದರಿಂದ ಸ್ಕ್ರೀನಿಂಗ್‌ ಕಮಿಟಿಯು ಕೋವಿ ಠೇವಣಾತಿ ಇರಿಸುವುದನ್ನು ವಿನಾಯಿತಿ ನೀಡಿದೆ ಎಂದು ಆದೇಶಿಸಿದೆ.ನ್ಯಾಯಾಲಯದ ತೀರ್ಪು ಎರಡು ದಿನದಲ್ಲಿ ಪ್ರಕಟವಾಗುವ ನಿರೀಕ್ಷೆ ಇದೆ. ಮೊನ್ನೆ ಇದೇ ಸ್ಕ್ರೀನಿಂಗ್‌ ಕಮಿಟಿ ಕೃಷಿಕರ ವಾಸ್ತವ ಸ್ಥಿತಿಯನ್ನು ಅರಿಯದೇ ಈಗ ಕೃಷಿಗೆ ಯಾವುದೇ ಕಾಡು ಪ್ರಾಣಿಯ ಹಾವಳಿ ಇಲ್ಲ ಎಂದು ಹೇಳಿತ್ತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

12 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

12 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

2 days ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

2 days ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago