Advertisement
ಸುದ್ದಿಗಳು

ಚುನಾವಣಾ ಕಣ | ಕೃಷಿ ರಕ್ಷಣೆಯ ಕೋವಿ ಠೇವಣಿಗೆ ವಿನಾಯಿತಿ ನೀಡಲು ಕೃಷಿಕರ ಒತ್ತಾಯ

Share

ಚುನಾವಣೆ ಘೋಷಣೆಯಾದ ತಕ್ಷಣವೇ ಕೃಷಿ ರಕ್ಷಣೆಯ ಬಂದೂಕು ಡಿಪಾಸಿಟ್ ಇಡಲು ಪೊಲಿಸ್ ಇಲಾಖೆಯಿಂದ ಕೃಷಿಕರಿಗೆ ಸೂಚನೆ ಬರುತ್ತಿದೆ. ಕೃಷಿ ರಕ್ಷಣೆಯ ಬಂದೂಕುಗಳನ್ನು ಠೇವಣಿ ಇಡುವುದಕ್ಕೆ ವಿನಾಯಿತಿ ನೀಡಬೇಕು ಎಂದು ಕೃಷಿಕರು ಜಿಲ್ಲಾಡಳಿತ ಹಾಗೂ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಪ್ರಜಾಪ್ರಭುತ್ವ ದೇಶದಲ್ಲಿ ವರ್ಷ ವರ್ಷವೂ ಒಂದಲ್ಲ ಒಂದು ಚುನಾವಣೆ ಇದೆ. ಪ್ರತಿ ಬಾರಿಯೂ ಚುನಾವಣೆ ನಡೆಯುವ ಹಂತದಲ್ಲಿ ಠೇವಣಿ ಇಟ್ಟಲ್ಲಿ ನಮ್ಮ ಬೆಳೆರಕ್ಷಣಾ ಉದ್ದೇಶಕ್ಕೆ ಕೊಟ್ಟ ಕೋವಿಯಿಂದ ಪ್ರಯೋಜನವೇನು? ಬೆಳೆ ರಕ್ಷಣೆ ಬಿಟ್ಟು ಇನ್ನು ಯಾವುದೇ ಉದ್ದೇಶಕ್ಕೆ ತನ್ನ ಬಂದೂಕನ್ನು ಬಳಸಬಾರದೆಂಬ ಸ್ಪಷ್ಟ ಕಲ್ಪನೆಯೂ, ಜವಾಬ್ದಾರಿಯೂ ಕೃಷಿಕರಲ್ಲಿದೆ. ಹಾಗೊಂದು ವೇಳೆ ಅಪರಾಧಿ ಹಿನ್ನೆಲೆ ಇದ್ದವರಿಗೆ, ಅಥವಾ ಅಪರಾಧಕ್ಕೆ ಬಳಸಿಕೊಂಡವರಿಗೆ ಈ ಮಾನದಂಡ ಅಳವಡಿಸಿದ್ದರೆ ಅದಕ್ಕೊಂದು ಅರ್ಥವಿದೆ, ಆದರೆ ಪರವಾನಗಿದಾರ ರೈತರೆಲ್ಲರೂ ಚುನಾವಣಾ ಅಪರಾಧಕ್ಕೆ ತನ್ನ ಬಂದೂಕನ್ನು ಬಳಸುತ್ತಾರೆ ಎಂಬಂತೆ ಘೋಷಣೆಯಾದ ದಿನವೇ ಬಂದೂಕನ್ನು ಠೇವಣಿ ಇರಿಸುವ ಸೂಚನೆಯನ್ನು ಹೊರಡಿಸುವುದು ಸರಿಯಲ್ಲ ಎಂಬುದು ಕೃಷಿಕರ ಬೇಡಿಕೆ.

ಯಾವ ಕಾರಣಕ್ಕೂ ಬೆಳೆ ರಕ್ಷಣೆಗೆ ನೀಡಿದ ಬಂದೂಕನ್ನು ಠೇವಣಿ ಇಡಲು ಹೇಳಬೇಡಿ. ರೈತರದ ನಾವು ಬೆಳೆ ರಕ್ಷಣೆಗಲ್ಲದೆ ಯಾವುದೇ ಅಪರಾಧ ಪ್ರಕ್ರಿಯೆಗೆ ಬಳಸುವುದಿಲ್ಲ ಮತ್ತು ಬಳಸಬಾರದೆಂಬ ಎಂಬ ಸಂಪೂರ್ಣ ಎಚ್ಚರಿಕೆ ನಮಗಿದೆ. ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ. ಬಂದೂಕು ಠೇವಣಿ ಇಡುವ ಮತ್ತೆ ತರುವ ಈ ಎಲ್ಲಾ ಸಮಸ್ಯೆಗಳಿಂದ ಪಾರು ಮಾಡಿ ಎಂದು ಮನವಿ ಮಾಡಿದ್ದಾರೆ.

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಕೃಷಿಕರ ಪರವಾಗಿ ಸಂಘ ಮಹಾಸಭೆಯಲ್ಲಿ ಕೃಷಿಕರ ಬೇಡಿಕೆಯನ್ನು ಮನ್ನಿಸಿ ಜಿಲ್ಲಾಡಳಿತಕ್ಕೆ ಈಗಾಗಲೇ ಒತ್ತಾಯ ಮಾಡಿದೆ. ತಕ್ಷಣವೇ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

13 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

13 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

2 days ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

2 days ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago