MIRROR FOCUS

ಚುನಾವಣಾ ಕಣ | ಕೃಷಿಕರ ಕೋವಿ ಡಿಪಾಸಿಟ್‌ ವಿಚಾರ | ನ್ಯಾಯಾಲಯದ ಮೊರೆ ಹೋದ ಕೃಷಿಕರು | ಬಂದೂಕನ್ನು ಠೇವಣಿ ಇಡುವಂತೆ ಒತ್ತಾಯಿಸದಂತೆ ನಿರ್ದೇಶನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚುನಾವಣಾ ಸಮಯದಲ್ಲಿ ಕೃಷಿ ರಕ್ಷಣೆಗಾಗಿ ಲೈಸನ್ಸ್‌ ಹೊಂದಿದ ಕೃಷಿಕರ ಬಂದೂಕುಗಳನ್ನು ಠೇವಣಿ ಇಡಬೇಕು ಎನ್ನುವ ಸೂಚನೆಯ ಬಗ್ಗೆ ಈಗಾಗಲೇ ಚರ್ಚೆಯಾಗುತ್ತಿದೆ. ಈ ನಡುವೆ ಕೆಲವು ಕೃಷಿಕರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಬಂದೂಕನ್ನು ಠೇವಣಾತಿ ಇರಿಸಲು ವಿನಾಯಿತಿ ಬೇಕು ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ದಾವೆ ಹೂಡಿದ ಕೃಷಿಕರಿಗೆ ಮುಂದಿನ ದಿನಾಂಕದವರೆಗೆ ಬಂದೂಕನ್ನು ಠೇವಣಿ ಇಡುವಂತೆ ಒತ್ತಾಯಿಸದಂತೆ ಇಲಾಖೆಗಳಿಗೆ ನಿರ್ದೇಶಿಸಿದೆ.ಎ.2 ರಂದು ಅರ್ಜಿಯ ವಿಚಾರಣೆ ನಡೆಯಲಿದೆ.

Advertisement
Advertisement

ಚುನಾವಣಾ ಸಮಯದಲ್ಲಿ ಕೃಷಿಕರ ಬಂದೂಕುಗಳನ್ನು ಠೇವಣಿ ಇಡಬೇಕು ಎಂದು ಪ್ರತೀ ಚುನಾವಣೆಯಲ್ಲೂ ಆದೇಶವಾಗುತ್ತದೆ. ಈ ಬಾರಿಯೂ ಈ ಆದೇಶವಾಗಿದೆ. ಕಳೆದ ಚುನಾವಣೆಯಲ್ಲಿ ಹಲವು ಕೃಷಿಕರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಸಂದರ್ಭ, ಬಂದೂಕು ಠೇವಣಾತಿಗೆ ಕೃಷಿಕರು ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿ ಅಲ್ಲಿಂದ ವಿನಾಯಿತಿ ಪಡೆಯಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿತ್ತು. ಈ ಬಾರಿ ಕೃಷಿಕರು ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿದ್ದರೂ ಬಹುಪಾಲು ಎಲ್ಲಾ ಅರ್ಜಿಗಳೂ ತಿರಸ್ಕೃತಗೊಂಡು ಬಂದೂಕು ಠೇವಣಾತಿಗೆ ಸೂಚಿಸಲಾಗಿತ್ತು.

ಹೀಗಾಗಿ ಈ ಬಗ್ಗೆ ಬಂಟ್ವಾಳ ತಾಲೂಕಿನ ಕೃಷಿಕ ಮಾಣಿಮೂಲೆ ಗೋವಿಂದ ಭಟ್‌ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿಯನ್ನು ಪುರಸ್ಕಾರ ಮಾಡಿದ ನ್ಯಾಯಾಲಯವು , ಅರ್ಜಿದಾರರ ಪರ ವಕೀಲರು ಕೃಷಿಕರ ವಿಷಯ ಪ್ರಸ್ತಾಪಿಸಿದ್ದರು. ಸ್ಕ್ರೀನಿಂಗ್ ಕಮಿಟಿಯು ಅಂಗೀಕರಿಸಿದ ಆದೇಶದ ಪ್ರಕಾರ ಅರ್ಜಿದಾರರು ಇನ್ನೂ ಬಂದೂಕನ್ನು ಪೊಲೀಸ್ ಠಾಣೆಗೆ ಜಮಾ ಮಾಡಿಲ್ಲ ಎಂದೂ ಮನವರಿಕೆ ಮಾಡಿದರು. ಈ ಬಗ್ಗೆ ಎ.2 ರಂದು ವಿಚಾರಣೆ ನಡೆಸಲಾಗುತ್ತಿದೆ ಅದುವರೆಗೂ ಅಥವಾ  ಮುಂದಿನ ದಿನಾಂಕದವರೆಗೆ ಬಂದೂಕನ್ನು ಠೇವಣಿ ಇಡುವಂತೆ ಒತ್ತಾಯಿಸದಂತೆ  ನಿರ್ದೇಶನ ನೀಡಿದೆ.

ಈ ನಡುವೆ ಕಳೆದ ಬಾರಿಯ ಚುನಾವಣೆಯ ವೇಳೆ 50 ಕ್ಕೂ ಹೆಚ್ಚು ಕೃಷಿಕರು ಹೈಕೋರ್ಟ್‌ಗೆ ಮನವಿ ಸಲ್ಲಿಸಿ ಕೃಷಿಕರ ಬಂದೂಕು ಠೇವಣಾತಿ ಇರಿಸುವುದಕ್ಕೆ ವಿನಾಯಿತಿ ಬೇಕು ಎಂದು ಮನವಿ ಮಾಡಿದ್ದರು. ಈ ಸಂದರ್ಭ ಬಂದೂಕು ಠೇವಣಾತಿಗೆ ಕೃಷಿಕರು ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿ ಅಲ್ಲಿಂದ ವಿನಾಯಿತಿ ಪಡೆಯಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿತ್ತು.  ಇದೇ ಆಧಾರದಲ್ಲಿ ಈ ಬಾರಿ ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸುಳ್ಯ ತಾಲೂಕಿನ ಗುತ್ತಿಗಾರಿನ ಗಂಗಾಧರ ಭಟ್‌ ಪುಚ್ಚಪ್ಪಾಡಿ ಅವರು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಮೈಲ್‌ ಮೂಲಕ ತಿಳಿಸಿದ್ದರು, ಅದರ ಜೊತೆಗೆ ನ್ಯಾಯಾಲಯದ ಆದೇಶವನ್ನೂ ಉಲ್ಲೇಖಿಸಿದ್ದರು. ಈ ಬಗ್ಗೆ ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ದ ಕ ಜಿಲ್ಲಾದಿಕಾರಿಯವರಿಗೆ ಸೂಚನೆ ನೀಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

3 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

3 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

4 hours ago

ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ  ವ್ಯಾಪಕವಾಗಿ ಮಳೆಯಾಗಲಿದೆ…

4 hours ago

ಪಶು ಆಹಾರ : ಈ ವಿಷಯ ನಿಮಗೆ ತಿಳಿದಿರಲಿ !

ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…

4 hours ago

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago