MIRROR FOCUS

ಚುನಾವಣಾ ಕಣ | ಕೃಷಿಕರ ಕೋವಿ ಡಿಪಾಸಿಟ್‌ ವಿಚಾರ | ನ್ಯಾಯಾಲಯದ ಮೊರೆ ಹೋದ ಕೃಷಿಕರು | ಬಂದೂಕನ್ನು ಠೇವಣಿ ಇಡುವಂತೆ ಒತ್ತಾಯಿಸದಂತೆ ನಿರ್ದೇಶನ |

Share

ಚುನಾವಣಾ ಸಮಯದಲ್ಲಿ ಕೃಷಿ ರಕ್ಷಣೆಗಾಗಿ ಲೈಸನ್ಸ್‌ ಹೊಂದಿದ ಕೃಷಿಕರ ಬಂದೂಕುಗಳನ್ನು ಠೇವಣಿ ಇಡಬೇಕು ಎನ್ನುವ ಸೂಚನೆಯ ಬಗ್ಗೆ ಈಗಾಗಲೇ ಚರ್ಚೆಯಾಗುತ್ತಿದೆ. ಈ ನಡುವೆ ಕೆಲವು ಕೃಷಿಕರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಬಂದೂಕನ್ನು ಠೇವಣಾತಿ ಇರಿಸಲು ವಿನಾಯಿತಿ ಬೇಕು ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ದಾವೆ ಹೂಡಿದ ಕೃಷಿಕರಿಗೆ ಮುಂದಿನ ದಿನಾಂಕದವರೆಗೆ ಬಂದೂಕನ್ನು ಠೇವಣಿ ಇಡುವಂತೆ ಒತ್ತಾಯಿಸದಂತೆ ಇಲಾಖೆಗಳಿಗೆ ನಿರ್ದೇಶಿಸಿದೆ.ಎ.2 ರಂದು ಅರ್ಜಿಯ ವಿಚಾರಣೆ ನಡೆಯಲಿದೆ.

ಚುನಾವಣಾ ಸಮಯದಲ್ಲಿ ಕೃಷಿಕರ ಬಂದೂಕುಗಳನ್ನು ಠೇವಣಿ ಇಡಬೇಕು ಎಂದು ಪ್ರತೀ ಚುನಾವಣೆಯಲ್ಲೂ ಆದೇಶವಾಗುತ್ತದೆ. ಈ ಬಾರಿಯೂ ಈ ಆದೇಶವಾಗಿದೆ. ಕಳೆದ ಚುನಾವಣೆಯಲ್ಲಿ ಹಲವು ಕೃಷಿಕರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಸಂದರ್ಭ, ಬಂದೂಕು ಠೇವಣಾತಿಗೆ ಕೃಷಿಕರು ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿ ಅಲ್ಲಿಂದ ವಿನಾಯಿತಿ ಪಡೆಯಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿತ್ತು. ಈ ಬಾರಿ ಕೃಷಿಕರು ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿದ್ದರೂ ಬಹುಪಾಲು ಎಲ್ಲಾ ಅರ್ಜಿಗಳೂ ತಿರಸ್ಕೃತಗೊಂಡು ಬಂದೂಕು ಠೇವಣಾತಿಗೆ ಸೂಚಿಸಲಾಗಿತ್ತು.

ಹೀಗಾಗಿ ಈ ಬಗ್ಗೆ ಬಂಟ್ವಾಳ ತಾಲೂಕಿನ ಕೃಷಿಕ ಮಾಣಿಮೂಲೆ ಗೋವಿಂದ ಭಟ್‌ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿಯನ್ನು ಪುರಸ್ಕಾರ ಮಾಡಿದ ನ್ಯಾಯಾಲಯವು , ಅರ್ಜಿದಾರರ ಪರ ವಕೀಲರು ಕೃಷಿಕರ ವಿಷಯ ಪ್ರಸ್ತಾಪಿಸಿದ್ದರು. ಸ್ಕ್ರೀನಿಂಗ್ ಕಮಿಟಿಯು ಅಂಗೀಕರಿಸಿದ ಆದೇಶದ ಪ್ರಕಾರ ಅರ್ಜಿದಾರರು ಇನ್ನೂ ಬಂದೂಕನ್ನು ಪೊಲೀಸ್ ಠಾಣೆಗೆ ಜಮಾ ಮಾಡಿಲ್ಲ ಎಂದೂ ಮನವರಿಕೆ ಮಾಡಿದರು. ಈ ಬಗ್ಗೆ ಎ.2 ರಂದು ವಿಚಾರಣೆ ನಡೆಸಲಾಗುತ್ತಿದೆ ಅದುವರೆಗೂ ಅಥವಾ  ಮುಂದಿನ ದಿನಾಂಕದವರೆಗೆ ಬಂದೂಕನ್ನು ಠೇವಣಿ ಇಡುವಂತೆ ಒತ್ತಾಯಿಸದಂತೆ  ನಿರ್ದೇಶನ ನೀಡಿದೆ.

ಈ ನಡುವೆ ಕಳೆದ ಬಾರಿಯ ಚುನಾವಣೆಯ ವೇಳೆ 50 ಕ್ಕೂ ಹೆಚ್ಚು ಕೃಷಿಕರು ಹೈಕೋರ್ಟ್‌ಗೆ ಮನವಿ ಸಲ್ಲಿಸಿ ಕೃಷಿಕರ ಬಂದೂಕು ಠೇವಣಾತಿ ಇರಿಸುವುದಕ್ಕೆ ವಿನಾಯಿತಿ ಬೇಕು ಎಂದು ಮನವಿ ಮಾಡಿದ್ದರು. ಈ ಸಂದರ್ಭ ಬಂದೂಕು ಠೇವಣಾತಿಗೆ ಕೃಷಿಕರು ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿ ಅಲ್ಲಿಂದ ವಿನಾಯಿತಿ ಪಡೆಯಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿತ್ತು.  ಇದೇ ಆಧಾರದಲ್ಲಿ ಈ ಬಾರಿ ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸುಳ್ಯ ತಾಲೂಕಿನ ಗುತ್ತಿಗಾರಿನ ಗಂಗಾಧರ ಭಟ್‌ ಪುಚ್ಚಪ್ಪಾಡಿ ಅವರು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಮೈಲ್‌ ಮೂಲಕ ತಿಳಿಸಿದ್ದರು, ಅದರ ಜೊತೆಗೆ ನ್ಯಾಯಾಲಯದ ಆದೇಶವನ್ನೂ ಉಲ್ಲೇಖಿಸಿದ್ದರು. ಈ ಬಗ್ಗೆ ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ದ ಕ ಜಿಲ್ಲಾದಿಕಾರಿಯವರಿಗೆ ಸೂಚನೆ ನೀಡಿದ್ದಾರೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

16 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

16 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

16 hours ago

ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

23 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

24 hours ago