ಚುನಾವಣೆ ಘೋಷಣೆಯಾಗುವ ಜೊತೆಗೇ ಕೃಷಿಕರಿಗೆ ಪ್ರತೀ ಬಾರಿಯೂ ಕೋವಿ ಡಿಪಾಸಿಟ್ ಬಗ್ಗೆ ಕಿರಿಕಿರಿ. ಕಳೆದ ಕೆಲವು ಸಮಯಗಳಿಂದ ಈ ಬಗ್ಗೆ ಕೃಷಿಕರ ವಿರೋಧ ಕೇಳಿಬರುತ್ತಿತ್ತು. ಹಾಗಿದ್ದರೂ ಯಾವುದೇ ಪರಿಹಾರ ಮಾರ್ಗಗಳು ದೊರೆತಿಲ್ಲ. ಇದೀಗ ಕೃಷಿಕರೆಲ್ಲರು ಸಭೆ ಸೇರಿ ಕೋವಿ ಠೇವಣಾತಿಯಿಂದ ವಿನಾಯಿತಿ ಸಿಗಬೇಕು ಎಂದು ಒತ್ತಾಯ ಮಂಡಿಸಿದ್ದಾರೆ.
ಸುಳ್ಯದ ಶಿವಕೃಪಾ ಕಲಾ ಮಂದಿರದಲ್ಲಿ ನಡೆದ ಸಭೆಯಲ್ಲಿ ಅನೇಕ ಕೃಷಿಕರು ಭಾಗವಹಿಸಿ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರತಿ ಚುನಾವಣೆಯ ಸಂದರ್ಭದಲ್ಲೂ ಕೋವಿ ಡೆಪಾಸಿಟ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿ ಪೊಲೀಸ್ ಇಲಾಖೆ ಒತ್ತಡ ಹೇರುವುದು ನಡೆಯುತ್ತದೆ. ಆದರೆ ನಮ್ಮ ಕೃಷಿ ಹಾನಿಯಾದರೆ ಇದಕ್ಕೆ ಏನು ಪರಿಹಾರ ಎಂಬುದಕ್ಕೆ ಯಾರಿಂದಲೂ ಉತ್ತರ ಇಲ್ಲ. ಚುನಾವಣೆಯ ಹೆಸರಿನಲ್ಲಿ ಒಂದೆರಡು ತಿಂಗಳುಗಳ ಕಾಲ ರೈತರು ತಮ್ಮ ಕೋವಿಗಳನ್ನು ಡೆಪಾಸಿಟ್ ಮಾಡಬೇಕಾದ ಪರಿಸ್ಥಿತಿ ಬರುತ್ತಿದ್ದು, ಇದರಿಂದ ಕಾಡುಪ್ರಾಣಿಗಳ ಹಾವಳಿ ಉಂಟಾಗಿ ರೈತರಿಗೆ ತೀವ್ರ ನಷ್ಟ ಉಂಟಾಗುತ್ತಿದೆ ಎಂದು ಹಲವು ಕೃಷಿಕರು ಹೇಳಿದರು. ಇಲಾಖೆಗಳಿಂದ ಇದಕ್ಕೆ ಯಾವುದೇ ರೀತಿಯ ಪರಿಹಾರವೂ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಭೆಯ ಬಳಿಕ ಸುಳ್ಯ ತಹಶೀಲ್ದಾರ್ ಮೂಲಕ ಕೋವಿ ಠೇವಣಾತಿ ವಿನಾಯಿತಿಗೆ ಮನವಿ ನೀಡಲು ನಿರ್ಧರಿಸಲಾಯಿತು.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…