Advertisement
MIRROR FOCUS

ಚುನಾವಣೆಯ ಹೆಸರಿನಲ್ಲಿ ಕೃಷಿಕರ ಕೋವಿ ಠೇವಣಾತಿ | ವಿಶೇಷ ಸಭೆ ಸೇರಿ ವಿನಾಯಿತಿ ನೀಡಿದ ಸ್ಕ್ರೀನಿಂಗ್‌ ಕಮಿಟಿ…! |

Share

ಚುನಾವಣೆಯ ಸಂದರ್ಭ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ವಿವಿಧ ಕ್ರಮಗಳನ್ನು ಚುನಾವಣಾ ಆಯೋಗ ಜಾರಿಗೊಳಿಸುತ್ತದೆ. ಅದರಲ್ಲಿ  ಕೃಷಿ ರಕ್ಷಣೆಗೆ ಪರವಾನಿಗೆಯನ್ನು ಪಡೆದ ಕೋವಿಯನ್ನು ಠಾಣೆಗಳಲ್ಲಿ ಕೃಷಿಕರು ಠೇವಣಾತಿ ಇಡುವ ಪ್ರಕ್ರಿಯೆಯೂ ಒಂದು. ಆದರೆ ಕೃಷಿ ರಕ್ಷಣೆಗೆಂದು ಹೊಂದಿರುವ ಕೋವಿಯನ್ನು ಠೇವಣಾತಿ ಇಡುವುದು ಸ್ಥಗಿತಗೊಳ್ಳಬೇಕು ಎನ್ನುವ ಬೇಡಿಕೆಯ ನಡುವೆ ನ್ಯಾಯಾಲಯ ಮೆಟ್ಟಿಲೇರಿದ್ದ ಕೃಷಿಕರ ಕೋವಿ ಠೇವಣಾತಿಗೆ ಈ ಬಾರಿ ವಿನಾಯಿತಿ ಸಿಕ್ಕಿದೆ. ಇದಕ್ಕಾಗಿ ಸ್ಕ್ರೀನಿಂಗ್‌ ಕಮಿಟಿ ಸಭೆ ಸೇರಿ ಈ ನಿರ್ಧಾರ ಕೈಗೊಂಡಿದ್ದು, ಸಂಬಂಧಿತ ಕೃಷಿಕರಿಗೆ ಆದೇಶವನ್ನೂ ಕಳುಹಿಸಿದೆ.

ಚುನಾವಣೆಯ ಸಂದರ್ಭ ಕೃಷಿಕರ ಕೋವಿಯನ್ನು ಠೇವಣಾತಿ ಇಡುವ ಪ್ರಕ್ರಿಯೆ ಸ್ಥಗಿತಗೊಳ್ಳಬೇಕು, ಯಾವುದೇ ಕ್ರಮಿನಲ್‌ ಹಿನ್ನೆಲೆ ಇಲ್ಲದ ಕೃಷಿಕರು ಕೂಡಾ ಕೋವಿಯನ್ನು ಹಣ ಪಾವತಿ ಮಾಡಿ ಡಿಪಾಸಿಟ್‌ ಮಾಡಬೇಕಾದ ಸ್ಥಿತಿ ಹಲವು ಸಮಯಗಳಿಂದ ಇದೆ. ಕಳೆದ ಮೂರು ವರ್ಷಗಳಿಂದ ಅಂದರೆ ಮೂರು ಚುನಾವಣೆಗಳಿಂದ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಕಳೆದ ಚುನಾವಣೆಯಲ್ಲಿ ಈ ಬಗ್ಗೆ ಕೃಷಿಕರು ಹೈಕೋರ್ಟ್‌ ಮೊರೆ ಹೋಗಿದ್ದರು. ಈ ಸಂದರ್ಭ ಸ್ಕ್ರೀನಿಂಟ್‌ ಕಮಿಟಿ ರಚನೆ ಮಾಡಿ ಅದಕ್ಕೆ ಕೃಷಿಕರು ಅರ್ಜಿ ಸಲ್ಲಿಸಿ ವಿನಾಯಿತಿ ಪಡೆದುಕೊಳ್ಳಬೇಕು ಎಂದು ಮಾನ್ಯ ಹೈಕೋರ್ಟ್‌ ನಿರ್ದೇಶನ ನೀಡಿತ್ತು.  ಚುನಾವಣೆ ಘೋಷಣೆಯಾಗುವ ಜೊತೆಗೇ ಕಮಿಟಿ ರಚನೆಯಾಗಬೇಕು, ಅದಕ್ಕೆ ಕೃಷಿಕರು ಅರ್ಜಿ ಸಲ್ಲಿಸಬೇಕು ಎಂದು ಸೂಚನೆ ನೀಡಿತ್ತು.

