Advertisement
ಸುದ್ದಿಗಳು

ಚುನಾವಣಾ ಕಣ | ಕೃಷಿ ರಕ್ಷಣೆಯ ಕೋವಿ ಠೇವಣಿಗೆ ವಿನಾಯಿತಿ ನೀಡಲು ಕೃಷಿಕರ ಒತ್ತಾಯ

Share

ಚುನಾವಣೆ ಘೋಷಣೆಯಾದ ತಕ್ಷಣವೇ ಕೃಷಿ ರಕ್ಷಣೆಯ ಬಂದೂಕು ಡಿಪಾಸಿಟ್ ಇಡಲು ಪೊಲಿಸ್ ಇಲಾಖೆಯಿಂದ ಕೃಷಿಕರಿಗೆ ಸೂಚನೆ ಬರುತ್ತಿದೆ. ಕೃಷಿ ರಕ್ಷಣೆಯ ಬಂದೂಕುಗಳನ್ನು ಠೇವಣಿ ಇಡುವುದಕ್ಕೆ ವಿನಾಯಿತಿ ನೀಡಬೇಕು ಎಂದು ಕೃಷಿಕರು ಜಿಲ್ಲಾಡಳಿತ ಹಾಗೂ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಪ್ರಜಾಪ್ರಭುತ್ವ ದೇಶದಲ್ಲಿ ವರ್ಷ ವರ್ಷವೂ ಒಂದಲ್ಲ ಒಂದು ಚುನಾವಣೆ ಇದೆ. ಪ್ರತಿ ಬಾರಿಯೂ ಚುನಾವಣೆ ನಡೆಯುವ ಹಂತದಲ್ಲಿ ಠೇವಣಿ ಇಟ್ಟಲ್ಲಿ ನಮ್ಮ ಬೆಳೆರಕ್ಷಣಾ ಉದ್ದೇಶಕ್ಕೆ ಕೊಟ್ಟ ಕೋವಿಯಿಂದ ಪ್ರಯೋಜನವೇನು? ಬೆಳೆ ರಕ್ಷಣೆ ಬಿಟ್ಟು ಇನ್ನು ಯಾವುದೇ ಉದ್ದೇಶಕ್ಕೆ ತನ್ನ ಬಂದೂಕನ್ನು ಬಳಸಬಾರದೆಂಬ ಸ್ಪಷ್ಟ ಕಲ್ಪನೆಯೂ, ಜವಾಬ್ದಾರಿಯೂ ಕೃಷಿಕರಲ್ಲಿದೆ. ಹಾಗೊಂದು ವೇಳೆ ಅಪರಾಧಿ ಹಿನ್ನೆಲೆ ಇದ್ದವರಿಗೆ, ಅಥವಾ ಅಪರಾಧಕ್ಕೆ ಬಳಸಿಕೊಂಡವರಿಗೆ ಈ ಮಾನದಂಡ ಅಳವಡಿಸಿದ್ದರೆ ಅದಕ್ಕೊಂದು ಅರ್ಥವಿದೆ, ಆದರೆ ಪರವಾನಗಿದಾರ ರೈತರೆಲ್ಲರೂ ಚುನಾವಣಾ ಅಪರಾಧಕ್ಕೆ ತನ್ನ ಬಂದೂಕನ್ನು ಬಳಸುತ್ತಾರೆ ಎಂಬಂತೆ ಘೋಷಣೆಯಾದ ದಿನವೇ ಬಂದೂಕನ್ನು ಠೇವಣಿ ಇರಿಸುವ ಸೂಚನೆಯನ್ನು ಹೊರಡಿಸುವುದು ಸರಿಯಲ್ಲ ಎಂಬುದು ಕೃಷಿಕರ ಬೇಡಿಕೆ.

ಯಾವ ಕಾರಣಕ್ಕೂ ಬೆಳೆ ರಕ್ಷಣೆಗೆ ನೀಡಿದ ಬಂದೂಕನ್ನು ಠೇವಣಿ ಇಡಲು ಹೇಳಬೇಡಿ. ರೈತರದ ನಾವು ಬೆಳೆ ರಕ್ಷಣೆಗಲ್ಲದೆ ಯಾವುದೇ ಅಪರಾಧ ಪ್ರಕ್ರಿಯೆಗೆ ಬಳಸುವುದಿಲ್ಲ ಮತ್ತು ಬಳಸಬಾರದೆಂಬ ಎಂಬ ಸಂಪೂರ್ಣ ಎಚ್ಚರಿಕೆ ನಮಗಿದೆ. ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ. ಬಂದೂಕು ಠೇವಣಿ ಇಡುವ ಮತ್ತೆ ತರುವ ಈ ಎಲ್ಲಾ ಸಮಸ್ಯೆಗಳಿಂದ ಪಾರು ಮಾಡಿ ಎಂದು ಮನವಿ ಮಾಡಿದ್ದಾರೆ.

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಕೃಷಿಕರ ಪರವಾಗಿ ಸಂಘ ಮಹಾಸಭೆಯಲ್ಲಿ ಕೃಷಿಕರ ಬೇಡಿಕೆಯನ್ನು ಮನ್ನಿಸಿ ಜಿಲ್ಲಾಡಳಿತಕ್ಕೆ ಈಗಾಗಲೇ ಒತ್ತಾಯ ಮಾಡಿದೆ. ತಕ್ಷಣವೇ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

4 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

11 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago