Advertisement
ಸುದ್ದಿಗಳು

ಕೋವಿ ಠೇವಣಾತಿ ಸಮಸ್ಯೆ | ಹೈಕೋರ್ಟ್‌ ಮೊರೆ ಹೋದ ಕೃಷಿಕರು | ಕೋವಿ ಠೇವಣಾತಿ ವಿನಾಯತಿಗೆ ಸ್ಕ್ರೀನಿಂಗ್‌ ಕಮಿಟಿ |

Share

ಪ್ರತೀ ಚುನಾವಣೆಯ ಸಂದರ್ಭ ಕೃಷಿಕರಿಗೆ ಸಮಸ್ಯೆ ಕೋವಿ ಠೇವಣಾತಿಯದ್ದು. ಕಳೆದ ಕೆಲವು ಸಮಯಗಳಿಂದ ಈ ಬಗ್ಗೆ ವಿವಾದ, ಚರ್ಚೆ ನಡೆಯುತ್ತಿತ್ತು. ಈ ಬಾರಿ  ದಕ್ಷಿಣ ಕನ್ನಡ ಜಿಲ್ಲೆಯ 56 ಕೃಷಿಕರು ಒಟ್ಟಾಗಿ ಹೈಕೋರ್ಟ್‌ ಮೊರೆ ಹೋಗಿದ್ದರು. ಈ ಸಂಬಂಧ ತೀರ್ಪು ಕೂಡಾ ಪ್ರಕಟವಾಗಿದೆ. ಚುನಾವಣೆ ಘೋಷಣೆ ಜೊತೆಗೇ ಸ್ಕ್ರೀನಿಂಗ್‌ ಕಮಿಟಿ ಕೂಡಾ ರಚನೆಯಾಗಿ, ಕೃಷಿಕರು ಈ ಕಮಿಟಿಗೆ ಕೋವಿ ವಿನಾಯತಿಗೆ ಅರ್ಜಿ ಸಲ್ಲಿಸಬೇಕು ಎಂದು ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ. ಹೀಗಾಗಿ ಇನ್ನು ಮುಂದೆ ಸ್ಕ್ರೀನಿಂಗ್‌ ಕಮಿಟಿಯು ಚುನಾವಣೆ ಘೋಷಣೆಯ ಜೊತೆಗೇ ರಚನೆಯಾಗಬೇಕಿದೆ.

ಚುನಾವಣಾ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರು ತೀವ್ರ ಅಸಮಾಧಾನಗೊಂಡಿದ್ದರು. ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಇಡೀ ದೇಶಕ್ಕೆ ಚುನಾವಣೆ ನಡೆಯಲು ಆಯೋಗಕ್ಕೆ ಒಂದೇ ನಿಯಮ ಇದ್ದರೂ,  ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಆಯಾ ಕ್ಷೇತ್ರ ಚುನಾವಣಾಧಿಕಾರಿಗಳಿಗೆ ಅಧಿಕಾರ  ಇರುತ್ತದೆ. ಆದರೆ ಇಲ್ಲಿ ಕೃಷಿಕರು ಕೋವಿ ಠೇವಣಾತಿ ಇರಿಸುವುದರ ಬಗ್ಗೆ ಚರ್ಚೆ ನಡೆಯುತ್ತಿತ್ತು. ಪರಿಹಾರ ಸಿಕ್ಕಿರಲಿಲ್ಲ.

ಈ ಬಗ್ಗೆ ಸುಳ್ಯ ತಾಲೂಕಿನ ಗುತ್ತಿಗಾರಿನ  ಗಂಗಾಧರ ಭಟ್‌ ಪುಚ್ಚಪ್ಪಾಡಿ ಅವರ ನೇತೃತ್ವದಲ್ಲಿ 56 ಮಂದಿ ಕೋವಿ ಲೈಸನ್ಸ್‌ ಹೊಂದಿದವರು ದಕ ಜಿಲ್ಲೆಯ ಚುನಾವಣಾಧಿಕಾರಿಗಳು ಚುನಾವಣೆಯ ಸಮಯದಲ್ಲಿ  ಹೊರಡಿಸಿದ ಆದೇಶದಲ್ಲಿ ಕಂಡುಬಂದಿರುವ ಕೋವಿ ಠೇವಣಾತಿಯ ವಿನಾಯಿತಿ ಕೃಷಿಕರಿಗೆ ಸಿಗಬೇಕು ಎಂದು ಒತ್ತಾಯಿಸಿ ಹೈಕೋರ್ಟ್‌ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಎಂ ನಾಗಪ್ರಸನ್ನ ಅವರು, ಚುನಾವಣೆಯ ಘೋಷಣೆ ಸಂದರ್ಭದಲ್ಲಿಯೇ ಸ್ಕ್ರೀನಿಂಗ್‌ ಕಮಿಟಿ ರಚನೆ ಮಾಡಿ ಕೃಷಿಕರು ಈ ಸಮಿತಿಗೆ ಅರ್ಜಿ ಸಲ್ಲಿಸಿ ವಿನಾಯಿತಿ ಪಡೆಯಬೇಕು ಹಾಗೂ ಠೇವಣಾತಿಗೆ ಸಂಬಂಧಿಸಿ ನೋಟೀಸು ಬಂದ 7 ದಿನಗಳ ಒಳಗಾಗಿ ಕೋವಿ ಠೇವಣಾತಿ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಹೀಗಾಗಿ ಇನ್ನು ಚುನಾವಣೆಯ ಸಮಯದಲ್ಲಿ ತಕ್ಷಣವೇ ಸ್ಕ್ರೀನಿಂಗ್‌ ಕಮಿಟಿ ರಚನೆಯಾಗಿ ಕೃಷಿಕರು ಅರ್ಜಿ ಸಲ್ಲಿಸುವ ವ್ಯವಸ್ಥೆ ಹಾಗೂ ಕೃಷಿಕರಿಗೆ ಕೋವಿ ಠೇವಣಾತಿ ವಿನಾಯತಿಗೆ ಅವಕಾಶ ಸಿಗಬೇಕಿದೆ.

ಕೃಷಿಕರ ಪರವಾಗಿ ಹೈಕೋರ್ಟ್‌ ನ್ಯಾಯವಾದಿ ಕೃಷ್ಣಮೂರ್ತಿ ಡಿ ವಾದಿಸಿದ್ದರು. ಸುಳ್ಯದ ನ್ಯಾಯವಾದಿ ಶಂಕರ್‌ ಕುಮಾರ್‌ ಕೆ, ಕರಿಕಳ ಸಹಕರಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

9 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

9 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

10 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

20 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

20 hours ago