ಚುನಾವಣೆ ಘೋಷಣೆಯಾಗುವ ಜೊತೆಗೇ ಕೃಷಿಕರಿಗೆ ಪ್ರತೀ ಬಾರಿಯೂ ಕೋವಿ ಡಿಪಾಸಿಟ್ ಬಗ್ಗೆ ಕಿರಿಕಿರಿ. ಕಳೆದ ಕೆಲವು ಸಮಯಗಳಿಂದ ಈ ಬಗ್ಗೆ ಕೃಷಿಕರ ವಿರೋಧ ಕೇಳಿಬರುತ್ತಿತ್ತು. ಹಾಗಿದ್ದರೂ ಯಾವುದೇ ಪರಿಹಾರ ಮಾರ್ಗಗಳು ದೊರೆತಿಲ್ಲ. ಇದೀಗ ಕೃಷಿಕರೆಲ್ಲರು ಸಭೆ ಸೇರಿ ಕೋವಿ ಠೇವಣಾತಿಯಿಂದ ವಿನಾಯಿತಿ ಸಿಗಬೇಕು ಎಂದು ಒತ್ತಾಯ ಮಂಡಿಸಿದ್ದಾರೆ.
ಸುಳ್ಯದ ಶಿವಕೃಪಾ ಕಲಾ ಮಂದಿರದಲ್ಲಿ ನಡೆದ ಸಭೆಯಲ್ಲಿ ಅನೇಕ ಕೃಷಿಕರು ಭಾಗವಹಿಸಿ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರತಿ ಚುನಾವಣೆಯ ಸಂದರ್ಭದಲ್ಲೂ ಕೋವಿ ಡೆಪಾಸಿಟ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿ ಪೊಲೀಸ್ ಇಲಾಖೆ ಒತ್ತಡ ಹೇರುವುದು ನಡೆಯುತ್ತದೆ. ಆದರೆ ನಮ್ಮ ಕೃಷಿ ಹಾನಿಯಾದರೆ ಇದಕ್ಕೆ ಏನು ಪರಿಹಾರ ಎಂಬುದಕ್ಕೆ ಯಾರಿಂದಲೂ ಉತ್ತರ ಇಲ್ಲ. ಚುನಾವಣೆಯ ಹೆಸರಿನಲ್ಲಿ ಒಂದೆರಡು ತಿಂಗಳುಗಳ ಕಾಲ ರೈತರು ತಮ್ಮ ಕೋವಿಗಳನ್ನು ಡೆಪಾಸಿಟ್ ಮಾಡಬೇಕಾದ ಪರಿಸ್ಥಿತಿ ಬರುತ್ತಿದ್ದು, ಇದರಿಂದ ಕಾಡುಪ್ರಾಣಿಗಳ ಹಾವಳಿ ಉಂಟಾಗಿ ರೈತರಿಗೆ ತೀವ್ರ ನಷ್ಟ ಉಂಟಾಗುತ್ತಿದೆ ಎಂದು ಹಲವು ಕೃಷಿಕರು ಹೇಳಿದರು. ಇಲಾಖೆಗಳಿಂದ ಇದಕ್ಕೆ ಯಾವುದೇ ರೀತಿಯ ಪರಿಹಾರವೂ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಭೆಯ ಬಳಿಕ ಸುಳ್ಯ ತಹಶೀಲ್ದಾರ್ ಮೂಲಕ ಕೋವಿ ಠೇವಣಾತಿ ವಿನಾಯಿತಿಗೆ ಮನವಿ ನೀಡಲು ನಿರ್ಧರಿಸಲಾಯಿತು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…