ಚುನಾವಣಾ ಸಮಯದಲ್ಲಿ ಕೃಷಿ ರಕ್ಷಣೆಗಾಗಿ ಲೈಸನ್ಸ್ ಹೊಂದಿದ ಕೃಷಿಕರ ಬಂದೂಕುಗಳನ್ನು ಠೇವಣಿ ಇಡಬೇಕು ಎನ್ನುವ ಸೂಚನೆಯ ಬಗ್ಗೆ ಈಗಾಗಲೇ ಚರ್ಚೆಯಾಗುತ್ತಿದೆ. ಈ ನಡುವೆ ಕೆಲವು ಕೃಷಿಕರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬಂದೂಕನ್ನು ಠೇವಣಾತಿ ಇರಿಸಲು ವಿನಾಯಿತಿ ಬೇಕು ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ದಾವೆ ಹೂಡಿದ ಕೃಷಿಕರಿಗೆ ಮುಂದಿನ ದಿನಾಂಕದವರೆಗೆ ಬಂದೂಕನ್ನು ಠೇವಣಿ ಇಡುವಂತೆ ಒತ್ತಾಯಿಸದಂತೆ ಇಲಾಖೆಗಳಿಗೆ ನಿರ್ದೇಶಿಸಿದೆ.ಎ.2 ರಂದು ಅರ್ಜಿಯ ವಿಚಾರಣೆ ನಡೆಯಲಿದೆ.
ಚುನಾವಣಾ ಸಮಯದಲ್ಲಿ ಕೃಷಿಕರ ಬಂದೂಕುಗಳನ್ನು ಠೇವಣಿ ಇಡಬೇಕು ಎಂದು ಪ್ರತೀ ಚುನಾವಣೆಯಲ್ಲೂ ಆದೇಶವಾಗುತ್ತದೆ. ಈ ಬಾರಿಯೂ ಈ ಆದೇಶವಾಗಿದೆ. ಕಳೆದ ಚುನಾವಣೆಯಲ್ಲಿ ಹಲವು ಕೃಷಿಕರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಸಂದರ್ಭ, ಬಂದೂಕು ಠೇವಣಾತಿಗೆ ಕೃಷಿಕರು ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿ ಅಲ್ಲಿಂದ ವಿನಾಯಿತಿ ಪಡೆಯಬೇಕು ಎಂದು ಹೈಕೋರ್ಟ್ ಸೂಚನೆ ನೀಡಿತ್ತು. ಈ ಬಾರಿ ಕೃಷಿಕರು ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿದ್ದರೂ ಬಹುಪಾಲು ಎಲ್ಲಾ ಅರ್ಜಿಗಳೂ ತಿರಸ್ಕೃತಗೊಂಡು ಬಂದೂಕು ಠೇವಣಾತಿಗೆ ಸೂಚಿಸಲಾಗಿತ್ತು.
ಹೀಗಾಗಿ ಈ ಬಗ್ಗೆ ಬಂಟ್ವಾಳ ತಾಲೂಕಿನ ಕೃಷಿಕ ಮಾಣಿಮೂಲೆ ಗೋವಿಂದ ಭಟ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ಪುರಸ್ಕಾರ ಮಾಡಿದ ನ್ಯಾಯಾಲಯವು , ಅರ್ಜಿದಾರರ ಪರ ವಕೀಲರು ಕೃಷಿಕರ ವಿಷಯ ಪ್ರಸ್ತಾಪಿಸಿದ್ದರು. ಸ್ಕ್ರೀನಿಂಗ್ ಕಮಿಟಿಯು ಅಂಗೀಕರಿಸಿದ ಆದೇಶದ ಪ್ರಕಾರ ಅರ್ಜಿದಾರರು ಇನ್ನೂ ಬಂದೂಕನ್ನು ಪೊಲೀಸ್ ಠಾಣೆಗೆ ಜಮಾ ಮಾಡಿಲ್ಲ ಎಂದೂ ಮನವರಿಕೆ ಮಾಡಿದರು. ಈ ಬಗ್ಗೆ ಎ.2 ರಂದು ವಿಚಾರಣೆ ನಡೆಸಲಾಗುತ್ತಿದೆ ಅದುವರೆಗೂ ಅಥವಾ ಮುಂದಿನ ದಿನಾಂಕದವರೆಗೆ ಬಂದೂಕನ್ನು ಠೇವಣಿ ಇಡುವಂತೆ ಒತ್ತಾಯಿಸದಂತೆ ನಿರ್ದೇಶನ ನೀಡಿದೆ.
ಈ ನಡುವೆ ಕಳೆದ ಬಾರಿಯ ಚುನಾವಣೆಯ ವೇಳೆ 50 ಕ್ಕೂ ಹೆಚ್ಚು ಕೃಷಿಕರು ಹೈಕೋರ್ಟ್ಗೆ ಮನವಿ ಸಲ್ಲಿಸಿ ಕೃಷಿಕರ ಬಂದೂಕು ಠೇವಣಾತಿ ಇರಿಸುವುದಕ್ಕೆ ವಿನಾಯಿತಿ ಬೇಕು ಎಂದು ಮನವಿ ಮಾಡಿದ್ದರು. ಈ ಸಂದರ್ಭ ಬಂದೂಕು ಠೇವಣಾತಿಗೆ ಕೃಷಿಕರು ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿ ಅಲ್ಲಿಂದ ವಿನಾಯಿತಿ ಪಡೆಯಬೇಕು ಎಂದು ಹೈಕೋರ್ಟ್ ಸೂಚನೆ ನೀಡಿತ್ತು. ಇದೇ ಆಧಾರದಲ್ಲಿ ಈ ಬಾರಿ ಸ್ಕ್ರೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸುಳ್ಯ ತಾಲೂಕಿನ ಗುತ್ತಿಗಾರಿನ ಗಂಗಾಧರ ಭಟ್ ಪುಚ್ಚಪ್ಪಾಡಿ ಅವರು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಮೈಲ್ ಮೂಲಕ ತಿಳಿಸಿದ್ದರು, ಅದರ ಜೊತೆಗೆ ನ್ಯಾಯಾಲಯದ ಆದೇಶವನ್ನೂ ಉಲ್ಲೇಖಿಸಿದ್ದರು. ಈ ಬಗ್ಗೆ ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ದ ಕ ಜಿಲ್ಲಾದಿಕಾರಿಯವರಿಗೆ ಸೂಚನೆ ನೀಡಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…