ಚುನಾವಣೆ ಘೋಷಣೆಯಾಗುವ ಜೊತೆಗೇ ಕೃಷಿಕರಿಗೆ ಪ್ರತೀ ಬಾರಿಯೂ ಕೋವಿ ಡಿಪಾಸಿಟ್ ಬಗ್ಗೆ ಕಿರಿಕಿರಿ. ಕಳೆದ ಕೆಲವು ಸಮಯಗಳಿಂದ ಈ ಬಗ್ಗೆ ಕೃಷಿಕರ ವಿರೋಧ ಕೇಳಿಬರುತ್ತಿತ್ತು. ಹಾಗಿದ್ದರೂ ಯಾವುದೇ ಪರಿಹಾರ ಮಾರ್ಗಗಳು ದೊರೆತಿಲ್ಲ. ಇದೀಗ ಕೃಷಿಕರೆಲ್ಲರು ಸಭೆ ಸೇರಿ ಕೋವಿ ಠೇವಣಾತಿಯಿಂದ ವಿನಾಯಿತಿ ಸಿಗಬೇಕು ಎಂದು ಒತ್ತಾಯ ಮಂಡಿಸಿದ್ದಾರೆ.
ಸುಳ್ಯದ ಶಿವಕೃಪಾ ಕಲಾ ಮಂದಿರದಲ್ಲಿ ನಡೆದ ಸಭೆಯಲ್ಲಿ ಅನೇಕ ಕೃಷಿಕರು ಭಾಗವಹಿಸಿ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರತಿ ಚುನಾವಣೆಯ ಸಂದರ್ಭದಲ್ಲೂ ಕೋವಿ ಡೆಪಾಸಿಟ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿ ಪೊಲೀಸ್ ಇಲಾಖೆ ಒತ್ತಡ ಹೇರುವುದು ನಡೆಯುತ್ತದೆ. ಆದರೆ ನಮ್ಮ ಕೃಷಿ ಹಾನಿಯಾದರೆ ಇದಕ್ಕೆ ಏನು ಪರಿಹಾರ ಎಂಬುದಕ್ಕೆ ಯಾರಿಂದಲೂ ಉತ್ತರ ಇಲ್ಲ. ಚುನಾವಣೆಯ ಹೆಸರಿನಲ್ಲಿ ಒಂದೆರಡು ತಿಂಗಳುಗಳ ಕಾಲ ರೈತರು ತಮ್ಮ ಕೋವಿಗಳನ್ನು ಡೆಪಾಸಿಟ್ ಮಾಡಬೇಕಾದ ಪರಿಸ್ಥಿತಿ ಬರುತ್ತಿದ್ದು, ಇದರಿಂದ ಕಾಡುಪ್ರಾಣಿಗಳ ಹಾವಳಿ ಉಂಟಾಗಿ ರೈತರಿಗೆ ತೀವ್ರ ನಷ್ಟ ಉಂಟಾಗುತ್ತಿದೆ ಎಂದು ಹಲವು ಕೃಷಿಕರು ಹೇಳಿದರು. ಇಲಾಖೆಗಳಿಂದ ಇದಕ್ಕೆ ಯಾವುದೇ ರೀತಿಯ ಪರಿಹಾರವೂ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಭೆಯ ಬಳಿಕ ಸುಳ್ಯ ತಹಶೀಲ್ದಾರ್ ಮೂಲಕ ಕೋವಿ ಠೇವಣಾತಿ ವಿನಾಯಿತಿಗೆ ಮನವಿ ನೀಡಲು ನಿರ್ಧರಿಸಲಾಯಿತು.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…