Advertisement
MIRROR FOCUS

ಚುನಾವಣಾ ಕಣ | ಕೃಷಿಕರ ಕೋವಿ ಡಿಪಾಸಿಟ್‌ ವಿಚಾರ | ನ್ಯಾಯಾಲಯದ ಮೊರೆ ಹೋದ ಕೃಷಿಕರು | ಬಂದೂಕನ್ನು ಠೇವಣಿ ಇಡುವಂತೆ ಒತ್ತಾಯಿಸದಂತೆ ನಿರ್ದೇಶನ |

Share

ಚುನಾವಣಾ ಸಮಯದಲ್ಲಿ ಕೃಷಿ ರಕ್ಷಣೆಗಾಗಿ ಲೈಸನ್ಸ್‌ ಹೊಂದಿದ ಕೃಷಿಕರ ಬಂದೂಕುಗಳನ್ನು ಠೇವಣಿ ಇಡಬೇಕು ಎನ್ನುವ ಸೂಚನೆಯ ಬಗ್ಗೆ ಈಗಾಗಲೇ ಚರ್ಚೆಯಾಗುತ್ತಿದೆ. ಈ ನಡುವೆ ಕೆಲವು ಕೃಷಿಕರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಬಂದೂಕನ್ನು ಠೇವಣಾತಿ ಇರಿಸಲು ವಿನಾಯಿತಿ ಬೇಕು ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ದಾವೆ ಹೂಡಿದ ಕೃಷಿಕರಿಗೆ ಮುಂದಿನ ದಿನಾಂಕದವರೆಗೆ ಬಂದೂಕನ್ನು ಠೇವಣಿ ಇಡುವಂತೆ ಒತ್ತಾಯಿಸದಂತೆ ಇಲಾಖೆಗಳಿಗೆ ನಿರ್ದೇಶಿಸಿದೆ.ಎ.2 ರಂದು ಅರ್ಜಿಯ ವಿಚಾರಣೆ ನಡೆಯಲಿದೆ.

ಚುನಾವಣಾ ಸಮಯದಲ್ಲಿ ಕೃಷಿಕರ ಬಂದೂಕುಗಳನ್ನು ಠೇವಣಿ ಇಡಬೇಕು ಎಂದು ಪ್ರತೀ ಚುನಾವಣೆಯಲ್ಲೂ ಆದೇಶವಾಗುತ್ತದೆ. ಈ ಬಾರಿಯೂ ಈ ಆದೇಶವಾಗಿದೆ. ಕಳೆದ ಚುನಾವಣೆಯಲ್ಲಿ ಹಲವು ಕೃಷಿಕರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಸಂದರ್ಭ, ಬಂದೂಕು ಠೇವಣಾತಿಗೆ ಕೃಷಿಕರು ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿ ಅಲ್ಲಿಂದ ವಿನಾಯಿತಿ ಪಡೆಯಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿತ್ತು. ಈ ಬಾರಿ ಕೃಷಿಕರು ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿದ್ದರೂ ಬಹುಪಾಲು ಎಲ್ಲಾ ಅರ್ಜಿಗಳೂ ತಿರಸ್ಕೃತಗೊಂಡು ಬಂದೂಕು ಠೇವಣಾತಿಗೆ ಸೂಚಿಸಲಾಗಿತ್ತು.

ಹೀಗಾಗಿ ಈ ಬಗ್ಗೆ ಬಂಟ್ವಾಳ ತಾಲೂಕಿನ ಕೃಷಿಕ ಮಾಣಿಮೂಲೆ ಗೋವಿಂದ ಭಟ್‌ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿಯನ್ನು ಪುರಸ್ಕಾರ ಮಾಡಿದ ನ್ಯಾಯಾಲಯವು , ಅರ್ಜಿದಾರರ ಪರ ವಕೀಲರು ಕೃಷಿಕರ ವಿಷಯ ಪ್ರಸ್ತಾಪಿಸಿದ್ದರು. ಸ್ಕ್ರೀನಿಂಗ್ ಕಮಿಟಿಯು ಅಂಗೀಕರಿಸಿದ ಆದೇಶದ ಪ್ರಕಾರ ಅರ್ಜಿದಾರರು ಇನ್ನೂ ಬಂದೂಕನ್ನು ಪೊಲೀಸ್ ಠಾಣೆಗೆ ಜಮಾ ಮಾಡಿಲ್ಲ ಎಂದೂ ಮನವರಿಕೆ ಮಾಡಿದರು. ಈ ಬಗ್ಗೆ ಎ.2 ರಂದು ವಿಚಾರಣೆ ನಡೆಸಲಾಗುತ್ತಿದೆ ಅದುವರೆಗೂ ಅಥವಾ  ಮುಂದಿನ ದಿನಾಂಕದವರೆಗೆ ಬಂದೂಕನ್ನು ಠೇವಣಿ ಇಡುವಂತೆ ಒತ್ತಾಯಿಸದಂತೆ  ನಿರ್ದೇಶನ ನೀಡಿದೆ.

ಈ ನಡುವೆ ಕಳೆದ ಬಾರಿಯ ಚುನಾವಣೆಯ ವೇಳೆ 50 ಕ್ಕೂ ಹೆಚ್ಚು ಕೃಷಿಕರು ಹೈಕೋರ್ಟ್‌ಗೆ ಮನವಿ ಸಲ್ಲಿಸಿ ಕೃಷಿಕರ ಬಂದೂಕು ಠೇವಣಾತಿ ಇರಿಸುವುದಕ್ಕೆ ವಿನಾಯಿತಿ ಬೇಕು ಎಂದು ಮನವಿ ಮಾಡಿದ್ದರು. ಈ ಸಂದರ್ಭ ಬಂದೂಕು ಠೇವಣಾತಿಗೆ ಕೃಷಿಕರು ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿ ಅಲ್ಲಿಂದ ವಿನಾಯಿತಿ ಪಡೆಯಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿತ್ತು.  ಇದೇ ಆಧಾರದಲ್ಲಿ ಈ ಬಾರಿ ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸುಳ್ಯ ತಾಲೂಕಿನ ಗುತ್ತಿಗಾರಿನ ಗಂಗಾಧರ ಭಟ್‌ ಪುಚ್ಚಪ್ಪಾಡಿ ಅವರು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಮೈಲ್‌ ಮೂಲಕ ತಿಳಿಸಿದ್ದರು, ಅದರ ಜೊತೆಗೆ ನ್ಯಾಯಾಲಯದ ಆದೇಶವನ್ನೂ ಉಲ್ಲೇಖಿಸಿದ್ದರು. ಈ ಬಗ್ಗೆ ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ದ ಕ ಜಿಲ್ಲಾದಿಕಾರಿಯವರಿಗೆ ಸೂಚನೆ ನೀಡಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

24 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago