ಚುನಾವಣೆ ಘೋಷಣೆಯಾಗುವ ಜೊತೆಗೇ ಕೃಷಿಕರಿಗೆ ಪ್ರತೀ ಬಾರಿಯೂ ಕೋವಿ ಡಿಪಾಸಿಟ್ ಬಗ್ಗೆ ಕಿರಿಕಿರಿ. ಕಳೆದ ಕೆಲವು ಸಮಯಗಳಿಂದ ಈ ಬಗ್ಗೆ ಕೃಷಿಕರ ವಿರೋಧ ಕೇಳಿಬರುತ್ತಿತ್ತು. ಹಾಗಿದ್ದರೂ ಯಾವುದೇ ಪರಿಹಾರ ಮಾರ್ಗಗಳು ದೊರೆತಿಲ್ಲ. ಇದೀಗ ಕೃಷಿಕರೆಲ್ಲರು ಸಭೆ ಸೇರಿ ಕೋವಿ ಠೇವಣಾತಿಯಿಂದ ವಿನಾಯಿತಿ ಸಿಗಬೇಕು ಎಂದು ಒತ್ತಾಯ ಮಂಡಿಸಿದ್ದಾರೆ.
ಸುಳ್ಯದ ಶಿವಕೃಪಾ ಕಲಾ ಮಂದಿರದಲ್ಲಿ ನಡೆದ ಸಭೆಯಲ್ಲಿ ಅನೇಕ ಕೃಷಿಕರು ಭಾಗವಹಿಸಿ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರತಿ ಚುನಾವಣೆಯ ಸಂದರ್ಭದಲ್ಲೂ ಕೋವಿ ಡೆಪಾಸಿಟ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿ ಪೊಲೀಸ್ ಇಲಾಖೆ ಒತ್ತಡ ಹೇರುವುದು ನಡೆಯುತ್ತದೆ. ಆದರೆ ನಮ್ಮ ಕೃಷಿ ಹಾನಿಯಾದರೆ ಇದಕ್ಕೆ ಏನು ಪರಿಹಾರ ಎಂಬುದಕ್ಕೆ ಯಾರಿಂದಲೂ ಉತ್ತರ ಇಲ್ಲ. ಚುನಾವಣೆಯ ಹೆಸರಿನಲ್ಲಿ ಒಂದೆರಡು ತಿಂಗಳುಗಳ ಕಾಲ ರೈತರು ತಮ್ಮ ಕೋವಿಗಳನ್ನು ಡೆಪಾಸಿಟ್ ಮಾಡಬೇಕಾದ ಪರಿಸ್ಥಿತಿ ಬರುತ್ತಿದ್ದು, ಇದರಿಂದ ಕಾಡುಪ್ರಾಣಿಗಳ ಹಾವಳಿ ಉಂಟಾಗಿ ರೈತರಿಗೆ ತೀವ್ರ ನಷ್ಟ ಉಂಟಾಗುತ್ತಿದೆ ಎಂದು ಹಲವು ಕೃಷಿಕರು ಹೇಳಿದರು. ಇಲಾಖೆಗಳಿಂದ ಇದಕ್ಕೆ ಯಾವುದೇ ರೀತಿಯ ಪರಿಹಾರವೂ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಭೆಯ ಬಳಿಕ ಸುಳ್ಯ ತಹಶೀಲ್ದಾರ್ ಮೂಲಕ ಕೋವಿ ಠೇವಣಾತಿ ವಿನಾಯಿತಿಗೆ ಮನವಿ ನೀಡಲು ನಿರ್ಧರಿಸಲಾಯಿತು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…