ಚುನಾವಣೆ ಘೋಷಣೆಯಾಗುವ ಜೊತೆಗೇ ಕೃಷಿಕರಿಗೆ ಪ್ರತೀ ಬಾರಿಯೂ ಕೋವಿ ಡಿಪಾಸಿಟ್ ಬಗ್ಗೆ ಕಿರಿಕಿರಿ. ಕಳೆದ ಕೆಲವು ಸಮಯಗಳಿಂದ ಈ ಬಗ್ಗೆ ಕೃಷಿಕರ ವಿರೋಧ ಕೇಳಿಬರುತ್ತಿತ್ತು. ಹಾಗಿದ್ದರೂ ಯಾವುದೇ ಪರಿಹಾರ ಮಾರ್ಗಗಳು ದೊರೆತಿಲ್ಲ. ಇದೀಗ ಕೃಷಿಕರೆಲ್ಲರು ಸಭೆ ಸೇರಿ ಕೋವಿ ಠೇವಣಾತಿಯಿಂದ ವಿನಾಯಿತಿ ಸಿಗಬೇಕು ಎಂದು ಒತ್ತಾಯ ಮಂಡಿಸಿದ್ದಾರೆ.
ಸುಳ್ಯದ ಶಿವಕೃಪಾ ಕಲಾ ಮಂದಿರದಲ್ಲಿ ನಡೆದ ಸಭೆಯಲ್ಲಿ ಅನೇಕ ಕೃಷಿಕರು ಭಾಗವಹಿಸಿ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರತಿ ಚುನಾವಣೆಯ ಸಂದರ್ಭದಲ್ಲೂ ಕೋವಿ ಡೆಪಾಸಿಟ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿ ಪೊಲೀಸ್ ಇಲಾಖೆ ಒತ್ತಡ ಹೇರುವುದು ನಡೆಯುತ್ತದೆ. ಆದರೆ ನಮ್ಮ ಕೃಷಿ ಹಾನಿಯಾದರೆ ಇದಕ್ಕೆ ಏನು ಪರಿಹಾರ ಎಂಬುದಕ್ಕೆ ಯಾರಿಂದಲೂ ಉತ್ತರ ಇಲ್ಲ. ಚುನಾವಣೆಯ ಹೆಸರಿನಲ್ಲಿ ಒಂದೆರಡು ತಿಂಗಳುಗಳ ಕಾಲ ರೈತರು ತಮ್ಮ ಕೋವಿಗಳನ್ನು ಡೆಪಾಸಿಟ್ ಮಾಡಬೇಕಾದ ಪರಿಸ್ಥಿತಿ ಬರುತ್ತಿದ್ದು, ಇದರಿಂದ ಕಾಡುಪ್ರಾಣಿಗಳ ಹಾವಳಿ ಉಂಟಾಗಿ ರೈತರಿಗೆ ತೀವ್ರ ನಷ್ಟ ಉಂಟಾಗುತ್ತಿದೆ ಎಂದು ಹಲವು ಕೃಷಿಕರು ಹೇಳಿದರು. ಇಲಾಖೆಗಳಿಂದ ಇದಕ್ಕೆ ಯಾವುದೇ ರೀತಿಯ ಪರಿಹಾರವೂ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಭೆಯ ಬಳಿಕ ಸುಳ್ಯ ತಹಶೀಲ್ದಾರ್ ಮೂಲಕ ಕೋವಿ ಠೇವಣಾತಿ ವಿನಾಯಿತಿಗೆ ಮನವಿ ನೀಡಲು ನಿರ್ಧರಿಸಲಾಯಿತು.
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…
ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…
ಕಾಕ್ರೋಚ್ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…
ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…