Advertisement
MIRROR FOCUS

ಚುನಾವಣಾ ಕಣ | ಕೃಷಿಕರ ಕೋವಿ ಡಿಪಾಸಿಟ್‌ ವಿಚಾರ | ನ್ಯಾಯಾಲಯದ ಮೊರೆ ಹೋದ ಕೃಷಿಕರು | ಬಂದೂಕನ್ನು ಠೇವಣಿ ಇಡುವಂತೆ ಒತ್ತಾಯಿಸದಂತೆ ನಿರ್ದೇಶನ |

Share

ಚುನಾವಣಾ ಸಮಯದಲ್ಲಿ ಕೃಷಿ ರಕ್ಷಣೆಗಾಗಿ ಲೈಸನ್ಸ್‌ ಹೊಂದಿದ ಕೃಷಿಕರ ಬಂದೂಕುಗಳನ್ನು ಠೇವಣಿ ಇಡಬೇಕು ಎನ್ನುವ ಸೂಚನೆಯ ಬಗ್ಗೆ ಈಗಾಗಲೇ ಚರ್ಚೆಯಾಗುತ್ತಿದೆ. ಈ ನಡುವೆ ಕೆಲವು ಕೃಷಿಕರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಬಂದೂಕನ್ನು ಠೇವಣಾತಿ ಇರಿಸಲು ವಿನಾಯಿತಿ ಬೇಕು ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ದಾವೆ ಹೂಡಿದ ಕೃಷಿಕರಿಗೆ ಮುಂದಿನ ದಿನಾಂಕದವರೆಗೆ ಬಂದೂಕನ್ನು ಠೇವಣಿ ಇಡುವಂತೆ ಒತ್ತಾಯಿಸದಂತೆ ಇಲಾಖೆಗಳಿಗೆ ನಿರ್ದೇಶಿಸಿದೆ.ಎ.2 ರಂದು ಅರ್ಜಿಯ ವಿಚಾರಣೆ ನಡೆಯಲಿದೆ.

ಚುನಾವಣಾ ಸಮಯದಲ್ಲಿ ಕೃಷಿಕರ ಬಂದೂಕುಗಳನ್ನು ಠೇವಣಿ ಇಡಬೇಕು ಎಂದು ಪ್ರತೀ ಚುನಾವಣೆಯಲ್ಲೂ ಆದೇಶವಾಗುತ್ತದೆ. ಈ ಬಾರಿಯೂ ಈ ಆದೇಶವಾಗಿದೆ. ಕಳೆದ ಚುನಾವಣೆಯಲ್ಲಿ ಹಲವು ಕೃಷಿಕರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಸಂದರ್ಭ, ಬಂದೂಕು ಠೇವಣಾತಿಗೆ ಕೃಷಿಕರು ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿ ಅಲ್ಲಿಂದ ವಿನಾಯಿತಿ ಪಡೆಯಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿತ್ತು. ಈ ಬಾರಿ ಕೃಷಿಕರು ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿದ್ದರೂ ಬಹುಪಾಲು ಎಲ್ಲಾ ಅರ್ಜಿಗಳೂ ತಿರಸ್ಕೃತಗೊಂಡು ಬಂದೂಕು ಠೇವಣಾತಿಗೆ ಸೂಚಿಸಲಾಗಿತ್ತು.

Advertisement

ಹೀಗಾಗಿ ಈ ಬಗ್ಗೆ ಬಂಟ್ವಾಳ ತಾಲೂಕಿನ ಕೃಷಿಕ ಮಾಣಿಮೂಲೆ ಗೋವಿಂದ ಭಟ್‌ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿಯನ್ನು ಪುರಸ್ಕಾರ ಮಾಡಿದ ನ್ಯಾಯಾಲಯವು , ಅರ್ಜಿದಾರರ ಪರ ವಕೀಲರು ಕೃಷಿಕರ ವಿಷಯ ಪ್ರಸ್ತಾಪಿಸಿದ್ದರು. ಸ್ಕ್ರೀನಿಂಗ್ ಕಮಿಟಿಯು ಅಂಗೀಕರಿಸಿದ ಆದೇಶದ ಪ್ರಕಾರ ಅರ್ಜಿದಾರರು ಇನ್ನೂ ಬಂದೂಕನ್ನು ಪೊಲೀಸ್ ಠಾಣೆಗೆ ಜಮಾ ಮಾಡಿಲ್ಲ ಎಂದೂ ಮನವರಿಕೆ ಮಾಡಿದರು. ಈ ಬಗ್ಗೆ ಎ.2 ರಂದು ವಿಚಾರಣೆ ನಡೆಸಲಾಗುತ್ತಿದೆ ಅದುವರೆಗೂ ಅಥವಾ  ಮುಂದಿನ ದಿನಾಂಕದವರೆಗೆ ಬಂದೂಕನ್ನು ಠೇವಣಿ ಇಡುವಂತೆ ಒತ್ತಾಯಿಸದಂತೆ  ನಿರ್ದೇಶನ ನೀಡಿದೆ.

ಈ ನಡುವೆ ಕಳೆದ ಬಾರಿಯ ಚುನಾವಣೆಯ ವೇಳೆ 50 ಕ್ಕೂ ಹೆಚ್ಚು ಕೃಷಿಕರು ಹೈಕೋರ್ಟ್‌ಗೆ ಮನವಿ ಸಲ್ಲಿಸಿ ಕೃಷಿಕರ ಬಂದೂಕು ಠೇವಣಾತಿ ಇರಿಸುವುದಕ್ಕೆ ವಿನಾಯಿತಿ ಬೇಕು ಎಂದು ಮನವಿ ಮಾಡಿದ್ದರು. ಈ ಸಂದರ್ಭ ಬಂದೂಕು ಠೇವಣಾತಿಗೆ ಕೃಷಿಕರು ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿ ಅಲ್ಲಿಂದ ವಿನಾಯಿತಿ ಪಡೆಯಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿತ್ತು.  ಇದೇ ಆಧಾರದಲ್ಲಿ ಈ ಬಾರಿ ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸುಳ್ಯ ತಾಲೂಕಿನ ಗುತ್ತಿಗಾರಿನ ಗಂಗಾಧರ ಭಟ್‌ ಪುಚ್ಚಪ್ಪಾಡಿ ಅವರು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಮೈಲ್‌ ಮೂಲಕ ತಿಳಿಸಿದ್ದರು, ಅದರ ಜೊತೆಗೆ ನ್ಯಾಯಾಲಯದ ಆದೇಶವನ್ನೂ ಉಲ್ಲೇಖಿಸಿದ್ದರು. ಈ ಬಗ್ಗೆ ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ದ ಕ ಜಿಲ್ಲಾದಿಕಾರಿಯವರಿಗೆ ಸೂಚನೆ ನೀಡಿದ್ದಾರೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

1 hour ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

5 hours ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

6 hours ago

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

14 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

14 hours ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

16 hours ago