ಈ ಬಾರಿ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಸ್ಕ್ರೀನಿಂಗ್‌ ಕಟಿಮಿ ರಚನೆಯಾಗಿತ್ತು. ಈ ಸಮಿತಿ ಅರ್ಜಿ ಸಲ್ಲಿಸಿದ ಬಹುತೇಕ ಎಲ್ಲಾ ಕೃಷಿಕರದೂ ಅರ್ಜಿ ತಿರಸ್ಕಾರಗೊಂಡು ಎಲ್ಲಾ ಕೃಷಿಕರೂ ಕೋವಿ ಠೇವಣಾತಿ ಇಡಬೇಕು ಎಂದು ಸೂಚನೆ ನೀಡಿತ್ತು. ಇದಕ್ಕೆ ಕಾರಣ ನೀಡಿದ ಸ್ಕ್ರೀನಿಂಗ್‌ ಕಮಿಟಿಯು, ಈಗ ಯಾವುದೇ ಕೃಷಿಗೆ ಮಂಗಗಳು ಹಾನಿ ಮಾಡುವುದಿಲ್ಲ, ಇದರಿಂದ ಸಮಸ್ಯೆಯೂ ಇಲ್ಲ ಎಂದು ಹೇಳಿತ್ತು.

ಈ ಬಗ್ಗೆ ಕೃಷಿಕರು ಮತ್ತೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಬಂಟ್ವಾಳದ ಗೋವಿಂದ ಭಟ್‌ ಮಾಣಿಮೂಲೆ ಹಾಗೂ ಬೆಳ್ಳಾರೆಯ ಜಯಪ್ರಸಾದ್‌ ಜೋಶಿ, ಪುರುಷೋತ್ತಮ ಮಲ್ಕಜೆ ಹಾಗೂ ಗಿರಿಜಾ ಶಂಕರ್‌ ಮತ್ತುಸುದರ್ಶನ್‌ ಕುಮಾರ್‌ ರಿಟ್‌ ಅರ್ಜಿ ಸಲ್ಲಿಸಿದ್ದರು. ಒಟ್ಟು ಒಂಭತ್ತು ಮಂದಿ ಕೃಷಿಕರು ಜೊತೆಯಾಗಿದ್ದರು. ಈ ಅರ್ಜಿ ವಿಚಾರಣೆ ನಡೆದಿದ್ದು, ಎರಡು ದಿನದಲ್ಲಿ ತೀರ್ಪು ಪ್ರಕಟವಾಗಲಿದೆ.

ಈ ನಡುವೆ ಸ್ಕ್ರೀನಿಂಗ್‌ ಕಮಿಟಿ ಸಭೆ ಸೇರಿ ತಕ್ಷಣವೇ ನ್ಯಾಯಾಲಯದ ಮೊರೆ ಹೋದ ಕೃಷಿಕರಿಗೆ ಕೋವಿ ಠೇವಣಾತಿಯಿಂದ ವಿನಾಯಿತಿ ನೀಡಿ ಆದೇಶ ನೀಡಿದೆ. ಕೃಷಿ ರಕ್ಷಣೆ, ಕಾಡು ಪ್ರಾಣಿಗಳ ಹಾವಳಿ ಇದೆ ಎಂದು ಕೃಷಿಕರು ತಿಳಿಸಿದ್ದು, ಕೃಷಿಕರು ಯಾವುದೇ ಕ್ರಿಮಿನಲ್‌ ಹಿನ್ನೆಲೆ ಇಲ್ಲದೇ ಇರುವುದರಿಂದ ಹಾಗೂ ಕೃಷಿ ಭೂಮಿಯು ತೀರಾ ಗ್ರಾಮೀಣ ಭಾಗದಲ್ಲಿ ಇರುವುದರಿಂದ ಸ್ಕ್ರೀನಿಂಗ್‌ ಕಮಿಟಿಯು ಕೋವಿ ಠೇವಣಾತಿ ಇರಿಸುವುದನ್ನು ವಿನಾಯಿತಿ ನೀಡಿದೆ ಎಂದು ಆದೇಶಿಸಿದೆ.ನ್ಯಾಯಾಲಯದ ತೀರ್ಪು ಎರಡು ದಿನದಲ್ಲಿ ಪ್ರಕಟವಾಗುವ ನಿರೀಕ್ಷೆ ಇದೆ. ಮೊನ್ನೆ ಇದೇ ಸ್ಕ್ರೀನಿಂಗ್‌ ಕಮಿಟಿ ಕೃಷಿಕರ ವಾಸ್ತವ ಸ್ಥಿತಿಯನ್ನು ಅರಿಯದೇ ಈಗ ಕೃಷಿಗೆ ಯಾವುದೇ ಕಾಡು ಪ್ರಾಣಿಯ ಹಾವಳಿ ಇಲ್ಲ ಎಂದು ಹೇಳಿತ್ತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

5 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

16 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

18 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

24 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 days ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

2 days ago