ಚುನಾವಣೆ ಘೋಷಣೆಯಾಗುವ ಜೊತೆಗೇ ಕೃಷಿಕರಿಗೆ ಪ್ರತೀ ಬಾರಿಯೂ ಕೋವಿ ಡಿಪಾಸಿಟ್ ಬಗ್ಗೆ ಕಿರಿಕಿರಿ. ಕಳೆದ ಕೆಲವು ಸಮಯಗಳಿಂದ ಈ ಬಗ್ಗೆ ಕೃಷಿಕರ ವಿರೋಧ ಕೇಳಿಬರುತ್ತಿತ್ತು. ಹಾಗಿದ್ದರೂ ಯಾವುದೇ ಪರಿಹಾರ ಮಾರ್ಗಗಳು ದೊರೆತಿಲ್ಲ. ಇದೀಗ ಕೃಷಿಕರೆಲ್ಲರು ಸಭೆ ಸೇರಿ ಕೋವಿ ಠೇವಣಾತಿಯಿಂದ ವಿನಾಯಿತಿ ಸಿಗಬೇಕು ಎಂದು ಒತ್ತಾಯ ಮಂಡಿಸಿದ್ದಾರೆ.
ಸುಳ್ಯದ ಶಿವಕೃಪಾ ಕಲಾ ಮಂದಿರದಲ್ಲಿ ನಡೆದ ಸಭೆಯಲ್ಲಿ ಅನೇಕ ಕೃಷಿಕರು ಭಾಗವಹಿಸಿ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರತಿ ಚುನಾವಣೆಯ ಸಂದರ್ಭದಲ್ಲೂ ಕೋವಿ ಡೆಪಾಸಿಟ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿ ಪೊಲೀಸ್ ಇಲಾಖೆ ಒತ್ತಡ ಹೇರುವುದು ನಡೆಯುತ್ತದೆ. ಆದರೆ ನಮ್ಮ ಕೃಷಿ ಹಾನಿಯಾದರೆ ಇದಕ್ಕೆ ಏನು ಪರಿಹಾರ ಎಂಬುದಕ್ಕೆ ಯಾರಿಂದಲೂ ಉತ್ತರ ಇಲ್ಲ. ಚುನಾವಣೆಯ ಹೆಸರಿನಲ್ಲಿ ಒಂದೆರಡು ತಿಂಗಳುಗಳ ಕಾಲ ರೈತರು ತಮ್ಮ ಕೋವಿಗಳನ್ನು ಡೆಪಾಸಿಟ್ ಮಾಡಬೇಕಾದ ಪರಿಸ್ಥಿತಿ ಬರುತ್ತಿದ್ದು, ಇದರಿಂದ ಕಾಡುಪ್ರಾಣಿಗಳ ಹಾವಳಿ ಉಂಟಾಗಿ ರೈತರಿಗೆ ತೀವ್ರ ನಷ್ಟ ಉಂಟಾಗುತ್ತಿದೆ ಎಂದು ಹಲವು ಕೃಷಿಕರು ಹೇಳಿದರು. ಇಲಾಖೆಗಳಿಂದ ಇದಕ್ಕೆ ಯಾವುದೇ ರೀತಿಯ ಪರಿಹಾರವೂ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಭೆಯ ಬಳಿಕ ಸುಳ್ಯ ತಹಶೀಲ್ದಾರ್ ಮೂಲಕ ಕೋವಿ ಠೇವಣಾತಿ ವಿನಾಯಿತಿಗೆ ಮನವಿ ನೀಡಲು ನಿರ್ಧರಿಸಲಾಯಿತು.
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…