Advertisement
MIRROR FOCUS

ಚುನಾವಣಾ ಕಣ | ಕೃಷಿಕರ ಕೋವಿ ಡಿಪಾಸಿಟ್‌ ವಿಚಾರ | ನ್ಯಾಯಾಲಯದ ಮೊರೆ ಹೋದ ಕೃಷಿಕರು | ಬಂದೂಕನ್ನು ಠೇವಣಿ ಇಡುವಂತೆ ಒತ್ತಾಯಿಸದಂತೆ ನಿರ್ದೇಶನ |

Share

ಚುನಾವಣಾ ಸಮಯದಲ್ಲಿ ಕೃಷಿ ರಕ್ಷಣೆಗಾಗಿ ಲೈಸನ್ಸ್‌ ಹೊಂದಿದ ಕೃಷಿಕರ ಬಂದೂಕುಗಳನ್ನು ಠೇವಣಿ ಇಡಬೇಕು ಎನ್ನುವ ಸೂಚನೆಯ ಬಗ್ಗೆ ಈಗಾಗಲೇ ಚರ್ಚೆಯಾಗುತ್ತಿದೆ. ಈ ನಡುವೆ ಕೆಲವು ಕೃಷಿಕರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಬಂದೂಕನ್ನು ಠೇವಣಾತಿ ಇರಿಸಲು ವಿನಾಯಿತಿ ಬೇಕು ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ದಾವೆ ಹೂಡಿದ ಕೃಷಿಕರಿಗೆ ಮುಂದಿನ ದಿನಾಂಕದವರೆಗೆ ಬಂದೂಕನ್ನು ಠೇವಣಿ ಇಡುವಂತೆ ಒತ್ತಾಯಿಸದಂತೆ ಇಲಾಖೆಗಳಿಗೆ ನಿರ್ದೇಶಿಸಿದೆ.ಎ.2 ರಂದು ಅರ್ಜಿಯ ವಿಚಾರಣೆ ನಡೆಯಲಿದೆ.

ಚುನಾವಣಾ ಸಮಯದಲ್ಲಿ ಕೃಷಿಕರ ಬಂದೂಕುಗಳನ್ನು ಠೇವಣಿ ಇಡಬೇಕು ಎಂದು ಪ್ರತೀ ಚುನಾವಣೆಯಲ್ಲೂ ಆದೇಶವಾಗುತ್ತದೆ. ಈ ಬಾರಿಯೂ ಈ ಆದೇಶವಾಗಿದೆ. ಕಳೆದ ಚುನಾವಣೆಯಲ್ಲಿ ಹಲವು ಕೃಷಿಕರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಸಂದರ್ಭ, ಬಂದೂಕು ಠೇವಣಾತಿಗೆ ಕೃಷಿಕರು ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿ ಅಲ್ಲಿಂದ ವಿನಾಯಿತಿ ಪಡೆಯಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿತ್ತು. ಈ ಬಾರಿ ಕೃಷಿಕರು ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿದ್ದರೂ ಬಹುಪಾಲು ಎಲ್ಲಾ ಅರ್ಜಿಗಳೂ ತಿರಸ್ಕೃತಗೊಂಡು ಬಂದೂಕು ಠೇವಣಾತಿಗೆ ಸೂಚಿಸಲಾಗಿತ್ತು.

ಹೀಗಾಗಿ ಈ ಬಗ್ಗೆ ಬಂಟ್ವಾಳ ತಾಲೂಕಿನ ಕೃಷಿಕ ಮಾಣಿಮೂಲೆ ಗೋವಿಂದ ಭಟ್‌ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿಯನ್ನು ಪುರಸ್ಕಾರ ಮಾಡಿದ ನ್ಯಾಯಾಲಯವು , ಅರ್ಜಿದಾರರ ಪರ ವಕೀಲರು ಕೃಷಿಕರ ವಿಷಯ ಪ್ರಸ್ತಾಪಿಸಿದ್ದರು. ಸ್ಕ್ರೀನಿಂಗ್ ಕಮಿಟಿಯು ಅಂಗೀಕರಿಸಿದ ಆದೇಶದ ಪ್ರಕಾರ ಅರ್ಜಿದಾರರು ಇನ್ನೂ ಬಂದೂಕನ್ನು ಪೊಲೀಸ್ ಠಾಣೆಗೆ ಜಮಾ ಮಾಡಿಲ್ಲ ಎಂದೂ ಮನವರಿಕೆ ಮಾಡಿದರು. ಈ ಬಗ್ಗೆ ಎ.2 ರಂದು ವಿಚಾರಣೆ ನಡೆಸಲಾಗುತ್ತಿದೆ ಅದುವರೆಗೂ ಅಥವಾ  ಮುಂದಿನ ದಿನಾಂಕದವರೆಗೆ ಬಂದೂಕನ್ನು ಠೇವಣಿ ಇಡುವಂತೆ ಒತ್ತಾಯಿಸದಂತೆ  ನಿರ್ದೇಶನ ನೀಡಿದೆ.

ಈ ನಡುವೆ ಕಳೆದ ಬಾರಿಯ ಚುನಾವಣೆಯ ವೇಳೆ 50 ಕ್ಕೂ ಹೆಚ್ಚು ಕೃಷಿಕರು ಹೈಕೋರ್ಟ್‌ಗೆ ಮನವಿ ಸಲ್ಲಿಸಿ ಕೃಷಿಕರ ಬಂದೂಕು ಠೇವಣಾತಿ ಇರಿಸುವುದಕ್ಕೆ ವಿನಾಯಿತಿ ಬೇಕು ಎಂದು ಮನವಿ ಮಾಡಿದ್ದರು. ಈ ಸಂದರ್ಭ ಬಂದೂಕು ಠೇವಣಾತಿಗೆ ಕೃಷಿಕರು ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿ ಅಲ್ಲಿಂದ ವಿನಾಯಿತಿ ಪಡೆಯಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿತ್ತು.  ಇದೇ ಆಧಾರದಲ್ಲಿ ಈ ಬಾರಿ ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸುಳ್ಯ ತಾಲೂಕಿನ ಗುತ್ತಿಗಾರಿನ ಗಂಗಾಧರ ಭಟ್‌ ಪುಚ್ಚಪ್ಪಾಡಿ ಅವರು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಮೈಲ್‌ ಮೂಲಕ ತಿಳಿಸಿದ್ದರು, ಅದರ ಜೊತೆಗೆ ನ್ಯಾಯಾಲಯದ ಆದೇಶವನ್ನೂ ಉಲ್ಲೇಖಿಸಿದ್ದರು. ಈ ಬಗ್ಗೆ ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ದ ಕ ಜಿಲ್ಲಾದಿಕಾರಿಯವರಿಗೆ ಸೂಚನೆ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 hours ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

10 hours ago

ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ

ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…

10 hours ago

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!

ಕಾಕ್ರೋಚ್‌ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…

1 day ago

ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…

1 day ago

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

2 days ago